ಕಾರ್ಮಿಕರಿಗೆ ಮಾಸ್ಕ್ ವಿತರಣೆ
Team Udayavani, May 9, 2020, 5:30 PM IST
ಚಡಚಣ: ಕೊರೊನಾ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರ ತಡೆಗಾಗಿ ಪ್ರತಿಯೊಬ್ಬ ಕೂಲಿ ಕಾರ್ಮಿಕರು ಮಾಸ್ಕ್ ಹಾಕಿಕೊಂಡು ಮತ್ತು ಸಾಮಾಜಿಕ ಅಂತರ ಕಾಪಾಡಿಕೊಂಡು ಕೆಲಸ ಮಾಡಬೇಕು. ನಿರ್ಲಕ್ಷಿಸಿದರೆ ಅಪಾಯ ತಪ್ಪಿದ್ದಲ್ಲ ಎಂದು ನಾಗಠಾಣ ಶಾಸಕ ಡಾ| ದೇವಾನಂದ ಚವ್ಹಾಣ ಸಲಹೆ ನೀಡಿದರು.
ಸಮೀಪದ ಜಿಗಜೇವಣಿ ಗ್ರಾಮದಲ್ಲಿ ಉದ್ಯೋಗ ಖಾತ್ರಿಯಡಿ ನಡೆಯುತ್ತಿರುವ ಕೆರೆ ಕಾಮಗಾರಿ ಪರಿಶೀಲಿಸಿ ಮತ್ತು 200 ಕೂಲಿ ಕಾರ್ಮಿಕರಿಗೆ ಮಾಸ್ಕ್ ವಿತರಿಸಿ ಅವರು ಮಾತನಾಡಿದರು. ಈವರೆಗೆ ಚಡಚಣ ತಾಲೂಕಿನಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ. ನಿಮ್ಮೂರಿಗೆ ಯಾರೇ ಹೊಸಬರು ಬಂದರೆ ತಕ್ಷಣ ಅಧಿಕಾರಿಗಳಿಗೆ ತಿಳಿಸಬೇಕು. ಅಕ್ಕಪಕ್ಕದ ಜನರಿಗೆ ಒಂದು ವೇಳೆ ಸೋಂಕಿನ ಲಕ್ಷಣ ಕಂಡುಬಂದರೆ ಆರೋಗ್ಯ ಕೇಂದ್ರಕ್ಕೇ ಭೇಟಿ ನೀಡಿ ಚಿಕಿತ್ಸೆ ಪಡೆಯಬೇಕು ಎಂದರು.
ಆಶಾ ಕಾರ್ಯಕರ್ತೆಯರು ಮನೆ-ಮನೆಗೆ ಭೇಟಿ ನೀಡುತ್ತಿದ್ದು ಅವರಿಗೆ ಆರೋಗ್ಯದ ಕುರಿತು ಸಮರ್ಪಕ ಮಾಹಿತಿ ನೀಡಿ ಸಹಕರಿಸಬೇಕು ಎಂದರು. ಗ್ರಾಪಂ ಅಧ್ಯಕ್ಷ ಹಣಮಂತ್ರಾಯಗೌಡ ಪಾಟೀಲ, ಎಪಿಎಂಸಿ ಉಪಾಧ್ಯಕ್ಷ ಬಾಬುಗೌಡ ಚವ್ಹಾಣ, ತಾಪಂ ಸದಸ್ಯ ರವಿದಾಸ ಜಾಧವ, ಪಿಡಿಒ ದಾನಯ್ಯ ಕರಜಗಿ, ತಾಪಂ ಸದಸ್ಯ ಅಮಸಿದ್ದ ಬಳಗಾನೂರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ
Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್
BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ
Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ
Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ
MUST WATCH
ಹೊಸ ಸೇರ್ಪಡೆ
Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್ಗಳು ಸಕ್ಸಸ್
Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
Thomas Cup: ಬ್ಯಾಡ್ಮಿಂಟನ್; ಭಾರತದ ಆಟಕ್ಕೆ ತೆರೆ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!