ಕಾಲೇಜುಗಳ ಶಿಕ್ಷಕ, ಶಿಕ್ಷಕೇತರರ ಪರದಾಟ! ಉನ್ನತ ಶಿಕ್ಷಣ ಇಲಾಖೆ ಆದೇಶ
Team Udayavani, May 9, 2020, 6:05 AM IST
ಉಡುಪಿ: ಸರಕಾರಿ ಕಚೇರಿಗಳನ್ನು ಶೇ. 100ರಷ್ಟು ಸಿಬಂದಿಯೊಂದಿಗೆ ತೆರೆದಿಡುವಂತೆ ರಾಜ್ಯ ಸರಕಾರ ಆದೇಶ ನೀಡಿದ್ದು, ಉನ್ನತ ಶಿಕ್ಷಣ ಇಲಾಖೆಯಡಿ ಬರುವ ರಾಜ್ಯದ ಸರಕಾರಿ, ಅನುದಾನಿತ ಕಾಲೇಜುಗಳ ಬೋಧಕ ಹಾಗೂ ಬೋಧಕೇತರ ಸಿಬಂದಿಯನ್ನು ಸಂಕಷ್ಟಕ್ಕೆ ನೂಕಿದೆ.
ಉನ್ನತ ಶಿಕ್ಷಣ ಇಲಾಖೆಯು ಶಿಕ್ಷಕ, ಶಿಕ್ಷಕೇತರ ಸಿಬಂದಿಯನ್ನು ಮೇ 4ರಿಂದ ಕಾಲೇಜಿಗೆ ಹಾಜರಾಗುವಂತೆ ಆದೇಶ ಹೊರಡಿಸಿದೆ. ಆದರೆ ಲಾಕ್ಡೌನ್ಗೆ ಮುನ್ನ ತಮ್ಮ ಊರುಗಳಿಗೆ ತೆರಳಿದ್ದವರು ಈಗ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಅಲ್ಲೇ ಬಾಕಿ ಆಗಿದ್ದು, ಕರ್ತವ್ಯಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ.
ಅಗತ್ಯವಿಲ್ಲದಿದ್ದರೂ ಕರೆ !
ಮಂಗಳೂರು ವಿ.ವಿ. ವ್ಯಾಪ್ತಿಯಲ್ಲಿ ಬರುವ ಉಡುಪಿ, ದ.ಕ., ಕೊಡಗು ಜಿಲ್ಲೆಯ ಕಾಲೇಜುಗಳ ಶಿಕ್ಷಕರು ಮನೆ ಯಲ್ಲೇ ಇದ್ದುಕೊಂಡು ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿ ತೆಗೆದುಕೊಂಡಿದ್ದು; ತರಗತಿಗಳು ಪೂರ್ಣಗೊಂಡಿವೆ. ಮೇ ತಿಂಗಳು ಸಾಮಾನ್ಯವಾಗಿ ನಮ ಗೆಲ್ಲರಿಗೂ ರಜೆ ಅವಧಿ. ಲಾಕ್ಡೌನ್ ತೆರವುಗೊಂಡ ಬಳಿಕವಷ್ಟೇ ಶೈಕ್ಷಣಿಕ ಪ್ರಕ್ರಿಯೆಗಳು ಆರಂಭಗೊಳ್ಳ ಬೇಕಿವೆ. ಈಗ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಇಲ್ಲದೆ ಇರುವಾಗ ಸಿಬಂದಿಯನ್ನು ಮಾತ್ರ ಕರೆಯುವ ಅಗತ್ಯವೇನಿತ್ತು ಎಂದು ಉಡುಪಿಯ ಸಹಾಯಕ ಉಪನ್ಯಾಸಕರೊಬ್ಬರು ಪ್ರಶ್ನಿಸಿದ್ದಾರೆ.
ಗೈರು ಹಾಜರಾತಿ ಭಯ
ಕೋವಿಡ್-19 ಕೆಂಪು ವಲಯಗಳಾಗಿ ಗುರುತಿಸಿಕೊಂಡಿರುವ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಕಂಟೈನ್ಮೆಂಟ್ ವಲಯಗಳಲ್ಲಿ ಇರುವ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬಂದಿ ಸರಕಾರದ ಆದೇಶದಿಂದ ಕಾಲೇಜುಗಳಿಗೆ ಬರಲಾಗದೆ ತಮ್ಮ ಸಿಎಲ್ ಇತ್ಯಾದಿ ಸೌಲಭ್ಯಗಳನ್ನು ಬಳಸಿಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ.
ರಾಜ್ಯದಲ್ಲಿ ಸಾರಿಗೆ ವ್ಯವಸ್ಥೆ ಪ್ರಾರಂಭವಾಗಿಲ್ಲ. ಇಲಾಖೆಯ ಆದೇಶದಿಂದ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬಂದಿ ಪರದಾಡುತ್ತಿದ್ದಾರೆ. ಈ ಬಗ್ಗೆ ಇಲಾಖೆಯ ಗಮನಕ್ಕೆ ತರಲಾಗಿದೆ. ಮುಂದಿನ ದಿನಗಳಲ್ಲಿ ಅಗತ್ಯವಿದ್ದರೆ ಒಂದು ಗಂಟೆ ಹೆಚ್ಚುವರಿಯಾಗಿ ಕೆಲಸ ಮಾಡಲು ಸಿಬಂದಿ ಸಿದ್ಧರಿದ್ದಾರೆ.
– ಡಾ| ಎಚ್. ನಾರಾಯಣ,
ಪ್ರ. ಕಾರ್ಯದರ್ಶಿ, ಕರ್ನಾಟಕ ಸರಕಾರಿ ಕಾಲೇಜುಗಳ ಅಧ್ಯಾಪಕರ ಸಂಘ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ