ಬಳ್ಳಾರಿಯಲ್ಲಿ ಮತ್ತೊಂದು ಕೋವಿಡ್ ಪ್ರಕರಣ: 15ಕ್ಕೇರಿದ ಜಿಲ್ಲೆಯ ಸೋಂಕಿತರ ಸಂಖ್ಯೆ
Team Udayavani, May 8, 2020, 1:23 PM IST
ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್ -19 ಪತ್ತೆಯಾಗಿದೆ. ಜಿಲ್ಲೆಯ ಸಂಡೂರು ತಾಲೂಕು ಕೃಷ್ಣಾನಗರದ 37 ವರ್ಷದ ಮಹಿಳೆಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ಮತ್ತೊಬ್ಬರಲ್ಲಿ ಸೋಂಕು ಆವರಿಸಿರುವುದು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.
ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಈಗಾಗಲೇ 14 ಜನರು ಕೋವಿಡ್-19 ವೈರಸ್ ಸೋಂಕಿತರು ಇದ್ದು, ಈ ಪೈಕಿ 9 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಮೇ 8 ರಂದು ಶುಕ್ರವಾರ ಇನ್ನಿಬ್ಬರು ಬಿಡುಗಡೆಯಾಗಲಿದ್ದಾರೆ. ಹೀಗೆ ಜಿಲ್ಲೆಯಲ್ಲಿ ಸೋಂಕಿತರು ಗುಣಮುಖರಾಗಿ ಮನೆ ಸೇರುತ್ತಿರುವ ಬೆನ್ನಲ್ಲೇ ಇದೀಗ ಜಿಲ್ಲೆಯ ಸಂಡೂರು ತಾಲೂಕು ಕೃಷ್ಣಾನಗರದಲ್ಲಿ 37 ವರ್ಷದ ಮಹಿಳೆಗೆ ಕೋವಿಡ್-19 ದೃಢಪಟ್ಟಿದ್ದು, ಈ ಕುರಿತು ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಶುಕ್ರವಾರ ಮಧ್ಯಾಹ್ನದ ಬುಲೆಟಿನ್ ಸ್ಪಷ್ಟಪಡಿಸಿದೆ.
ಸೋಂಕಿತ ಮಹಿಳೆಯನ್ನು ಈಗಾಗಲೇ ನಗರದ ಕೋವಿಡ್ (ಜಿಲ್ಲಾ) ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಜತೆಗೆ ಸೋಂಕಿತ ಮಹಿಳೆಯ ಸಂಬಂಧಿಕರು ಸೇರಿದಂತೆ ಅವರೊಂದಿಗೆ ಸಂಪರ್ಕದಲ್ಲಿರುದ್ದ ವ್ಯಕ್ತಿಗಳನ್ನು ಕ್ವಾರಂಟೈನ್ ಮಾಡಲು ಸೂಚನೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ಸಹ ಪ್ರಥಮ ಸಂಪರ್ಕಿತರ ಮಾಹಿತಿ ಸಂಗ್ರಹಿಸುತ್ತಿದೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದರ. ಈ ಪೈಕಿ 9 ಜನರು ಬಿಡುಗಡೆಯಾಗಿದ್ದು, ಮೇ 8 ರಂದು ಶುಕ್ರವಾರ ಗುಣಮುಖರಾದ ಇನ್ನಿಬ್ಬರು ಬಿಡುಗಡೆಯಾಗಲಿದ್ದಾರೆ. ಇನ್ನುಳಿದ ನಾಲ್ಕು ಪ್ರಕರಣಗಳು ಸಕ್ರಿಯವಾಗಿವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HDK ಹೇಳುತ್ತಿದ್ದದ್ದು ಪ್ರಜ್ವಲ್ ಪೆನ್ಡ್ರೈವ್ ಇರಬೇಕು: ಜಮೀರ್
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
MUST WATCH
ಹೊಸ ಸೇರ್ಪಡೆ
Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!
Mumbai: 45 ದಿನದಲ್ಲಿ 300 ಐಸ್ಕ್ರೀಂ ಆರ್ಡರ್ ಮಾಡಿದ!
Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ