ಮಳೆ; ತರೀಕೆರೆ ತಾಲೂಕಲ್ಲಿ ಭಾರೀ ಹಾನಿ


Team Udayavani, May 6, 2020, 11:30 AM IST

5-May-26

ಸಾಂದರ್ಭಿಕ ಚಿತ್ರ

ತರೀಕೆರೆ: ಸೋಮವಾರ ಸಂಜೆ 5 ಗಂಟೆ ಸಮಯದಲ್ಲಿ ಸುರಿದ ಮಳೆ, ಗಾಳಿಗೆ ಕಸಬಾ, ಲಕ್ಕವಳ್ಳಿ ಮತ್ತು ತರೀಕೆರೆ ಪಟ್ಟಣದಲ್ಲಿ ಭಾರೀ ಹಾನಿ ಸಂಭವಿಸಿದೆ. 10 ನಿಮಿಷಗಳ ಕಾಲ ಬೀಸಿದ ಬಿರುಗಾಳಿಗೆ ರೈತರು ಕಂಗಾಲಾಗಿದ್ದಾರೆ. ಸಿದ್ದರಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ 5000ಕ್ಕೂ ಹೆಚ್ಚು ಅಡಿ‌ಕೆ ಮರಗಳು ಧರಶಾಹಿಯಾಗಿವೆ.

ನೂರಾರು ತೆಂಗಿನ ಮರಗಳು ಬುಡ ಸಮೇತ ತೋಟದಲ್ಲಿ ನೆಲ ಕಚ್ಚಿವೆ. ಲಕ್ಕವಳ್ಳಿ ಮತ್ತು ಕಸಬಾದಲ್ಲಿ ಬೆಳೆದು ನಿಂತಿದ್ದ ಎಕರೆಗಟ್ಟಲೆ ಬಾಳೆಗಿಡ ನೆಲಕ್ಕೆ ಬಾಗಿದೆ. ನೂರಾರು ಕೋಟಿ ಬೆಲೆ ಬಾಳುವ ಅಡಕೆ, ತೆಂಗು, ಬಾಳೆ, ಮಾವು ಮತ್ತು ಸಾಗವಾನಿ ನಲಕ್ಕೆ ಉರುಳಿವೆ, ಗುಡುಗು, ಮಿಂಚು, ಸಿಡಿಲು, ಆಲಿಕಲ್ಲು ಸಹಿತ ಬೀಸಿದ ಬಿರುಗಾಳಿ ರೈತರು ತತ್ತರಿಸಿ ಹೋಗಿದ್ದಾರೆ.

ಗ್ರಾಪಂ ಸದಸ್ಯ ವಾಸು ಅವರ ತೋಟದಲ್ಲಿ 1200 ಕ್ಕೂ ಹೆಚ್ಚು ಮರಗಳು, ಚೆನ್ನಾಪುರ ಚಂದ್ರಶೇಖರ್‌ ಅವರ ತೋಟದಲ್ಲಿ 500ಕ್ಕೂ ಹೆಚ್ಚು, ಅಶೋಕ ಅವರ ತೋಟದಲ್ಲಿ 700ಕ್ಕೂ ಹೆಚ್ಚು, ಬಿ.ಎಸ್‌. ನಂಜುಂಡಪ್ಪ ಅವರ ತೋಟದಲ್ಲಿ ನೂರಾರು, ಬಿ.ರಾಜಪ್ಪ ಅವರ ತೋಟದಲ್ಲಿ 150ಕ್ಕೂ ಹೆಚ್ಚು ಫಸಲು ನೀಡುತ್ತಿದ್ದ ಅಡಕೆ ಮರಗಳು ಚಿಂದಿಯಾಗಿ ಧರೆಶಾಹಿಯಾಗಿವೆ.

ಜೀವಮಾನದಲ್ಲಿಯೇ ಇಂತಹ ಗಾಳಿ ಮಳೆ ನೋಡಿರಲಿಲ್ಲ ಎನ್ನುತ್ತಾರೆ ರೈತರು. ಮೊದಲ ಬಾರಿಗೆ ಈ ಭಾಗದಲ್ಲಿ ಇಂತಹ ಅನಾಹುತ ಸೃಷ್ಟಿಯಾಗಿದೆ. ಸಿದ್ದರಹಳ್ಳಿ, ದುಗ್ಲಾಪುರ, ಸ್ಟೇಷನ್‌ ದುಗ್ಲಾಪುರ, ಎಲುಗೆರೆ ಇನ್ನಿತರ ಗ್ರಾಮಗಳಲ್ಲಿ ಮೇಲ್ಛಾವಣಿ ಹೊದಿಸಿದ್ದ ಹಂಚು, ತಗಡಗಳು ಹಾರಿ ಹೋಗಿವೆ. ಗೃಹಪ್ರವೇಶಕ್ಕೆ ಸಿದ್ಧವಾಗಿದ್ದ ಮನೆ ಮೇಲಿನ ಚಾವಣಿ ಹಂಚು ಹಾರಿ ಅಕ್ಕ ಪಕ್ಕದ ಮನೆ ಮೇಲೆ ಬಿದ್ದು ಇನ್ನಷ್ಟು ಅನಾಹುತಕ್ಕೆ ಕಾರಣವಾಗಿದೆ. ಗಾಳಿಯ ವೇಗಕ್ಕೆ ತೆಂಗಿನ ಗರಿಗಳು ನೂರಾರು ಅಡಿ ಹಾರಿ ಹೋಗಿವೆ.

ತರೀಕೆರೆ ಪಟ್ಟಣದಲ್ಲಿ ಹಲವಾರು ಕಡೆ ಮರಗಳು ನೆಲಕಚ್ಚಿದ್ದು, ಬಯಲು ರಂಗಮಂದಿರಲ್ಲಿ ಮರವೊಂದು ಬಿದ್ದು ಸ್ಕಾರ್ಪಿಯೋ ವಾಹನ ತೀವ್ರ ಜಖಂಗೊಂಡಿದೆ. ಪೊಲೀಸ್‌ ಕ್ವಾರ್ಟಸ್‌ ಮುಂಭಾಗದಲ್ಲಿ ನಿಲ್ಲಿಸಿದ್ದ ಮಾರುತಿ ಓಮ್ನಿ ಮೇಲೆ ಮರದ ಕೊಂಬೆ ಬಿದ್ದು ಭಾಗಶಃ ಜಖಂಗೊಂಡಿದೆ. ಲಕ್ಕವಳ್ಳಿ ರಸ್ತೆಯಲ್ಲಿ ಅಲ್ಲಲ್ಲಿ ಸಾಲುಮರಗಳ ಕೊಂಬೆಗಳು ಮುರಿದು ಬಿದ್ದಿವೆ ಸ್ಥಳಕ್ಕೆ ಶಾಸಕ ಡಿ.ಎಸ್‌.ಸುರೇಶ್‌ ಭೇಟಿ ನೀಡಿ ತೋಟದಲ್ಲಿ ಉಂಟಾಗಿರುವ ಅನಾಹುತಗಳನ್ನು ಪರಿಶೀಲನೆ ನಡೆಸಿದರು.

ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಂದಾಯ ಮತ್ತು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಜಂಟೀ ಸರ್ವೇ ನಡೆಸಿ ರೈತರಿಗೆ ಉಂಟಾಗಿರುವ ನಷ್ಟದ ಪ್ರಮಾಣವನ್ನು ಗುರುತಿಸಿ ವರದಿ ತಯಾರಿಸಬೇಕು. ವರದಿ ಬಂದ ನಂತರ ಸರಕಾರದೊಡನೆ ಚರ್ಚೆ ನಡೆಸಿ ಅವರಿಗೆ ಪರಿಹಾರ ನೀಡಲಾಗುವುದು. ರೈತರು ಅಧಿಕಾರಿಗಳಿಗೆ ಸಮರ್ಪಕ ಮಾಹಿತಿ ನೀಡಬೇಕು ಎಂದರು. ಶಾಸಕರ ಜೊತೆಯಲ್ಲಿ ಉಪ ವಿಭಾಗಾಧಿಕಾರಿ ರೇಣುಕಾಪ್ರಸಾದ್‌, ತಹಶೀಲ್ದಾರ್‌ ಸಿ.ಜಿ.ಗೀತಾ, ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಯತಿರಾಜ್‌, ಸೋಮಶೇಖರ್‌ ಇನ್ನಿತರರು ಇದ್ದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.