ಗಡಿ ಭಾಗದಲ್ಲಿ ಕೋವಿಡ್ ಸೋಂಕು ದೃಢ

ಆಂಧ್ರ, ತಮಿಳುನಾಡು ಗಡಿ ಗ್ರಾಮಗಳಲ್ಲಿ ಐವರು ರೈತರಿಗೆ ಕೋವಿಡ್

Team Udayavani, May 9, 2020, 12:54 PM IST

ಗಡಿ ಭಾಗದಲ್ಲಿ ಕೋವಿಡ್ ಸೋಂಕು ದೃಢ

ಸಾಂದರ್ಭಿಕ ಚಿತ್ರ

ಮುಳಬಾಗಿಲು: ಆಂಧ್ರದ ಚಿತ್ತೂರು ಜಿಲ್ಲೆಯ ವಿ.ಕೋಟೆ ಮಂಡಲಂ ವ್ಯಾಪ್ತಿಯ ಪಟ್ರಪಲ್ಲಿ ಗ್ರಾಮದ ಐವರು ರೈತರಿಗೆ ಕೋವಿಡ್ ಸೋಂಕು ದೃಢಪಟ್ಟಿರುವುದರಿಂದ ಗಡಿ ಗ್ರಾಮಗಳ ಜನ ಆತಂಕಗೊಂಡಿದ್ದು, ಅಬಕಾರಿ ಸಚಿವ ಎಚ್‌.ನಾಗೇಶ್‌ ಸೂಚನೆಯಂತೆ ತಾಲೂಕು ಅಧಿಕಾರಿಗಳು ಗಡಿ ಭಾಗದ ಹಳ್ಳಿಗಳಿಗೆ ಭೇಟಿ ನೀಡಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿಗೆ ತಮಿಳುನಾಡಿನ ಕೊಯಂ ಬೀಡು ಮಾರುಕಟ್ಟೆಗೆ ತರಕಾರಿ ಹಾಕಿಕೊಂಡು ಹೋಗಿದ್ದ ಆಂಧ್ರದ ಚಿತ್ತೂರು ಜಿಲ್ಲೆಯ ಪಲಮನೇರು ತಾಲೂಕಿನ ವಿ.ಕೋಟೆ ಮಂಡ
ಲಂನ ಪಟ್ರಪಲ್ಲಿ ಗ್ರಾಮದ ಐವರು ರೈತರಿಗೆ ಕೋವಿಡ್ ಸೋಂಕು ದೃಢಪಟ್ಟಿರುವುದರಿಂದ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌, ಜಿಲ್ಲೆಯಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ.

ಚೆಕ್‌ಪೋಸ್ಟ್‌ಗೆ ಭೇಟಿ: ಇದರಿಂದ ಗ್ರೀನ್‌ ಜೋನ್‌ನಲ್ಲಿದ್ದ ಕೋಲಾರ ಜಿಲ್ಲೆಯ ಮುಳ ಬಾಗಿಲು ತಾಲೂಕಿನ ತಹಶೀಲ್ದಾರ್‌ ರಾಜ ಶೇಖರ್‌, ತಾಲೂಕು ಪಂಚಾಯಿತಿ ಅಧ್ಯಕ್ಷ ಎ.ವಿ.ಶ್ರೀನಿವಾಸ್‌, ಇಒ ಬಾಬು, ಸಿಪಿಐ ಮಾರ್ಕಂಡಯ್ಯ, ತಾಲೂಕು ಆರೋಗ್ಯಾಧಿಕಾರಿ ಡಾವರ್ಣಶ್ರೀ, ಅಬಕಾರಿ ನಿರೀಕ್ಷಕ ಚಿರಂಜೀವಿ ಶುಕ್ರವಾರ ಆಂಧ್ರದ ಗಡಿಯಲ್ಲಿರುವ ಬಿ.ಹೊಸಹಳ್ಳಿ, ತಿಮ್ಮರಾವುತನಹಳ್ಳಿ
ಮತ್ತು ಕುಪ್ಪಂಪಾಳ್ಯ ಚೆಕ್‌ ಪೋಸ್ಟ್‌ಗಳಿಗೆ ಭೇಟಿ ನೀಡಿದರು. ಚೆಕ್‌ ಪೋಸ್ಟ್‌ನಲ್ಲಿ ಇಬ್ಬರು ಪೊಲೀಸರು, ಇಬ್ಬರು ಆಶಾ ಕಾರ್ಯಕರ್ತೆಯರು, ಕಂದಾಯ ಮತ್ತು ಗ್ರಾಪಂನ ಒಟ್ಟು 8
ಸಿಬ್ಬಂದಿಗಳ ಕಾರ್ಯ ವೈಖರಿ ಪರಿಶೀಲಿಸಿದರು.

ಸಂಚಾರ ಬಂದ್‌: ಕರ್ನಾಟಕ ಮತ್ತು ವಿ. ಕೋಟೆ ಸಂಪರ್ಕ ರಸ್ತೆಗಳನ್ನು ಜೆಸಿಬಿಯಿಂದ ಹಳ್ಳ ತೋಡಿ ಕಲ್ಲುಗಳನ್ನು ಅಡ್ಡಹಾಕಿ ಸಂಚಾರ ನಿರ್ಬಂಧಿಸಿದ್ದಾರೆ. ಮಲ್ಲನಾಯಕನಹಳ್ಳಿ,
ತಿಮ ರಾವುತನಹಳ್ಳಿ ಅಪ್ಪಿಕೊಂಡೇನಹಳ್ಳಿ, ಏತೋರ ಹಳ್ಳಿ, ಯಳಚೇಪಲ್ಲಿ, ಬೈರಸಂದ್ರ ಸೇರಿ ಹಲವು ಗಡಿ ಗ್ರಾಮಗಳಿಗೆ ಭೇಟಿ ನೀಡಿ ಆಂಧ್ರಕ್ಕೆ ಜನರು ಹೋಗದಂತೆ ಆಂಧ್ರದಿಂದ
ಗ್ರಾಮಗಳಿಗೆ ಬರ ದಂತೆ ನೋಡಿಕೊಳ್ಳಿ, ಒಂದು ವೇಳೆ ಯಾರಾ ದರೂ ಬಂದರೆ ಕೂಡಲೇ ಪೊಲೀಸ್‌ ಮತ್ತು ಆರೋಗ್ಯ ಇಲಾಖೆಗೆ ಮಾಹಿತಿ ನೀಡಲು ಕೋರಿದರು.

ಮದ್ಯ ಕೊಡಬೇಡಿ: ಮಲ್ಲನಾಯಕನಹಳ್ಳಿ ಮತ್ತು ತಾಯಲೂರು ಗ್ರಾಮದ ಮೂರು ಬಾರ್‌ಗಳಿಗೂ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿ ಸ್ಥಳೀಯರಿಗೆ ಮಾತ್ರ ಮದ್ಯ ನೀಡಿ, ಅಲ್ಲದೇ ಯಾವುದೇ ಸ್ಥಳೀಯರು ಆಂಧ್ರದವರಿಗೆ ಮದ್ಯ ಪಡೆದುಕೊಳ್ಳಲು ದಾಖಲೆ ನೀಡಿದರೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು. ಅಲ್ಲದೇ, ಆಂಧ್ರದಿಂದ ಯಾರೇ ಬಂದರೂ ಮದ್ಯ ನೀಡದೇ ಕೂಡಲೇ ಮಾಹಿತಿ ನೀಡಬೇಕೆಂದು ಬಾರ್‌ ಮಾಲಿಕರಿಗೆ ಸೂಚಿಸಿದರು.

ಟಾಪ್ ನ್ಯೂಸ್

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.