ಯಕ್ಷ ಕಲಾವಿದರಿಗೆ ಅಕಾಡೆಮಿ ನೆರವು
Team Udayavani, May 9, 2020, 5:58 AM IST
ಸಾಂದರ್ಭಿಕ ಚಿತ್ರ.
ಕೋಟ: ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್ಡೌನ್ ಇರುವುದರಿಂದ ಸಂಕಷ್ಟಕ್ಕೆ ಒಳಗಾಗಿರುವ ಯಕ್ಷಗಾನ ಮೇಳಗಳ ಕಲಾವಿದರ ನೆರವಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಮುಂದಾಗಿದೆ.
ಅಕಾಡೆಮಿ ಅನುದಾನದ ಜತೆಗೆ ಸಾರ್ವಜನಿಕರು, ಯಕ್ಷಗಾನ ಅಭಿಮಾನಿ ಗಳಿಂದ ದೇಣಿಗೆಯನ್ನು ಸಂಗ್ರಹಿಸಿ ಕಲಾವಿದರಿಗೆ ನೀಡಲು ಚಿಂತನೆ ನಡೆಯುತ್ತಿದೆ ಎಂದು ಅಕಾಡೆಮಿ ಅಧ್ಯಕ್ಷ ಪ್ರೊ| ಎಂ.ಎ. ಹೆಗ್ಡೆ ಸ್ಪಷ್ಟಪಡಿಸಿದ್ದಾರೆ.
ಕನ್ನಡ – ಸಂಸ್ಕೃತಿ ಇಲಾಖೆ ನೆರವು
ಅರ್ಥಿಕವಾಗಿ ಸಮಸ್ಯೆಗೊಳಗಾದ ಕಲಾವಿದರಿಗೆ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ 2 ಸಾವಿರ ರೂ. ಸಹಾಯಧನ ನೀಡುವ ಯೋಜನೆಗೆ ಅಕಾಡೆಮಿ 699 ಸದಸ್ಯರನ್ನು ಶಿಫಾರಸು ಮಾಡಿದೆ. ಶೀಘ್ರದಲ್ಲಿ ಅವರ ಖಾತೆಗಳಿಗೆ ಹಣ ಜಮೆಯಾಗಲಿದೆ. ಕೇವಲ ವೃತ್ತಿ ಕಲಾವಿದರಿಗೆ ಮಾತ್ರವಲ್ಲದೆ ಕಲೆ ಯನ್ನೇ ಆಶ್ರಯಿಸಿ ಬದುಕು ತ್ತಿರುವ ತರಬೇತುದಾರರು ಮತ್ತಿತರರಿಗೂ ಈ ಸೌಲಭ್ಯ ಸಿಗಲಿದೆ.
ಬೆಳಕು ಚೆಲ್ಲಿದ ಉದಯವಾಣಿ
ಲಾಕ್ಡೌನ್ ಕಾರಣ ಯಕ್ಷಗಾನ ಮೇಳಗಳ ಈ ವರ್ಷದ ತಿರುಗಾಟ ಸ್ಥಗಿತವಾಗಿದ್ದು, ಕಲಾವಿದರು ವೇತನವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಉದಯವಾಣಿಯ ಶುಕ್ರವಾರದ ಸಂಚಿಕೆಯಲ್ಲಿ “ಕೊರೊನಾಘಾತ: ಯಕ್ಷಗಾನ ಕಲಾವಿದರಿಗೂ ಬೇಕು ನೆರವು’ ಎಂಬ ವಿಶೇಷ ವರದಿ ಪ್ರಕಟಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ