ಕೋವಿಡ್ 19: ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ: ದೇಬ್ಜ್ಯೋತಿ
Team Udayavani, May 6, 2020, 6:18 PM IST
ಭಟ್ಕಳ: ನಗರ ವ್ಯಾಪ್ತಿಯನ್ನು ಕಂಟೇನ್ಮೆಂಟ್ ಝೋನ್ ಎಂದು ಘೋಷಣೆ ಮಾಡಿದ್ದರಿಂದ ಇಲ್ಲಿ ಕಟ್ಟುನಿಟ್ಟಿನ ಕ್ರಮ ಅನಿವಾರ್ಯವಾಗಿದ್ದು ಸಾರ್ವಜನಿಕರು ಸಹಕರಿಸಬೇಕು ಎಂದು ಪಶ್ಚಿಮ ವಲಯ ಐಜಿಪಿ ದೇಬ್ಜ್ಯೋತಿ ರೇ ಹೇಳಿದರು.
ಅವರು ಭಟ್ಕಳಕ್ಕೆ ಆಗಮಿಸಿ ಇಲ್ಲಿನ ಪ್ರವಾಸಿ ಬಂಗಲೆಯಲ್ಲಿ ಅಧಿಕಾರಿಗಳ ಹಾಗೂ ಪ್ರಮುಖ ಸಾರ್ವಜನಿಕರ ಸಭೆ ನಡೆಸಿದರು. ಭಟ್ಕಳಕ್ಕೆ ಬರುವುದಕ್ಕೆ ಹಾಗೂ ಭಟ್ಕಳದಿಂದ ಹೊರಗೆ ಹೋಗುವುದಕ್ಕೆ ಯಾವುದೇ ಅವಕಾಶ ನೀಡಲಾಗುವುದಿಲ್ಲ. ಭಟ್ಕಳಕ್ಕೆ ಹೊರಗಿನಿಂದ ಈಗಾಗಲೇ ಬಂದವರಿದ್ದರೆ ಅವರನ್ನು ಸೂಕ್ತ ತಪಾಸಣೆ ಮಾಡಿ ನಿಗಾ ವಹಿಸಲಾಗುವುದು ಎಂದರಲ್ಲದೇ ಭಟ್ಕಳಕ್ಕೆ ಬರುವವರನ್ನು ತಡೆಯಲಾಗುವುದು ಎಂದೂ ಹೇಳಿದರು.
ಭಟ್ಕಳದಲ್ಲಿ ವದಂತಿಗಳು ಹುಟ್ಟಿಕೊಳ್ಳುತ್ತಿದ್ದು ಅದಕ್ಕೆ ಯಾವುದೇ ರೀತಿಯ ಆಸ್ಪದ ಕೊಡಬಾರದು. ಯಾವುದೇ ವ್ಯಕ್ತಿ ಮೃತಪಟ್ಟಲ್ಲಿ ವೈದ್ಯಾಧಿಕಾರಿಗಳು ಹಾಗೂ ತಾಲೂಕು ಆಡಳಿತದ ಗಮನಕ್ಕೆ ತರಬೇಕು. ಯಾವುದೇ ಖಾಸಗಿ ವೈದ್ಯರು ಕೋವಿಡ್-19 ಸಂಶಯಿತರಿದ್ದರೆ ತಪಾಸಣೆ ಮಾಡುವುದು, ಔಷಧ ನೀಡುವುದು ತಪ್ಪು. ಅಂತಹ ಸಂಶಯಿತರಿದ್ದತೆ ತಕ್ಷಣ ಆರೋಗ್ಯಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ಹೇಳಿದರು.
ಎಸ್.ಪಿ. ಶಿವಪ್ರಕಾಶ ದೇವರಾಜು ಮಾತನಾಡಿ, ಪಟ್ಟಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಸರ್ವೇ ಮಾಡಲು ಆರಂಭಿಸಲಾಗುವುದು. ಎಲ್ಲರೂ ಕೂಡಾ ಸರಿಯಾದ ಮಾಹಿತಿ ಕೊಟ್ಟು ಸಹಕರಿಸಬೇಕು. ಯಾವುದೇ ರೀತಿಯ ಪ್ರತಿರೋಧ ಮಾಡುವುದು ಸರಿಯಲ್ಲ. ಪ್ರತಿರೋಧ ಮಾಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಭಟ್ಕಳ ಉಪವಿಭಾಗಾಧಿಕಾರಿ ಭರತ್ ಎಸ್., ಡಿವೈಎಸ್ಪಿ ಗೌತಮ್ ಕೆ.ಸಿ, ತರಬೇತಿಯಲ್ಲಿರುವ ಪಿಎಸ್ಐ ಶಾಹಿಲ್ ಬಾಗ್ಲಾ, ನೊಡೆಲ್ ಅಧಿಕಾರಿ ಡಾ| ಶರದ್ ನಾಯಕ, ಡಾ| ಸವಿತಾ ಕಾಮತ್, ತಹಶೀಲ್ದಾರ್ ಎಸ್. ರವಿಚಂದ್ರ, ಡಾ| ಮೂರ್ತಿರಾಜ ಭಟ್ಟ, ಸಿಪಿಐ ರಾಮಚಂದ್ರ ನಾಯಕ, ತಂಜೀಂ ಪ್ರಮುಖ ಇನಾಯಿತುಲ್ಲಾ ಶಾಬಂದ್ರಿ, ಶಾಂತರಾಮ ಭಟ್ಕಳ, ಶಿವಾನಿ ಶಾಂತಾರಾಮ್, ಸುಬ್ರಾಯ ದೇವಾಡಿಗ, ಗೋವಿಂದ ನಾಯ್ಕ, ಶ್ರೀಧರ ನಾಯ್ಕ, ಎಂ.ಆರ್. ಮಾನ್ವಿ, ಇಮ್ರಾನ್ ಲಂಕಾ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ