ಹಿಂದೂ ಶಾಸಕನ ಪುತ್ರಿಯಿಂದ ರೋಜಾ !

ಪ್ರಸಕ್ತ ವರ್ಷ ರೋಜಾ ಆರಂಭವಾದ ದಿನದಿಂದಲೇ ಉಪವಾಸ ವ್ರತ ಶುರು

Team Udayavani, May 8, 2020, 12:53 PM IST

ಹಿಂದೂ ಶಾಸಕನ ಪುತ್ರಿಯಿಂದ ರೋಜಾ !

ವಿಜಯಪುರ: ಈಕೆ ಹಿಂದೂ ಶಾಸಕನ ಪುತ್ರಿ. ಆದರೆ ಕಳೆದ ಏಳೆಂಟು ವರ್ಷಗಳಿಂದ ಮುಸ್ಲಿಂ ಧರ್ಮೀಯರ ಪವಿತ್ರ ರಂಜಾನ್‌ ಮಾಸದಲ್ಲಿ ರೋಜಾ ಆಚರಿಸುತ್ತಾರೆ. ಕುಟುಂಬದಲ್ಲಿ ದೊಡ್ಡಪ್ಪ ಕಳೆದ ಅರ್ಧ ಶತಮಾನದಿಂದ ರಂಜಾನ್‌ ಸಂದರ್ಭ ಆಚರಿಸುತ್ತ ಬರುತ್ತಿದ್ದ ಕಠೊರ ಉಪವಾಸವೇ ಈಕೆಗೂ ಪ್ರೇರಣೆ. ಬಸವೇಶ್ವರರ ಜನ್ಮಭೂಮಿ ಬಸವನಬಾಗೇವಾಡಿ ಕ್ಷೇತ್ರ ಪ್ರತಿನಿಧಿಸುತ್ತಿರುವ ಕಾಂಗ್ರೆಸ್‌ ಶಾಸಕ, ಮಾಜಿ ಸಚಿವ ಶಿವಾನಂದ ಎಸ್‌. ಪಾಟೀಲರ ಹಿರಿಯ ಪುತ್ರಿ
ಸಂಯುಕ್ತಾ ಪಾಟೀಲ ರೋಜಾ ಆಚರಿಸುತ್ತಿದ್ದು, ಧಾರ್ಮಿಕ ಸೌಹಾರ್ದತೆಗೆ ಇಂಥ ಆಚರಣೆಗಳನ್ನು ಮಾಡುತ್ತಿರುವುದಾಗಿ ಹೇಳುತ್ತಾರೆ.

ಸಂಯುಕ್ತಾ ಕಾನೂನು ಪದವಿಯಲ್ಲಿ ಅಂತಾರಾಷ್ಟ್ರೀಯ ಮಾನವೀಯ ಸಂಬಂಧಗಳ ಕುರಿತು ವಿಶೇಷ ಅಧ್ಯಯನ ಮಾಡಿದ್ದಾರೆ. ದೊಡ್ಡಪ್ಪ ಶಿವಶರಣಗೌಡ ಪಾಟೀಲ 50 ವರ್ಷಗಳಿಂದ ರಂಜಾನ್‌ ಮಾಸದಲ್ಲಿ ಕಠೊರ ಉಪವಾಸ ಮಾಡುತ್ತಿದ್ದರು. ಬಾಲ್ಯದಲ್ಲಿ ದೊಡ್ಡಪ್ಪ ಮಾಡುತ್ತಿದ್ದ ರೋಜಾ ನೋಡುತ್ತಿದ್ದ ಸಂಯುಕ್ತಾ ಕಳೆದ 7-8 ವರ್ಷಗಳಿಂದ ದೊಡ್ಡಪ್ಪನ ಜೊತೆಗೆ ರೋಜಾ ಮಾಡಲು ಆರಂಭಿಸಿದ್ದಾರೆ. ಒಂದೆರಡು ವರ್ಷ ಮಾಸ ಪೂರ್ತಿ ರೋಜಾ ಆಚರಿಸಿದ್ದಾರೆ. ಪ್ರಸಕ್ತ
ವರ್ಷ ರೋಜಾ ಅರಂಭವಾದ ದಿನದಿಂದಲೇ ಉಪವಾಸ ವ್ರತ ಆಚರಿಸಿದ್ದಾರೆ.

ರಂಜಾನ್‌ ಮಾಸದಲ್ಲಿ ರೋಜಾ ಆಚರಿಸಿದರೂ ಮುಸ್ಲಿಂ ಸಮುದಾಯದವರಂತೆ ಅಲ್ಹಾನ ಪ್ರಾರ್ಥನೆ ಮಾಡಲು ಈಕೆಗೆ ನಮಾಜು ಮಾಡಲು ಬರುವುದಿಲ್ಲ. ಆದರೆ ರಂಜಾನ್‌ ಮಾಸದಲ್ಲಿ ಬೆಳಗ್ಗೆ  4ಕ್ಕೆ ಏಳುವ ಸಂಯುಕ್ತಾ ಪಾಟೀಲ, ನಿತ್ಯ ಕರ್ಮಗಳನ್ನು ಮುಗಿಸಿ ಮನೆಯಲ್ಲಿರುವ ದೇವರಿಗೆ ಪೂಜೆ ಸಲ್ಲಿಸಿ, ಸೂರ್ಯೋದಯಕ್ಕೆ ಮುನ್ನವೇ ಪ್ರಸಾದ ಸೇವಿಸುತ್ತಾರೆ. ಅನಂತರ ಮುಸ್ಲಿಂ ಸಮುದಾಯದವರು ಮಾಡುವಂತೆ ಐದು ಬಾರಿ ದೇವರ ಧ್ಯಾನ ಮಾಡುವ ಸಂಯುಕ್ತಾ, ಸೂರ್ಯಾಸ್ತದ ನಂತರವೇ ಸ್ನಾನ-ಪೂಜೆ ಮುಗಿಸಿ ಪ್ರಸಾದ ಸೇವಿಸುತ್ತಾರೆ.

ಭಾರತೀಯ ಪರಂಪರೆಯಲ್ಲಿ, ಅದರಲ್ಲೂ ವಿಜಯಪುರ ಜಿಲ್ಲೆ ಧಾರ್ಮಿಕ ಸೌಹಾರ್ದಕ್ಕೆ ಹೆಸರಾಗಿದೆ. ನಮ್ಮ ಅಜ್ಜ ಸಿದ್ರಾಮಪ್ಪಗೌಡ ಪಾಟೀಲ ಅವರು ಹಿಂದು-ಮುಸ್ಲಿಂ ಸಮುದಾಯದ ಪ್ರೀತಿಗೆ ಪಾತ್ರರಾಗಿದ್ದು, ನಗರಸಭೆ ಸದಸ್ಯರೂ ಆಗಿದ್ದರು. ಮುಸ್ಲಿಂ ಸಮುದಾಯದ ಜನರೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದರು. ಅಜ್ಜ ಸಿದ್ರಾಮಪ್ಪಗೌಡ ಅವರ ಮುಸ್ಲಿಂ ಸ್ನೇಹಿತರು ಕೂಡ ಗಣೇಶೋತ್ಸವ, ದೀಪಾವಳಿ, ದಸರಾ ಸೇರಿದಂತೆ ಹಲವು ಹಬ್ಬಗಳನ್ನು ಒಗ್ಗೂಡಿ ಮಾಡುತ್ತಿದ್ದರು. ಎಲ್ಲಕ್ಕಿಂತ ಹೆಚ್ಚಾಗಿ ಅಜ್ಜಿ ಪಾರ್ವತಮ್ಮ ಸೂಫಿ ಪಂಥೀಯರಾಗಿದ್ದರು. ಇಂಥ ಕೌಟುಂಬಿಕ ಹಿನ್ನೆಲೆ ದೊಡ್ಡಪ್ಪ ಅವರಿಗೆ ಪ್ರೇರಣೆ ನೀಡಿದ್ದು, ನನಗೆ
ದೊಡ್ಡಪ್ಪ ಸ್ಫೂರ್ತಿ ಎನ್ನುತ್ತಾರೆ ಸಂಯುಕ್ತಾ.

ಕಳೆದ ಎರಡು ವರ್ಷಗಳಿಂದ ದೊಡ್ಡಪ್ಪನವರಿಗೆ ಆರೋಗ್ಯ ಸರಿ ಇಲ್ಲದ ಕಾರಣ ಅವರ ಪರವಾಗಿ ನಾನೇ ಪೂರ್ಣ ಪ್ರಮಾಣದಲ್ಲಿ ರಂಜಾನ್‌ ರೋಜಾ ಆಚರಿಸುತ್ತಿದ್ದೇನೆ. ಹಲವು ವರ್ಷಗಳಿಂದ ಈ ಕಠೊರ ವ್ರತಾಚರಣೆ ಮಾಡಿಕೊಂಡು ಬಂದಿರುವ ಕಾರಣ ಉಗುಳು ಕೂಡ ನುಂಗಬಾರದ ಈ
ಉಪವಾಸ ಕಷ್ಟ ಎನಿಸುತ್ತಿಲ್ಲ ಎನ್ನುತ್ತಾರೆ.

ಬಸವಾದಿ ಶರಣರ ವಚನಗಳ ಜೀವನ ಶೈಲಿ ರೂಢಿಸಿಕೊಂಡಿರುವ ಕುಟುಂಬದಲ್ಲಿ ಕ್ರಿಸ್‌ ಮಸ್‌ ಹಬ್ಬವನ್ನೂ ಆಚರಿಸುತ್ತೇನೆ. ಬೈಬಲ್‌ ಓದಿರುವ ನಾನು ಭವಿಷ್ಯದಲ್ಲಿ ಪವಿತ್ರ ಕುರಾನ್‌ ಓದುವ ಗುರಿ ಇರಿಸಿಕೊಂಡಿದ್ದೇನೆ. ಸತ್ಕಾರ್ಯದಲ್ಲಿ ದೇವರಿದ್ದಾನೆಂದು ಬಸವೇಶ್ವರರು ಹೇಳಿದ ಸಂದೇಶಗಳನ್ನೇ ಎಲ್ಲ ಧರ್ಮಗಳೂ ಸಾರುತ್ತಿವೆ. ಎಲ್ಲರೂ ಸ್ವ ಧರ್ಮಗಳ ಆಚರಣೆ ಜೊತೆಗೆ ಅನ್ಯ ಧರ್ಮಗಳನ್ನು ಪ್ರೀತಿಸಿ, ಗೌರವಿಸುವಲ್ಲೇ ಧಾರ್ಮಿಕ ಸೌಹಾರ್ದತೆ ಹಾಗೂ ದೇಶದ ಏಕತೆ ಸಾಧ್ಯ.
● ಸಂಯುಕ್ತಾ ಪಾಟೀಲ

● ಜಿ.ಎಸ್‌.ಕಮತರ

ಟಾಪ್ ನ್ಯೂಸ್

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.