ಗಡಿ ಭಾಗದಲ್ಲಿ ಬಿಗಿ ಬಂದೋಬಸ್ತ್ ಗೆ ಒತ್ತಾಯ
Team Udayavani, May 8, 2020, 11:30 AM IST
ಹರಿಹರ: ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು
ಹರಿಹರ: ದಾವಣಗೆರೆಯಿಂದ ಮದ್ಯ ಖರೀದಿಗೆಂದು ಬರುವವರನ್ನು ತಡೆಯಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಕಾರ್ಯಕರ್ತರು ಗುರುವಾರ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ದಿನ ನಿತ್ಯ ದಾವಣಗೆರೆಯಿಂದ ನೂರಾರು ಸಂಖ್ಯೆಯ ಮದ್ಯಪ್ರಿಯರು ಬಂದು ನಗರದ ಮದ್ಯದಂಗಡಿಗಳ ಮುಂದೆ ತಾಲೂಕಿನ ಜನರೊಂದಿಗೆಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಇವರಿಂದ ಇಲ್ಲಿನ ಜನರಿಗೂ ಕೋವಿಡ್ ವೈರಸ್ ಹರಡುವ ಅಪಾಯವಿದೆ. ಆದ್ದರಿಂದ ಅಧಿಕಾರಿಗಳು ಕೂಡಲೆ ಎಚ್ಚೆತ್ತು ತಾಲೂಕಿನ ಗಡಿ ಭಾಗದಲ್ಲಿ ಬಿಗಿ ಬಂದೋಬಸ್ತ್ ಮಾಡಬೇಕು. ಮದ್ಯದಂಗಡಿ ಮುಂದೆ ಸಾಲಿನಲ್ಲಿ ನಿಂತವರ ಆಧಾರ್ ಕಾರ್ಡ್ ಪರಿಶೀಲಿಸಬೇಕು. ಸಾಧ್ಯವಾಗದಿದ್ದರೆ ತಾಲೂಕಿನ ಮದ್ಯದಂಗಡಿಗಳನ್ನು ಮುಂದಿನ 15 ದಿನಗಳವರೆಗೆ ಬಂದ್ ಮಾಡಿಸಬೇಕೆಂದು ಆಗ್ರಹಿದರು.
ಮನವಿ ಸ್ವೀಕರಿಸಿದ ತಹಶೀಲ್ದಾರ್ ಕೆ.ಬಿ. ರಾಮಚಂದ್ರಪ್ಪ ಮಾತನಾಡಿ, ಮುಖ್ಯ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಕೆಲವೆಡೆ ಪೊಲೀಸ್ ಚೌಕಿ, ತಪಾಸಣೆ ಮಾಡಲಾಗುತ್ತಿದೆ. ರೈತರು ಹೊಲ-ಗದ್ದೆಗಳಿಗೆ ಹೋಗಲು ಬಳಸುವ ಬಂಡಿ ರಸ್ತೆಗಳ ಮೂಲಕ ದಾವಣಗೆರೆ ಜನರು ಬರುತ್ತಿರುವ ಮಾಹಿತಿಯಿದೆ. ಆದರೆ ಮದ್ಯದಂಗಡಿ ಬಂದ್ ಮಾಡಿಸಲು ನಮಗೆ ಅಧಿಕಾರವಿಲ್ಲ. ಪರಸ್ಥಳದವರು ಬರದಂತೆ ತಡೆಯಲು ಪೊಲೀಸರಿಗೆ ಸೂಚಿಸುವುದಾಗಿ ತಿಳಿಸಿದರು. ಕರವೇ ಜಿಲ್ಲಾ ಉಪಾಧ್ಯಕ್ಷ ನಾಗರಾಜ್ ಮೆಹರವಾಡೆ, ತಾಲೂಕುಅಧ್ಯಕ್ಷ ನಾಗರಾಜ್ ಗೌಡ, ಬಿ. ಮಗ್ದುಂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ
Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ
Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು
MUST WATCH
ಹೊಸ ಸೇರ್ಪಡೆ
LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ
LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು
Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು
ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ