ಗುಜರಾತ್, ಮಹಾರಾಷ್ಟ್ರ ಪರಿಸ್ಥಿತಿ ಕಳವಳಕಾರಿ: ಸಚಿವ
Team Udayavani, May 7, 2020, 6:37 AM IST
ಗುಜರಾತ್ ಹಾಗೂ ಮಹಾರಾಷ್ಟ್ರದ ಕೆಲವು ಜಿಲ್ಲೆಗಳಲ್ಲಿ ಕೋವಿಡ್ 19 ಸೋಂಕಿತರು ಅತ್ಯಧಿಕ ಪ್ರಮಾಣದಲ್ಲಿ ಮರಣ ಹೊಂದುತ್ತಿರುವುದು ಕಳವಳಕಾರಿ ವಿಚಾರ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ಈ ಎರಡೂ ರಾಜ್ಯಗಳು ಸೋಂಕಿತರ ಪತ್ತೆ, ಸಂಪರ್ಕಿತರ ಪತ್ತೆ ತ್ವರಿತಗೊಳಿಸುವ ಮೂಲಕ ಹೆಚ್ಚಿನ ಸಾವು ಸಂಭವಿಸದಂತೆ ತಡೆಯಬೇಕಿದೆ ಎಂದಿದ್ದಾರೆ.
ಬುಧವಾರ ಗುಜರಾತ್ ಡಿಸಿಎಂ ನಿತಿನ್ ಭಾಯಿ ಪಟೇಲ್, ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ಅವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿ ಚರ್ಚಿಸಿದ ಹರ್ಷವರ್ಧನ್, ಉಸಿರಾಟದ ಸಮಸ್ಯೆ ಹಾಗೂ ಜ್ವರ ಇರುವವರನ್ನು ತ್ವರಿತವಾಗಿ ಸ್ಕ್ರೀನಿಂಗ್ ಪರೀಕ್ಷೆಗೆ ಒಳಪಡಿಸಬೇಕು. ಆಗ ಕೋವಿಡ್ 19 ವ್ಯಾಪಿಸುವುದನ್ನು ತಡೆ ಯಲು ಸಾಧ್ಯ. ಮರಣ ಪ್ರಮಾಣ ತಗ್ಗಿಸಬೇಕೆಂದರೆ, ರಾಜ್ಯಗಳು ಪರಿಣಾಮಕಾರಿ ಕಾರ್ಯತಂತ್ರಗಳನ್ನು ಅನುಷ್ಠಾನ ಮಾಡಬೇಕು. ಕೇಂದ್ರದ ಮಾರ್ಗ ಸೂಚಿಗಳನ್ನು ಪಾಲಿಸಿ ಹೊಸ ಪ್ರಕರಣ ಗಳು ಮರುಕಳಿಸದಂತೆ ತಡೆಯಬೇಕು. ವಾರ್ಡ್ ಮಟ್ಟದಲ್ಲಿ ಸಾಮುದಾಯಿಕ ಪ್ರತಿನಿಧಿಗಳನ್ನು ನೇಮಕ ಮಾಡಿ, ಕೋವಿಡ್ 19ನಿಯಂತ್ರಿ ಸುವ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Temple; ಎಪ್ರಿಲ್ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?
Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್ ಅಲ್ಲ: ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Kollywood: ಕಮಲ್ ಹಾಸನ್ ʼಇಂಡಿಯನ್ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?
Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ
Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ
Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್
ʼಟಾಕ್ಸಿಕ್ʼ ಅಪ್ಡೇಟ್ಗಾಗಿ ಸೋಶಿಯಲ್ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?