ತಾಳ್ಮೆಯಿಂದ ಸಹಕರಿಸಿ: ಪುಟ್ಟ ರಾಜು
Team Udayavani, May 8, 2020, 5:45 PM IST
ಪಾಂಡವಪುರ: ಕೋವಿಡ್ 19 ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಸವಿತಾ ಸಮುದಾಯ, ಆಟೋ ಚಾಲಕರು ಹಾಗೂ ಛಾಯಾಗ್ರಾಹಕರಿಗೆ ವೈಯಕ್ತಿಕವಾಗಿ ಪಡಿತರ ಕಿಟ್ಗಳನ್ನು ವಿತರಿಸಲಾಗುವುದು ಎಂದು ಶಾಸಕ ಪುಟ್ಟರಾಜು ಹೇಳಿದರು.
ಸವಿತಾ ಸಮುದಾಯದ ಮುಖಂಡರ ಸಭೆ ಬಳಿಕ ಮಾತನಾಡಿದ ಅವರು, ಲಾಕ್ಡೌನ್ನಿಂದಾಗಿ ಸವಿತಾ ಸಮುದಾಯ ಸಂಕಷ್ಟಕ್ಕೆ ಸಿಲುಕಿದೆ. ಹಾಗಾಗಿ ನಮಗೆ ಕ್ಷೌರಿಕ ಅಂಗಡಿಯ ಬಾಗಿಲು ತೆಗೆಯಲು ಅವಕಾಶ ಮಾಡಿಕೊಡಬೇಕು ಎಂದು ಸವಿತಾ ಸಮುದಾಯದ ತಾಲೂಕು ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಶಾಸಕರಲ್ಲಿ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಲಾಕ್ಡೌನ್ ನಿಂದಾಗಿ ಸವಿತಾ ಸಮುದಾಯ ಸೇರಿದಂತೆ ಬಡವರೆಲ್ಲರೂ ಸಮಸ್ಯೆಗೆ ಸಿಲುಕಿದ್ದಾರೆ. ಇದೀಗ ಬಾಗಿಲು ತೆಗೆಯಲು ಅವಕಾಶ ಮಾಡಿಕೊಟ್ಟರೆ ಇದರಿಂದ ಸಮಸ್ಯೆಯಾಗಬಹುದು. ಇಷ್ಟು ದಿನಗಳ ಕಾಲ ತಾಳ್ಮೆಯಿಂದ ಇದ್ದೀರಿ, ಇನ್ನೂ ಸ್ವಲ್ಪದಿನ ಸಹಕರಿಸುವಂತೆ ಹೇಳಿದರು. ಸವಿತಾ ಸಮುದಾಯದ ಎಷ್ಟು ಕುಟುಂಬಗಳಿವೆ ಗುರುತಿಸಿ ಮಾಹಿತಿ ನೀಡುವಂತೆ ತಿಳಿಸಿದ ಶಾಸಕರು, ತಾಲೂಕಿನಲ್ಲಿರುವ ಎಲ್ಲಾ ನೋಂದಾಯಿತ ಆಟೋ ಚಾಲಕರಿಗೆ ಹಾಗೂ ಛಾಯಾಗ್ರಾಹಕರಿಗೂ ಪಡಿತರ ಕಿಟ್ಗಳನ್ನು ವಿತರಿಸಲಾಗುವುದು ಎಂದು ಹೇಳಿದರು.
ಮುಂಬೈನಿಂದ ನುಸುಳಿ ಬರುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಅವುಗಳ ಬಗ್ಗೆ ಅಧಿಕಾರಿಗಳು ಕ್ರಮ ವಹಿಸಬೇಕು. ತಾಲೂಕಿನ ಬಿ.ಕೊಡಗಹಳ್ಳಿ ಗ್ರಾಮಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಾನು ಈ ಹಿಂದೆ ಗ್ರಾಮದ ಎಲ್ಲಾ ಕುಟುಂಬಗಳಿಗೆ ಉಚಿತ ಕಿಟ್ ಗಳನ್ನು ವಿತರಣೆ ಮಾಡಿದ್ದೇನೆ. ಗ್ರಾಮ ಸೀಲ್ಡೌನ್ ಆಗಿರುವುದರಿಂದ ಮತ್ತೂಂದು ಬಾರಿ ಗ್ರಾಮಕ್ಕೆ ಪಡಿತರ ಕಿಟ್ಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.
ತಹಶೀಲ್ದಾರ್ ಪ್ರಮೋದ್, ತಾಪಂ ಇಒ ಮಹೇಶ್, ಸವಿತಾ ಸಮುದಾಯದ ತಾಲೂಕು ಅಧ್ಯಕ್ಷ ತಿಮ್ಮರಾಜು, ಕಾರ್ಯದರ್ಶಿ ವೆಂಕಟೇಶ್, ಮುಖಂಡ ಜಗನಾಥ್, ಸ್ವಾಮಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ