ಮಲೆನಾಡಿಗೆ ಬರುವ ಪ್ರಯಾಣಿಕರ ಸಂಖ್ಯೆ ಹೆಚ್ಚಳ

ತುರ್ತು ಇದ್ದವರಿಗೆ ಮಾತ್ರ ಪಾಸ್‌ ನೀಡಲು ಆಗ್ರಹ

Team Udayavani, May 6, 2020, 12:45 PM IST

Udayavani Kannada Newspaper

ಕೊಟ್ಟಿಗೆಹಾರ: ರೆಡ್‌ ಜೋನ್‌ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಜಿಲ್ಲೆ ಚಿಕ್ಕಮಗಳೂರು ಹಸಿರು ವಲಯದಲ್ಲಿದ್ದರೂ ಆನ್‌ಲೈನ್‌ ಪಾಸ್‌ ಬಳಸಿ ದಕ್ಷಿಣ ಕನ್ನಡದಿಂದ ಚಿಕ್ಕಮಗಳೂರು ಗಡಿಯೊಳಗೆ ನೂರಾರು ಸಂಖ್ಯೆಯಲ್ಲಿ ಪ್ರಯಾಣಿಕರು ಪ್ರವೇಶಿಸುತ್ತಿರುವುದು ಜಿಲ್ಲೆಯ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

ಮಂಗಳವಾರ ಬೆಳಗ್ಗೆಯಿಂದ ಕೊಟ್ಟಿಗೆಹಾರದ ಚೆಕ್‌ ಪೋಸ್ಟ್‌ನಲ್ಲಿ ಆನ್‌ಲೈನ್‌ ಪಾಸ್‌ ಮೂಲಕ ಜಿಲ್ಲೆಗೆ ಬಂದ 200 ಕ್ಕೂ ಹೆಚ್ಚು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಹೀಗೆ ರೆಡ್‌ಜೋನ್‌ ಏರಿಯಾದ ಪ್ರಯಾಣಿಕರನ್ನು ದೊಡ್ಡ ಸಂಖ್ಯೆಯಲ್ಲಿ ಬಿಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಆರೋಗ್ಯ ಸೇವೆ, ಹೆರಿಗೆ, ನಿಧನ ಮುಂತಾದ ತುರ್ತು ಸಂದರ್ಭದಲಿರುವ ಪ್ರಯಾಣಿಕರಿಗೆ ಮಾತ್ರ ಪಾಸ್‌ ಗಳನ್ನು ನೀಡಬೇಕು. ಆನ್‌ಲೈನ್‌ನಲ್ಲಿ ಪಾಸ್‌ ನೀಡದೇ ನೇರವಾಗಿ ಗ್ರಾಪಂ ಮಟ್ಟದ ಅಧಿಕಾರಿಗಳು ಅಥವಾ ಪೊಲೀಸ್‌ ಠಾಣೆಯ ಮೂಲಕ ಪಾರದರ್ಶಕವಾಗಿ ಪರಿಶೀಲಿಸಿ ಪಾಸ್‌ ವಿತರಿಸಬೇಕು ಎಂದು ಕೊಟ್ಟಿಗೆಹಾರದ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಕೊಟ್ಟಿಗೆಹಾರದ ಹೃದಯ ಭಾಗದಲ್ಲಿರುವ ಚೆಕ್‌ ಪೋಸ್ಟ್‌ನಲ್ಲಿ ದಕ್ಷಿಣ ಕನ್ನಡ ಭಾಗದಿಂದ ಬರುವ ಪ್ರವಾಸಿಗರು ತಮ್ಮ ವಾಹನದಿಂದ ಇಳಿದು ಚೆಕ್‌ ಪೋಸ್ಟ್‌ ಬಳಿ ಬರುತ್ತಾರೆ. ಪ್ರತಿಯೊಂದು ವಾಹನವನ್ನು ತಪಾಸಣೆ ನಡೆಸಿ ಪ್ರಯಾಣಿಕರ ಮಾಹಿತಿಯನ್ನು ಪಡೆದು ಬಿಡಬೇಕಾಗುವುದರಿಂದ ಸಾಲುಗಟ್ಟಿ ನಿಂತ ವಾಹನಗಳಲ್ಲಿ ಇರುವ ಪ್ರಯಾಣಿಕರು ವಾಹನದಿಂದ ಇಳಿದು ಅಡಾಡುತ್ತಿರುವುದು ಕಂಡು ಬರುತ್ತಿದೆ. ಚೆಕ್‌ಪೋಸ್ಟ್‌ ಸುತ್ತಮುತ್ತ ಸಮೀಪದಲ್ಲೇ ಮನೆ ಹಾಗೂ ಅಂಗಡಿ ಮುಂಗಟ್ಟುಗಳಿದ್ದು ಪ್ರಯಾಣಿಕರಲ್ಲಿ ಯಾರಾದರೂ ಸೋಂಕಿತರಿದ್ದಲ್ಲಿ ಸ್ಥಳೀಯರಿಗೆ ಸೋಂಕು ಹರಡುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಕೊಟ್ಟಿಗೆಹಾರದ ಹೃದಯಭಾಗದಲ್ಲಿರುವ ಚೆಕ್‌ಪೋಸ್ಟ್‌ ಅನ್ನು ಕೊಟ್ಟಿಗೆಹಾರದ ಗಡಿಭಾಗಕ್ಕೆ ಸ್ಥಳಾಂತರಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ದಕ್ಷಿಣಕನ್ನಡ ಭಾಗದಿಂದ ಮಲೆನಾಡಿಗೆ ಬರುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು. ತುರ್ತು ಸಂದರ್ಭದಲ್ಲಿ ಮಾತ್ರ ಪಾಸ್‌ ನೀಡಬೇಕು. ಕರಾವಳಿಗೆ ಮಲೆನಾಡಿನಿಂದ ದಿನವೊಂದಕ್ಕೆ 200 ಕ್ಕೂ ಹೆಚ್ಚು ತರಕಾರಿ ವಾಹನಗಳು ಸಂಚರಿಸುತ್ತವೆ. ಕರಾವಳಿಯ ಅಂಗಡಿಗಳಿಗೆ ತರಕಾರಿ ಕೊಂಡೊಯ್ಯುವ ವಾಹನಗಳ ಬದಲು ನೇರವಾಗಿ ದಕ್ಷಿಣ ಕನ್ನಡದ ಎಪಿಎಂಸಿಗೆ ದೊಡ್ಡ ವಾಹನಗಳಲ್ಲಿ ತರಕಾರಿಗಳನ್ನು ಸಾಗಿಸಬೇಕು. ಇದರಿಂದ ಹೆಚ್ಚಿನ ವಾಹನ ಸಂಚಾರವಾಗುವುದು ಕಡಿಮೆಯಾಗುತ್ತದೆ. ಕೊಟ್ಟಿಗೆಹಾರ ಚೆಕ್‌ಪೋಸ್ಟ್‌ ಕೊಟ್ಟಿಗೆಹಾರ ಹೃದಯ ಭಾಗದಲ್ಲಿದ್ದು ಚೆಕ್‌ಪೋಸ್ಟನ್ನು ಗಡಿಭಾಗಕ್ಕೆ ಸ್ಥಳಾಂತರಿಸಬೇಕು. ರೆಡ್‌ ಜೋನ್‌ ಏರಿಯಾವಾದ ದಕ್ಷಿಣ ಕನ್ನಡದಿಂದ ಹೆಚ್ಚು ಪ್ರಯಾಣಿಕರು ಬರುತ್ತಿದ್ದು ತುರ್ತು ಇದ್ದವರಿಗೆ ಮಾತ್ರ ಪಾಸ್‌ ನೀಡಬೇಕು ಎಂದು ಸ್ಥಳೀಯರಾದ ಆದರ್ಶ್‌ ಬಾಳೂರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.