ವಿಚ್ಛೇದನಕ್ಕೆ ನಿರ್ಧರಿಸಿದ್ದ ಜೋಡಿಗಳು ಲಾಕ್‌!

ಲಾಕ್‌ಡೌನ್‌ನಿಂದ ನೂರಾರು ದಂಪತಿ ನಿಕಟ; ವಿಚ್ಛೇದನಕ್ಕೆ ವಿರಾಮ

Team Udayavani, May 7, 2020, 6:00 AM IST

ವಿಚ್ಛೇದನಕ್ಕೆ ನಿರ್ಧರಿಸಿದ್ದ ಜೋಡಿಗಳು ಲಾಕ್‌!

ಸಾಂದರ್ಭಿಕ ಚಿತ್ರ.

ಬೆಂಗಳೂರು: ಸುದೀರ್ಘ‌ ಲಾಕ್‌ಡೌನ್‌ ಪ್ರತ್ಯೇಕವಾಗಲು ನಿರ್ಧರಿಸಿದ್ದ ನೂರಾರು ದಂಪತಿಗಳನ್ನು ಪರೋಕ್ಷವಾಗಿ ಹತ್ತಿರ ತಂದು “ಲಾಕ್‌’ ಮಾಡಿದೆ!

ಸುದೀರ್ಘ‌ ಲಾಕ್‌ಡೌನ್‌ ದಂಪತಿ ಕಲಹಕ್ಕೆ ವಿರಾಮ ನೀಡಿದೆ. ಮನಸ್ಸಿಧ್ದೋ ಇಲ್ಲ ದೆಯೋ ನೂರಾರು ಜೋಡಿ ಒಟ್ಟಿಗೆ ಇರು ವಂತಾಗಿದೆ. ತಿಂಗಳುಗಟ್ಟಲೆ ಹೀಗೆ ನಿಕಟ ವಾಗಿ ಇರುವುದರಿಂದ ಪರಸ್ಪರ ಅರ್ಥ ಮಾಡಿ ಕೊಳ್ಳಲು ಸಾಧ್ಯವಾಗಿದ್ದು, ಕೆಲವರ ಮನಃಪರಿವರ್ತನೆಗೂ ಕಾರಣವಾಗಿರುವುದು ನಿಜ.

ಹಲವು ಸಂದರ್ಭಗಳಲ್ಲಿ ವಿಚ್ಛೇದನಗಳು ತರಾತುರಿಯ ತೀರ್ಮಾನಗಳೂ ಆಗಿರುತ್ತವೆ. ಪತಿ-ಪತ್ನಿ ದುಡಿಯುವವರಾಗಿದ್ದರೆ ಅರ್ಥ ಮಾಡಿಕೊಳ್ಳಲು ಸಮಯವೂ ಸಿಕ್ಕಿರುವುದಿಲ್ಲ. ಇಂಥ ದಂಪತಿಗೆ ಪರಸ್ಪರ ಅರಿತು ನಡೆಯಲು ಲಾಕ್‌ಡೌನ್‌ ಒಂದು ವೇದಿಕೆಯಂತಾಗಿದೆ.

ಪ್ರಕರಣಗಳೆಷ್ಟು?
ರಾಜ್ಯದಲ್ಲಿ ಕೌಟುಂಬಿಕ ವ್ಯಾಜ್ಯಗಳಿಗೆ ಸಂಬಂಧಿಸಿ ನಿತ್ಯ ಕನಿಷ್ಠ 40ರಿಂದ 50 ಪ್ರಕರಣ ಗಳು ನ್ಯಾಯಾಲಯದ ಮುಂದೆ ಬರುತ್ತವೆ. ಇವುಗಳಲ್ಲಿ ವಿಚ್ಛೇದನ ಬಯಸಿದವೇ ಅಧಿಕ.

ಮಾರ್ಚ್‌ 24ರಿಂದ ಮೇ 3ರ ವರೆಗೆ 40 ದಿನಗಳ ಕಾಲ ಲಾಕ್‌ಡೌನ್‌ ಇತ್ತು. ಇದರಲ್ಲಿ ರಜೆಯ 9 ದಿನ ಕಳೆದರೆ ನ್ಯಾಯಾಲಯ ಕಲಾಪಕ್ಕೆ 31 ದಿನ ಸಿಗುತ್ತವೆ. 40ರ ಸರಾಸರಿ ಯಲ್ಲಿ ಲೆಕ್ಕ ಹಾಕಿದರೆ 1,240 ಕೌಟುಂಬಿಕ ಕಲಹ ಪ್ರಕರಣಗಳು ಆಗುತ್ತವೆ. ಆದರೆ ಲಾಕ್‌ಡೌನ್‌ ಅವಧಿಯಲ್ಲಿ ಇಷ್ಟು ಪ್ರಕರಣಗಳು ಕೋರ್ಟ್‌ಗೆ ಬಂದಿಲ್ಲ ಅಥವಾ ತಾತ್ಕಾಲಿಕವಾಗಿ ಮುಂದೂಡಲ್ಪಟ್ಟಿವೆ. ಇಷ್ಟು ವಿಚ್ಛೇದನ ಪ್ರಕರಣಗಳಿಗೆ ತಾತ್ಕಾಲಿಕ ವಿರಾಮ ಸಿಕ್ಕಿದೆ ಎಂದು ಅರ್ಥೈಸಬಹುದು ಎಂದು ಕೌಟುಂಬಿಕ ವ್ಯಾಜ್ಯಗಳನ್ನು ನಿರ್ವಹಿಸುವ ಹೈಕೋರ್ಟ್‌ ವಕೀಲರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಕ್ಷುಲ್ಲಕ ವಿಚಾರಗಳಲ್ಲಿ ಹಠ, ಪ್ರತಿಷ್ಠೆ ಬಿಟ್ಟು ಸಹನೆ, ಸಮಾಧಾನ ತಂದು ಕೊಂಡರೆ ಎಲ್ಲ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಕೌಟುಂಬಿಕ ಸಂಬಂಧಗಳನ್ನು ಗಟ್ಟಿಗೊಳಿಸಿಕೊಳ್ಳಲು ಲಾಕ್‌ಡೌನ್‌ ಪ್ರಕೃತಿದತ್ತ ಅವಕಾಶ. ವಿಚ್ಛೇದನ ಹಂತಕ್ಕೆ ಬಂದಿರುವ ದಂಪತಿಗೆ ಮನಃಪರಿವರ್ತನೆ ಮಾಡಿಕೊಳ್ಳಲು ಸುವರ್ಣಾವಕಾಶ.
– ಕೆ.ಆರ್‌. ರೂಪಾ,
ಕೌಟುಂಬಿಕ ಆಪ್ತ ಸಮಾಲೋಚಕರು.

- ರಫೀಕ್‌ ಅಹ್ಮದ್

ಟಾಪ್ ನ್ಯೂಸ್

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.