ಖಾಸಗಿ ಬಸ್‌ ಸಂಚಾರ ಆರಂಭ ನಿರೀಕ್ಷೆ ದೂರ

ಉಡುಪಿ ಜಿಲ್ಲೆಯೊಳಗೆ ಕೆಎಸ್ಸಾರ್ಟಿಸಿ ಬಸ್‌ ಸಂಚಾರ ಸಾಧ್ಯತೆ

Team Udayavani, May 9, 2020, 6:35 AM IST

ಖಾಸಗಿ ಬಸ್‌ ಸಂಚಾರ ಆರಂಭ ನಿರೀಕ್ಷೆ ದೂರ

ಸಾಂದರ್ಭಿಕ ಚಿತ್ರ.

ಉಡುಪಿ: ಖಾಸಗಿ ಬಸ್‌ಗಳ ಸಂಚಾರದ ಆರಂಭ ನಿರೀಕ್ಷೆ ಮತ್ತೆ ದೂರವಾಗಿದೆ. ಬೆಂಗಳೂರಿನಲ್ಲಿ ಶುಕ್ರವಾರ ಸಾರಿಗೆ ಆಯುಕ್ತರೊಂದಿಗೆ ಸಭೆ ನಡೆದಿದ್ದು, ರವಿವಾರ ಸಾರಿಗೆ ಸಚಿವರು ಬಸ್‌ ಮಾಲಕರ ಫೆಡರೇಷನ್‌ ಪದಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್‌ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಲಾಕ್‌ಡೌನ್‌ಗೂ ಮುನ್ನ ಇದ್ದ ದರದಲ್ಲಿಯೇ ಬಸ್‌ಗಳು ಓಡಾಟ ನಡೆಸಬೇಕು. ಶೇ. 50ಕ್ಕಿಂತ ಅಧಿಕ ಪ್ರಯಾಣಿಕರು ಬಸ್ಸಿನಲ್ಲಿ ಇರಬಾರದು. ಸಾಮಾಜಿಕ ಅಂತರ ಕಾಪಾಡುವುದು ಸಹಿತ ಹಲ ವಾರು ವಿಚಾರಗಳನ್ನು ಪಾಲಿಸುವಂತೆ ಆಯುಕ್ತರು ಸೂಚಿಸಿ ದರು ಎನ್ನಲಾಗಿದೆ.

ಮಾಲಕರಿಂದ ನಿರಾಕರಣೆ
ಈ ಎಲ್ಲ ನಿಯಮಾವಳಿಗಳಂತೆ ಬಸ್‌ಗಳನ್ನು ಓಡಿಸುವುದರಿಂದ ನಷ್ಟ ಉಂಟಾಗುತ್ತದೆ. ಕನಿಷ್ಠ 3 ತಿಂಗಳ ತೆರಿಗೆ ಹಣ ರಿಯಾಯಿತಿ, ಟಿಕೆಟ್‌ ದರದಲ್ಲಿ ಶೇ. 50 ಹೆಚ್ಚಿಸುವ ಬೇಡಿಕೆ ಈಡೇರಿಸುವಂತೆ ಖಾಸಗಿ ಬಸ್‌ ಮಾಲಕರು ಮನವಿ ಮಾಡಿಕೊಂಡರು. ಬಸ್‌ ಟಿಕೆಟ್‌ ದರಗಳನ್ನು ಪರಿಷ್ಕರಿಸಿ ನೀಡಲಾಗುವುದು ಎಂದು ಸಾರಿಗೆ ಆಯುಕ್ತರು ತಿಳಿಸಿದರು.

ಮತ್ತೆ ವಿಳಂಬಬಸ್‌ ದರ ಪರಿಷ್ಕರಣೆ ಅಥವಾ ತೆರಿಗೆಯಲ್ಲಿ ವಿನಾಯಿತಿ ಕಲ್ಪಿಸಿದ್ದೇ ಆದಲ್ಲಿ ಮೇ 17ಕ್ಕೂ ಮುನ್ನ ಬಸ್‌ಗಳ ಓಡಾಟ ಆರಂಭವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಈ ಎಲ್ಲ ವಿಚಾರಗಳು ರವಿವಾರ ಸಾರಿಗೆ ಸಚಿವರ ವೀಡಿಯೋ ಕಾನ್ಫರೆನ್ಸ್‌ ನಲ್ಲಿ ಮತ್ತೆ ಚರ್ಚೆಯಾಗುವ ಸಾಧ್ಯತೆ ಗಳಿರುವುದರಿಂದ ಸಚಿವರ ನಿರ್ಧಾರದ ಮೇಲೆ ಅವಲಂ ಬಿತವಾಗಿರುತ್ತದೆ ಎನ್ನಲಾಗಿದೆ.

ಉಡುಪಿ: ಶೀಘ್ರ ಕೆಎಸ್ಸಾರ್ಟಿಸಿ ಸೇವೆ?
ಉಡುಪಿ ಜಿಲ್ಲೆ ಹಸುರು ವಲಯದಲ್ಲಿದ್ದ ಕಾರಣ ಜಿಲ್ಲೆಯೊಳಗೆ ಯಾವ ಯಾವ ಊರುಗಳಿಗೆ ಬಸ್‌ ಸಂಚಾರ ಅಗತ್ಯ ಎಂಬ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಮೇ 6ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದಿದ್ದ ಸಭೆ ಯಲ್ಲಿ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿ ದ್ದರು. ಅದರಂತೆ ಉಡುಪಿಯಿಂದ ಕುಂದಾಪುರ, ಬೈಂದೂರು, ಕಾರ್ಕಳ, ಹೆಬ್ರಿ, ಕಾಪು, ಮಲ್ಪೆ, ಮಣಿಪಾಲ, ಅಲೆವೂರು ಭಾಗ ಗಳಿಗೆ ಕೆಎಸ್ಸಾರ್ಟಿಸಿ ಬಸ್‌ಗಳ ಸೇವೆ ಸೋಮವಾರದಿಂದ ಲಭಿಸುವ ಸಾಧ್ಯತೆಗಳಿವೆ ಎನ್ನಲಾ ಗಿದೆ. ಬೆಳಗ್ಗೆ ಮತ್ತು ಸಂಜೆ ವೇಳೆ ಕಚೇರಿ ಆರಂಭವಾಗುವ ಹೊತ್ತಿನಲ್ಲಿ ಪ್ರಾಯೋಗಿಕವಾಗಿ ಸಂಚಾರ ಆರಂಭವಾಗಿ ಬೇಡಿಕೆ ಹೆಚ್ಚಿಗೆ ಇದ್ದಲ್ಲಿ ಟ್ರಿಪ್‌ ಗಳನ್ನು ಹೆಚ್ಚಿಸುವ ಸಾಧ್ಯತೆಗಳಿವೆ.

ಈ ಹಿಂದಿನ ದರದಂತೆ ಶೇ. 50 ಪ್ರಯಾಣಿಕರನ್ನು ಮೀರದಂತೆ ಬಸ್ಸುಗಳು ಓಡಾಟ ನಡೆಸಬೇಕು ಎಂದು ಆಯುಕ್ತರು ಸೂಚಿಸಿದರು. ನಾವು ನೀಡಿರುವ ಬೇಡಿಕೆ ಈಡೇರದಿದ್ದಲ್ಲಿ ಲಾಕ್‌ಡೌನ್‌ಅವಧಿ ಮುಗಿದ ಅನಂತರವೇ ಸಂಚಾರ ಆರಂಭಿ ಸಲಾಗುವುದು.
-ರಾಜವರ್ಮ ಬಲ್ಲಾಳ್‌
ಅಧ್ಯಕ್ಷರು, ಕೆನರಾ ಬಸ್‌ ಮಾಲಕರ ಸಂಘ

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.