ಮಂಗಳೂರು ಸೋಂಕಿನ ಮೂಲವೇ ಭಟ್ಕಳದಲ್ಲೂ ಹರಡಿತು!

ತನಿಖಾ ವರದಿ ರವಿವಾರ ಬರಲಿದೆ ಎಂದ ಸಚಿವ ಕೋಟ; ಪಡೀಲ್‌ ಆಸ್ಪತ್ರೆ ಸಂಪರ್ಕದಿಂದ 38 ಪ್ರಕರಣ!

Team Udayavani, May 10, 2020, 6:35 AM IST

ಮಂಗಳೂರು ಸೋಂಕಿನ ಮೂಲವೇ ಭಟ್ಕಳದಲ್ಲೂ ಹರಡಿತು!

ಮಂಗಳೂರು: ಕರಾವಳಿಯಲ್ಲಿ ಕೋವಿಡ್-19 ವ್ಯಾಪಕವಾಗಿ ಹರಡುತ್ತಿದ್ದು, ಅದರ ಮೂಲ ಯಾವುದು ಎನ್ನುವುದು ದಿನದಿಂದ ದಿನಕ್ಕೆ ನಿಗೂಢವಾಗುತ್ತಿದೆ. ಸದ್ಯ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಕಾಡುತ್ತಿರುವ ಆತಂಕ ಇದೇ.

ಪಡೀಲ್‌ನ ಫಸ್ಟ್‌ ನ್ಯೂರೊ ಆಸ್ಪತ್ರೆಯ ಸಂಪರ್ಕದಿಂದ ಶನಿವಾರ ದ.ಕ. ಜಿಲ್ಲೆ ಯಲ್ಲಿ 3 ಮತ್ತು ಉತ್ತರ ಕನ್ನಡದ ಭಟ್ಕಳದಲ್ಲಿ 8 ಕೋವಿಡ್-19 ಪ್ರಕರಣ ಪತ್ತೆ ಯಾಗಿವೆ. ಎರಡೂ ಜಿಲ್ಲೆಗಳಲ್ಲಿ ಕಳೆದ 22 ದಿನಗಳಲ್ಲಿ ಈ ಆಸ್ಪತ್ರೆಯ ಸಂಪರ್ಕದಿಂದ ತಗಲಿ ದೃಢವಾಗಿರುವ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 38!

ಇಷ್ಟು ಗಂಭೀರ ಪರಿಸ್ಥಿತಿ ನಿರ್ಮಾಣ ವಾಗಿದ್ದರೂ ದ.ಕ. ಜಿಲ್ಲೆಯ ಬಂಟ್ವಾಳ ದಲ್ಲಿ ಮೂರು ವಾರಗಳ ಹಿಂದೆ ಮೊದಲ ಸೋಂಕು ದೃಢಪಟ್ಟಿದ್ದ 50ರ ಮಹಿಳೆಗೆ ಅದು ಯಾವ ಮೂಲದಿಂದ ತಗಲಿತ್ತು ಎನ್ನುವುದನ್ನು ಪತ್ತೆ ಮಾಡಲು ಇನ್ನೂ ಸಾಧ್ಯ ಆಗದಿರುವುದು ವಿಪರ್ಯಾಸ.

ದ.ಕ. ಸೋಂಕಿನ ಮೂಲ ಪತ್ತೆಯ ತನಿಖಾ ವರದಿ ಮೇ 10ರಂದು ಕೈಸೇರಲಿದ್ದು, ಅದನ್ನು ಆಧರಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತು ವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ “ಉದಯವಾಣಿ’ಗೆ ತಿಳಿಸಿದ್ದಾರೆ.

ಪ್ರಕರಣಗಳ ಮೂಲ ಒಂದೇ
ದ.ಕ.ದ ಕೋವಿಡ್-19 ಮೂಲವೇ ಉತ್ತರ ಕನ್ನಡದ ಭಟ್ಕಳದ ಸೋಂಕಿನ ಮೂಲವೂ ಆಗಿದೆ ಎಂದು ಉತ್ತರ ಕನ್ನಡದ ಡಿಸಿ ಡಾ| ಹರೀಶ್‌ ಕುಮಾರ್‌ ಹೇಳಿದ್ದಾರೆ.

ಭಟ್ಕಳದಲ್ಲಿ ಮೊದಲ ಪಾಸಿಟಿವ್‌ ಬಂದ ಮನೆಯ ಸದಸ್ಯರು ಫಸ್ಟ್‌ ನ್ಯೂರೋ ಆಸ್ಪತ್ರೆ ಬಿಟ್ಟರೆ ಬೇರೆಲ್ಲೂ ಹೋಗಿರಲಿಲ್ಲ. ಆ ಆಸ್ಪತ್ರೆಯಿಂದ ದ.ಕ. ಜಿಲ್ಲೆಯಲ್ಲೂ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ. ಆದರೆ ಅದೇ ಆಸ್ಪತ್ರೆಯಿಂದ ಸೋಂಕು ಹರಡಿದೆ ಎಂಬುದನ್ನು ಅಲ್ಲಿನ ಜಿಲ್ಲಾಧಿಕಾರಿಗಳೇ ಮೂಲ ಪತ್ತೆ ಮಾಡಿ ತಿಳಿಸಬೇಕು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಉ.ಕ.ದ 10 ಮಂದಿಗೆ ಫಸ್ಟ್‌
ನ್ಯೂರೋದಲ್ಲಿ ಚಿಕಿತ್ಸೆ
ಭಟ್ಕಳದಿಂದ ಪಡೀಲಿನ ಫಸ್ಟ್‌ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಎ. 10ರಿಂದ ಎ. 20ರ ನಡುವೆ ಒಟ್ಟು ಮೂರು ಕುಟುಂಬಗಳ 10 ಮಂದಿ ಬಂದಿದ್ದರು ಎಂಬ ಮಾಹಿತಿ ಇದೆ. ಭಟ್ಕಳದಲ್ಲಿ ಮೇ 6ರಂದು ಯುವತಿಗೆ ಸೋಂಕು ದೃಢಪಟ್ಟ ತತ್‌ಕ್ಷಣವೇ ಅವರ ಟ್ರಾವೆಲ್‌ ಹಿಸ್ಟರಿಯನ್ನು ಅಲ್ಲಿನ ಜಿಲ್ಲಾಡಳಿತ ಕಲೆ ಹಾಕಿತ್ತು. ಆ ಕುಟುಂಬ ಫಸ್ಟ್‌ ನ್ಯೂರೋ ವಿನಾ ಬೇರೆಲ್ಲೂ ಹೋಗಿಲ್ಲ ಎಂಬುದು ಗೊತ್ತಾಗಿದೆ. ಹೀಗಾಗಿ ಅಲ್ಲಿನ ಜಿಲ್ಲಾಡಳಿತ ದ.ಕ. ಜಿಲ್ಲಾಡಳಿತವನ್ನು ಸಂಪರ್ಕಿಸಿ ಎ.1ರ ಬಳಿಕ ಆಸ್ಪತ್ರೆಗೆ ಭೇಟಿ ನೀಡಿದ ಉ.ಕನ್ನಡದ ಎಲ್ಲರ ವಿವರಗಳನ್ನು ತರಿಸಿಕೊಂಡಿದೆ. ಎ.13ರ ಆಸುಪಾಸು, ಎ.17 ಮತ್ತು  ಎ. 20ರಂದು ಒಟ್ಟು ಮೂರು ಕುಟುಂಬಗಳ 10 ಮಂದಿ ಫಸ್ಟ್‌ ನ್ಯೂರೋಕ್ಕೆ ಆಗಮಿಸಿದ್ದಾರೆ. ಈ ಪೈಕಿ ಎ. 20ರಂದು ಆಗಮಿಸಿದ್ದ ಐದು ತಿಂಗಳ ಮಗು ಮತ್ತು ಆತನ ತಂದೆಗೆ ಪಾಸಿಟಿವ್‌ ಬಂದಿದೆ.

ಹೊರ ರೋಗಿಗಳ
ಮಾಹಿತಿ ನೀಡಿಲ್ಲ!
ಫಸ್ಟ್‌ ನ್ಯೂರೋದಲ್ಲಿ ಎ.1ರಿಂದ 20ರ ನಡುವೆ ಚಿಕಿತ್ಸೆ ಪಡೆದು ಬಿಡುಗಡೆಗೊಂಡ 79 ಮಂದಿಯ ಮಾಹಿತಿಯನ್ನು ದ.ಕ. ಜಿಲ್ಲಾ ಆರೋಗ್ಯ ಇಲಾಖೆಯು ಆಯಾ ಜಿಲ್ಲೆಗಳಿಗೆ ನೀಡಿತ್ತು. ಆದರೆ ಭಟ್ಕಳದ 10 ಮಂದಿಯ ಮಾಹಿತಿ ನೀಡಿರಲಿಲ್ಲ. ಈ ಬಗ್ಗೆ ಉ.ಕ. ಜಿಲ್ಲಾಡಳಿತವು ವಿಚಾರಿಸಿದಾಗ, ಒಳರೋಗಿಗಳ ಮಾಹಿತಿ ಮಾತ್ರ ಒದಗಿಸಲಾಗಿದೆ. ಹೊರರೋಗಿಗಳದ್ದಲ್ಲ ಎಂದು ತಿಳಿಸಿದ್ದರು. ಈ ನಡುವೆ, ಉಡುಪಿ ಜಿಲ್ಲಾಧಿಕಾರಿಗಳು, ಫಸ್ಟ್‌ ನ್ಯೂರೋ ಆಸ್ಪತ್ರೆಯಲ್ಲಿ ಮಾ.1ರಿಂದ ಒಳ ಮತ್ತು ಹೊರರೋಗಿಗಳಾಗಿ ದಾಖಲಾಗಿರುವ ಉಡುಪಿ ಜಿಲ್ಲೆಯ ನಿವಾಸಿಗಳ ಬಗ್ಗೆ ಮಾಹಿತಿ ನೀಡಬೇಕೆಂದು ಕೋರಿದ್ದಾರೆ.

ಮಾಹಿತಿ ನೀಡಿದ್ದೇವೆ; ನೀಡಿಲ್ಲ !
ಫಸ್ಟ್‌ ನ್ಯೂರೋದಲ್ಲಿ ಫೆ. 1ರಿಂದಲೇ ದಾಖಲಾದವರು, ಬಿಡುಗಡೆಯಾದವರು ಮತ್ತು ಹೊರರೋಗಿಗಳಾಗಿ ಬಂದು ಹೋದವರ ಎಲ್ಲ ಮಾಹಿತಿಯನ್ನು ದ.ಕ. ಜಿಲ್ಲಾ ಆರೋಗ್ಯ ಇಲಾಖೆಗೆ ನೀಡಿದ್ದೇವೆ. ಭಟ್ಕಳದ ಐದು ತಿಂಗಳ ಮಗು ಚಿಕಿತ್ಸೆ ಪಡೆದಿರುವ ಬಗ್ಗೆಯೂ ಎ. 23ರಂದು ಮಾಹಿತಿ ರವಾನಿಸಲಾಗಿದೆ ಎನ್ನುವುದು ಆಸ್ಪತ್ರೆಯವರ ವಾದ. ಆದರೆ ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಯವರಲ್ಲಿ ವಿಚಾರಿಸಿದಾಗ, ಎ. 23ರಂದು ಆರೋಗ್ಯ ಇಲಾಖೆಗೆ ಆಸ್ಪತ್ರೆಯಿಂದ ಯಾವುದೇ ಮಾಹಿತಿ ಬಂದಿಲ್ಲ; ಫಸ್ಟ್‌ ನ್ಯೂರೋದಲ್ಲಿ ಚಿಕಿತ್ಸೆ ಪಡೆದು ಕೋವಿಡ್‌ ಆಸ್ಪತ್ರೆಗೆ ಸ್ಥಳಾಂತರಗೊಂಡ ವೃದ್ಧೆ ಎ. 23ರಂದು ಮೃತಪಟ್ಟ ಹಿನ್ನೆಲೆಯಲ್ಲಿ ಆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾದ ಎಲ್ಲ ಒಳರೋಗಿಗಳ ಮಾಹಿತಿ ಕಲೆ ಹಾಕಿ ಆಯಾ ಜಿಲ್ಲಾಡಳಿತಗಳಿಗೆ ಎ. 27ರಂದು ಕಳುಹಿಸಿ ಕೊಡಲಾಗಿತ್ತು. ಆ ಬಳಿಕ ಹೊರರೋಗಿಗಳಾಗಿ ಆಗಮಿಸಿದ್ದವರ ಮಾಹಿತಿಯನ್ನೂ ಮೇ ಪ್ರಥಮ ವಾರದಲ್ಲಿ ಸಂಗ್ರಹಿಸಿ ಮೇ 5ಕ್ಕೆ ಎಲ್ಲ ಜಿಲ್ಲಾಡಳಿತಗಳಿಗೆ ಕಳುಹಿಸಿ ಕೊಡಲಾಗಿತ್ತು ಎಂದಿದ್ದಾರೆ. ಆದರೆ ಒಟ್ಟು ಬೆಳವಣಿಗೆಗಳ ಬಗ್ಗೆ ಮಾತನಾಡಲು ಫಸ್ಟ್‌ ನ್ಯೂರೋ ಆಸ್ಪತ್ರೆಯ ಎಂಡಿ ಡಾ| ರಾಜೇಶ್‌ ಶೆಟ್ಟಿ ನಿರಾಕರಿಸಿದ್ದಾರೆ.

ಹಸ್ತಕ್ಷೇಪವಿಲ್ಲ: ಅಶ್ವತ್ಥ ನಾರಾಯಣ
ಫಸ್ಟ್‌ ನ್ಯೂರೋ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಗಳಿಗೆ ಕೋವಿಡ್-19 ತಗಲಿದ್ದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ನಾನು ಹಸ್ತಕ್ಷೇಪ ಮಾಡಿಲ್ಲ ಎಂದು ಡಿಸಿಎಂ ಡಾ| ಅಶ್ವತ್ಥ ನಾರಾಯಣ ಸ್ಪಷ್ಟಪಡಿಸಿದ್ದಾರೆ. ಫಸ್ಟ್‌ ನ್ಯೂರೋ ಸಂಪರ್ಕಿತರ ಮೂಲಕ ದ.ಕ. ಮತ್ತು ಉ.ಕ. ಜಿಲ್ಲೆಗೆ ಸೋಂಕು ಹರಡುತ್ತಿದ್ದರೂ ಆ ಆಸ್ಪತ್ರೆಯ ಬಗ್ಗೆ ತನಿಖೆ ನಡೆಸದಂತೆ ಡಿಸಿಎಂ ಅಶ್ವತ್ಥ ನಾರಾಯಣ ಹಸ್ತಕ್ಷೇಪ ಮಾಡುತ್ತಿದ್ದಾರೆ ಎನ್ನುವ ಆರೋಪ ಬಂದಿರುವ ಹಿನ್ನೆಲೆಯಲ್ಲಿ ಅವರು “ಉದಯವಾಣಿ’ಗೆ ಸ್ಪಷ್ಟನೆ ನೀಡಿದ್ದಾರೆ. ದ.ಕ. ಜಿಲ್ಲೆಯ ಸೋಂಕಿನ ಮೂಲ ಪತ್ತೆಯನ್ನು ಅಲ್ಲಿನ ಸ್ಥಳೀಯಾಡಳಿತ ಮಾಡಲಿದೆ. ಒತ್ತಡ ಹೇರುವಂತಹ ಯಾವುದೇ ಪ್ರಯತ್ನ ಮಾಡುತ್ತಿಲ್ಲ ಎಂದು ಡಿಸಿಎಂ ಹೇಳಿದ್ದಾರೆ.

ಸೋಂಕಿನ ಮೂಲ ಪತ್ತೆ ತನಿಖೆಯ ವರದಿ ರವಿವಾರ ಕೈ ಸೇರುವ ಸಾಧ್ಯತೆ ಇದೆ. ಅದನ್ನಾಧರಿಸಿ ಕ್ರಮ ಕೈಗೊಳ್ಳಲಾಗುವುದು.
ಕೋಟ ಶ್ರೀನಿವಾಸ ಪೂಜಾರಿ,
ದ.ಕ. ಜಿಲ್ಲಾ ಉಸ್ತುವಾರಿ ಸಚಿವ

ಮಂಗಳೂರು ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಉಡುಪಿ ಜಿಲ್ಲೆಯ 30 ಜನರನ್ನು ಶನಿವಾರ ಆಸ್ಪತ್ರೆಗಳಲ್ಲಿ ಕ್ವಾರಂಟೈನ್‌ಗೆ ಅಳವಡಿಸಿದ್ದೇವೆ.
– ಡಾ| ಸುಧೀರ್‌ಚಂದ್ರ ಸೂಡ,
ಜಿಲ್ಲಾ ಆರೋಗ್ಯಾಧಿಕಾರಿ, ಉಡುಪಿ

ಎಪ್ರಿಲ್‌ನಲ್ಲಿ ಉತ್ತರ ಕನ್ನಡದ 10 ಮಂದಿ ಫ‌ಸ್ಟ್‌ ನ್ಯೂರೋ ಆಸ್ಪತ್ರೆಗೆ ಭೇಟಿ ನೀಡಿರುವುದು ಗೊತ್ತಾಗಿದೆ. ಒಂದುವೇಳೆ ಎಲ್ಲರಿಗೂ ಪಾಸಿಟಿವ್‌ ಬಂದಲ್ಲಿ ದ.ಕ. ಜಿಲ್ಲಾಧಿಕಾರಿಗೆ ಪತ್ರ ಬರೆದು ವಿಷಯದ ಗಂಭೀರತೆಯನ್ನು ತಿಳಿಸಲಾಗುವುದು.
-ಡಾ| ಹರೀಶ್‌ ಕುಮಾರ್‌,
ಉತ್ತರ ಕನ್ನಡ ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.