ಕೋವಿಡ್ ವಾರಿಯರ್ಸ್ ಗೆ ಕೃತಜ್ಞತೆ-ಗೌರವ


Team Udayavani, May 9, 2020, 7:48 AM IST

ಕೋವಿಡ್ ವಾರಿಯರ್ಸ್ ಗೆ ಕೃತಜ್ಞತೆ-ಗೌರವ

ದಾವಣಗೆರೆ: ಕೋವಿಡ್‌-19 ವೈರಸ್‌ ಸೋಂಕಿನ ವಿರುದ್ಧ ಹಗಲಿರುಳೆನ್ನದೆ ಹೋರಾಡುತ್ತಿರುವ ವೈದ್ಯರು, ನರ್ಸ್‌ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಶುಕ್ರವಾರ ಜಿಲ್ಲಾಡಳಿತ ಮತ್ತು ಮಹಾನಗರಪಾಲಿಕೆ ವತಿಯಿಂದ ಪುಷ್ಪವೃಷ್ಟಿಗೈದು, ಚಪ್ಪಾಳೆ ತಟ್ಟುವ ಮೂಲಕ ಕೃತಜ್ಞತಾ ಗೌರವ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಕೋವಿಡ್‌-19 ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಆರೋಗ್ಯ ಸಿಬ್ಬಂದಿಗಳಿಗೆ ಗೌರವ ಸಲ್ಲಿಸುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಷಯ. ಇದು ಎರಡು ತಿಂಗಳಿನಿಂದ ಹಗಲು-ರಾತ್ರಿ ಎನ್ನದೆ ಕೆಲಸ ಮಾಡುತ್ತಿರುವವರಿಗೆ ಆತ್ಮಸ್ಥೈರ್ಯ ಹಾಗೂ ಚೈತನ್ಯ ತುಂಬಲಿದೆ. ಎಲ್ಲರೂ ತಮ್ಮ ತಮ್ಮ ಜವಾಬ್ದಾರಿ, ಕರ್ತವ್ಯಗಳನ್ನು ತುಂಬಾ ಅಚ್ಚುಕಟ್ಟಾಗಿ ಶ್ರದ್ಧೆಯಿಂದ ನಿರ್ವಹಿಸುತ್ತಿದ್ದಾರೆ ಎಂದು ಪ್ರಶಂಸಿಸಿದರು.

ಎಂತಹ ಪರಿಸ್ಥಿತಿ ಬಂದರೂ ನಾವು ನಿಭಾಯಿಸುತ್ತೇವೆ. ನಾವು ನಿಮ್ಮ ಜೊತೆಗಿದ್ದೇವೆ. ಯಾರೂ ಧೃತಿಗೆಡಬಾರದು ಎಂದು ಜಿಲ್ಲಾಧಿಕಾರಿ ಆರೋಗ್ಯ ಅಧಿಕಾರಿಗಳಿಗೆ ಹುರಿದುಂಬಿಸಿದರು. ಜಿಲ್ಲೆಯಲ್ಲಿ ಅತ್ಯಂತ ಪರಿಣಿತ ವೈದ್ಯರಿದ್ದಾರೆ. ಪ್ರತಿಯೊಬ್ಬರೂ ಚೆನ್ನಾಗಿ ಕೆಲಸ ಮಾಡುತ್ತಿದ್ದು, ಈ ಕೋವಿಡ್‌-19  ವಿರುದ್ಧದ ಯುದ್ಧ ನಾವು ಗೆಲ್ಲುತ್ತೇವೆ ಎಂಬ ವಿಶ್ವಾಸ ಇದೆ. ಮೇಯರ್‌ ಸಹ ಡೈನಾಮಿಕ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಅವರು ಮುಂಬರುವ ಸವಾಲಿನ ದಿನಗಳಲ್ಲಿ ಅತ್ಯಂತ ಕ್ರಿಯಾಶೀಲರಾಗಿ ಓಡಾಡಿ ಜನರಲ್ಲಿ ಆತ್ಮ ವಿಶ್ವಾಸ ತುಂಬಿ, ನಾವು ನಿಮ್ಮ ಜೊತೆಗಿದ್ದೇವೆ ಎಂದೇಳಬೇಕಿದೆ. ಇಷ್ಟು ದಿನದ ಕಾಲ ಬೇರೆ ಇತ್ತು. ಈಗಿನ ಕಾಲ ಬೇರೆಯಾಗಿದೆ. ನಾವು ಕೂಡ ನಿಮ್ಮ ಜೊತೆ ಕೈಜೋಡಿಸುತ್ತೇವೆ ಎಂದು ಮೇಯರ್‌ಗೆ ಭರವಸೆ ನೀಡಿದರು.

ಮೇಯರ್‌ ಬಿ.ಜಿ. ಅಜಯಕುಮಾರ್‌ ಮಾತನಾಡಿ, ಜಿಲ್ಲಾಧಿಕಾರಿ ಮತ್ತು ಪೊಲೀಸ್‌ ವರಿಷ್ಠಾಧಿಕಾರಿಗಳು ಎಲ್ಲ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗದುಕೊಂಡು ಪ್ರತಿದಿನ ಸಭೆ ನಡೆಸುವ ಮೂಲಕ ಒಂದು ಹಂತದಲ್ಲಿ ಜಿಲ್ಲೆಯಲ್ಲಿ ಒಂದೇ ಒಂದು ಕೋವಿಡ್‌-19 ಸೋಂಕು ಪ್ರಕರಣ ವರದಿಯಾಗಿರಲಿಲ್ಲ. ಆದರೆ, ದುರಾದೃಷ್ಟವೋ, ಎಡವಲಾಯಿತೋ ಗೊತ್ತಿಲ್ಲ. ಈಗ ಕೋವಿಡ್‌-19 ಸೋಂಕು ವ್ಯಾಪಿಸಿದೆ. ಇದೊಂದು ಯುದ್ಧವಾಗಿದ್ದು, ಎದುರಿಸಲು ಸನ್ನದ್ಧರಾಗಿದ್ದೇವೆ ಎಂದರು.

ಮಹಾಭಾರತದಲ್ಲಿ ಕೌರವರ ವಿರುದ್ಧ ಯುದ್ಧ ಮಾಡಲು ಶ್ರೀಕೃಷ್ಣ ಸಾರಥಿಯಾದಂತೆ ಇಂದು ದೇಶದಲ್ಲಿ ಕೋವಿಡ್‌-19  ವೈರಸ್‌ ಓಡಿಸಲು ವೈದ್ಯರು, ನರ್ಸ್‌ಗಳು, ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಸಾರಥಿಯಾಗಿದ್ದಾರೆ. ಇದೊಂದು ಸವಾಲಾಗಿ ಸ್ವೀಕರಿಸಿ ಕೋವಿಡ್‌-19 ಮುಕ್ತಗೊಳಿಸುವ ಮೂಲಕ ದಾವಣಗೆರೆ ಮಾದರಿ ಜಿಲ್ಲೆಯಾಗಿಸೋಣ ಎಂದು ಹೇಳಿದರು.

ಪಿಜಿ ವಿದ್ಯಾರ್ಥಿಗಳ ಸ್ಟೆçಫಂಡ್‌ ನೀಡಿಲ್ಲ. ಜೊತೆಗೆ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಸರಿಯಾದ ಊಟ ಸಿಗುತ್ತಿಲ್ಲ ಹಾಗೂ ವಿಶ್ರಾಂತಿಗಾಗಿ ಗುಂಡಿ ಕಲ್ಯಾಣ ಮಂಟಪ ವ್ಯವಸ್ಥೆ ಮಾಡಿಸುವ ಕುರಿತು ಕೇಳಿಕೊಂಡಿದ್ದಾರೆ. ಈ ಬಗ್ಗೆ ಕೂಡಲೇ ಜಿಲ್ಲಾಡಳಿತದೊಂದಿಗೆ ಸೇರಿ ಕ್ರಮ ಕೈಗೊಳ್ಳಲಾಗುವುದು ಎಂದು ಮೇಯರ್‌ ಭರವಸೆ ನೀಡಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ. ರಾಜೀವ್‌ ಮಾತನಾಡಿ, ಇದೊಂದು ಯುದ್ಧದ ಸಂದರ್ಭ. ಎಲ್ಲರೂ ಸನ್ನದ್ಧರಾಗೋಣ. ಇದಕ್ಕೆ ಜಿಲ್ಲೆಯ ನಾಗರಿಕರು ಸಹಕರಿಸಬೇಕು. ಕೋವಿಡ್ ಬಂದಾಗ ನೋಡೊಣಾ ಎನ್ನುವ ತಪ್ಪು ಕಲ್ಪನೆ ಜನರಲ್ಲಿದೆ ಇದೊಂದು ಕಣ್ಣಿಗೆ ಕಾಣಲಾರದ ವೈರಸ್‌. ಹಾಗಾಗಿ ನಮ್ಮ ರಕ್ಷಣೆಯಲ್ಲಿ ನಾವಿರಬೇಕು ಎಂದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ನಾಗರಾಜ್‌ ಮಾತನಾಡಿ, ನಮಗೆ ಚೈತನ್ಯ ತುಂಬಲು ಗೌರವ ಸಲ್ಲಿಸಿದ್ದಕ್ಕೆ ಧನ್ಯವಾದ. ಎಲ್ಲ ರೀತಿಯ ಬೆಂಬಲ ನೀಡುತ್ತಾ ಹೋದರೆ ಖಂಡಿತವಾಗಿಯೂ ಕೂಡ ಮಹಾಮಾರಿ ಕೊರೊನಾ ಹಿಮ್ಮೆಟ್ಟಿಸುವ ವಿಶ್ವಾಸ ನಮ್ಮಲಿದೆ. ಇಷ್ಟು ದಿನ ಜಿಲ್ಲಾಡಳಿತ ಮತ್ತು ಮಹಾನಗರಪಾಲಿಕೆ ನಮ್ಮ ಜೊತೆಯಲ್ಲೇ ಇದೆ. ಮುಂದೆಯೂ ಇನ್ನೂ ಹೆಚ್ಚಿನ ಬೆಂಬಲ ನಮಗೆ ನೀಡಬೇಕು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.