ಅನ್ಯ ರಾಜ್ಯದಲ್ಲಿರುವ ಕಾರ್ಮಿಕರ ಕರೆತರಲು ಮನವಿ
Team Udayavani, May 7, 2020, 11:48 AM IST
ಸುರಪುರ: ಶಾಸಕ ರಾಜೂಗೌಡ ಜಿಲ್ಲಾಧಿಕಾರಿಗೆ ಕೂರ್ಮಾರಾವ್ ಅವರಿಗೆ ಮನವಿ ಸಲ್ಲಿಸಿದರು
ಸುರಪುರ: ಲಾಕ್ಡೌನ್ ಹಿನ್ನೆಲೆಯಲ್ಲಿ ಅನ್ಯ ರಾಜ್ಯಗಳಲ್ಲಿ ಸಿಲುಕಿರುವ ಜಿಲ್ಲೆ ಹಾಗೂ ತಾಲೂಕಿನ ಕೂಲಿ ಕಾರ್ಮಿಕರನ್ನು ಕರೆತರುವಂತೆ ಒತ್ತಾಯಿಸಿ ಶಾಸಕ ನರಸಿಂಹ ನಾಯಕ ರಾಜೂಗೌಡ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಶಾಸಕ ನರಸಿಂಹ ನಾಯಕ, ಜಿಲ್ಲೆ ಹಾಗೂ ತಾಲೂಕಿನ ವಿವಿಧ ಗ್ರಾಮಗಳ ಕೂಲಿ ಕಾರ್ಮಿಕರು ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿದಂತೆ ಇತರೆ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದಾರೆ. ಮಾನವೀಯತೆ ಆಧಾರದಲ್ಲಿ ಅವರನ್ನು ತವರಿಗೆ ಕರೆತರುವುದು ಅಗತ್ಯವಾಗಿದೆ. ಕಾರ್ಮಿಕರು ಕೆಲಸ ಇಲ್ಲದೆ ಮನೆಯಲ್ಲಿಯೇ ಕುಳಿತಿದ್ದು, ಒಪ್ಪತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಈ ಕುರಿತು ಕೆಲ ಕಾರ್ಮಿಕರು ವಾಟ್ಸ್ಆ್ಯಫ್ ಮೂಲಕ ಪರಿಸ್ಥಿತಿ ಕುರಿತು ಗೋಳಿಡುತ್ತಿದ್ದಾರೆ. ತಮ್ಮ ಗ್ರಾಮಗಳಿಗೆ ತಲುಪಿಸುವಂತೆ ನಿತ್ಯವೂ ದೂರವಾಣಿ ಮೂಲಕ ಮನವಿ ಮಾಡುತ್ತಿದ್ದಾರೆ. ಆದ್ದರಿಂದ ಸರಕಾರ ಕಾರ್ಮಿಕರನ್ನು ಕರೆ ತರಲು ಮುಂದಾಗಬೇಕು ಎಂದು ಮನವಿ ಮಾಡಿದರು.
ಈ ಕುರಿತು ಈಗಾಗಲೇ ಸಾರಿಗೆ ಖಾತೆ ಸಚಿವ ಮತ್ತು ಮುಖ್ಯಮಂತ್ರಿ ಜತೆಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಮನವಿಗೆ ಸಚಿವರು ಮತ್ತು ಸಿಎಂ ಸ್ಪಂದಿಸಿದ್ದಾರೆ. ಕಾರಣ ಸರಕಾರ ಮತ್ತು ಜಿಲ್ಲಾಡಳಿತ ತುರ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ