ನಿಯಮ ಉಲ್ಲಂಘನೆ: ಬೆತ್ತ ಹಿಡಿದ ನಗರಸಭೆ ನೌಕರರು
Team Udayavani, May 6, 2020, 6:12 PM IST
ಕೊಪ್ಪಳ: ಕೊಪ್ಪಳದಲ್ಲಿ ಲಾಕ್ ಡೌನ್ ಉಲ್ಲಂಘಿಸಿದ ಜನರಿಗೆ ನಗರಸಭೆ ಅಧಿಕಾರಿಗಳೇ ಬಿಸಿ ಮುಟ್ಟಿಸಲು ಬೆತ್ತದ ರುಚಿ ತೋರಿಸುತ್ತಿದ್ದಾರೆ. ಮಂಗಳವಾರ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಸಾಮಾಜಿಕ ಅಂತರ ಕಾಪಾಡಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಜನತೆಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಲಾಕ್ಡೌನ್ ಜಾರಿಯಿದ್ದು, ಈ ಮಧ್ಯೆಯೂ ಸರ್ಕಾರವು ಕೆಲವೊಂದು ವಿನಾಯತಿ ನೀಡಿದೆ. ಅಲ್ಲದೇ, ಜಿಲ್ಲೆಯು ಗ್ರೀನ್ ಜೋನ್ ನಲ್ಲಿರುವುದರಿಂದ ಸರ್ಕಾರವು ಹೆಚ್ಚು ಕಾರ್ಯ ಚಟುವಟಿಕೆ ಕೈಗೊಳ್ಳಲು ಅಸ್ತು ಎಂದಿದೆ. ಹೀಗಾಗಿ ಜನತೆ ನಗರ ಪ್ರದೇಶಕ್ಕೆ ಆಗಮಿಸಿ, ನಿತ್ಯದ ವಹಿವಾಟಿನಲ್ಲಿ ಪಾಲ್ಗೊಂಡಿದೆ. ಹಲವು ಅಂಗಡಿ ಮುಂಗಟ್ಟುಗಳ ಮುಂದೆ ಜನರು ಸಾಮಾಜಿಕ ಅಂತರವನ್ನೂ ಮರೆತು ನಿಲ್ಲುತ್ತಿರುವುದರಿಂದ ಪೊಲೀಸರು ಅವರಿಗೆ ಹೇಳಿ ಹೇಳಿಯೂ ಸುಸ್ತು ಹೊಡೆದಿದ್ದಾರೆ.
ಅಲ್ಲದೇ, ಇದರಿಂದ ನಗರಸಭೆ ನೌಕರರು ಪೊಲೀಸರೊಂದಿಗೆ ಕೈ ಜೋಡಿಸಿ ಸಾಮಾಜಿಕ ಅಂತರ ಕಾಪಾಡದ ಜನರಿಗೆ ಬೆತ್ತದ ಬಿಸಿ ತೋರಿಸಲು ಅವರೂ ಬೆತ್ತವನ್ನು ಹಿಡಿದು ಅಂಗಡಿ ಮುಂಗಟ್ಟುಗಳಿಗೆ ತೆರಳಿ ಜನರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ಇದಲ್ಲದೇ ಅಂಗಡಿ ಮಾಲೀಕರಿಗೂ ಎಚ್ಚರಿಕೆ ಮೂಡಿಸುತ್ತಿದ್ದಾರೆ. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕೈಗಳನ್ನು ಸ್ಯಾನಿಟೈಜರ್ನಿಂದ ತೊಳೆದುಕೊಳ್ಳಬೇಕು ಎಂದು ಹೇಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ