ಮಲ್ಲಿಗೆ ಬೆಳೆಗಾರರಿಗೆ ಪರಿಹಾರ
Team Udayavani, May 10, 2020, 12:54 PM IST
ಹಗರಿಬೊಮ್ಮನಹಳ್ಳಿ: ಮಲ್ಲಿಗೆ ಬೆಳೆ ಪ್ರದೇಶಕ್ಕೆ ಶಾಸಕ ಎಸ್.ಭೀಮಾ ನಾಯ್ಕ ಭೇಟಿ ನೀಡಿ ಪರಿಶೀಲಿಸಿದರು
ಹಗರಿಬೊಮ್ಮನಹಳ್ಳಿ: ಲಾಕ್ ಡೌನ್ ವೇಳೆ ಮಾರುಕಟ್ಟೆ ಇಲ್ಲದೆ ಕಂಗಾಲಾಗಿದ್ದ ಮಲ್ಲಿಗೆ ಬೆಳೆಗಾರರ ಪ್ರದೇಶಕ್ಕೆ ಶಾಸಕ ಎಸ್. ಭೀಮಾ ನಾಯ್ಕ ಭೇಟಿ ನೀಡಿ, ಪರಿಹಾರಕ್ಕೆ ಆಗ್ರಹಿಸಿರುವುದು ಫಲ ನೀಡಿದೆ ಎಂದು ರೈತಪರ ಹೋರಾಟಗಾರ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಜೆ.ಎಂ. ವೀರಸಂಗಯ್ಯ ತಿಳಿಸಿದರು.
ಪಟ್ಟಣದ ಸರ್ಕ್ನೂಟ್ ಹೌಸ್ ನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕೋವಿಡ್ ಪರಿಣಾಮದ ಲಾಕ್ಡೌನ್ನಿಂದಾಗಿ ಮಲ್ಲಿಗೆ ಬೆಳೆಗಾರರಿಗೆ ಸಿಎಂ ಪ್ರತಿ ಹೆ.ಗೆ 25ಸಾವಿರ ರೂ.ಪರಿಹಾರ ಘೋಷಿಸಿರುವುದು ಸ್ವಾಗತಾರ್ಹ. ಬೆಳೆಗಾರರಿಗೆ ಹೂಡಿದ ಬಂಡವಾಳ ಹಿಂತಿರುಗದ ಸ್ಥಿತಿ ಉಂಟಾಗಿದೆ. ಶಿವಮೊಗ್ಗ ಮಾರುಕಟ್ಟೆಗೆ ಒಟ್ಟು 28ದಿನ ವಾಹನದ ಸೌಲಭ್ಯ ಕಲ್ಪಿಸಿದ್ದಾರೆ. ಶಿವಮೊಗ್ಗ ಮತ್ತು ಕೊಪ್ಪಳ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಮಾರುಕಟ್ಟೆ ಸೌಲಭ್ಯ ಕಲ್ಪಿಸಿರುವುದು ರೈತ ಪರವಾಗಿದೆ ಎಂದರು.
ತಾಲೂಕಿನಲ್ಲಿ ಸಿಎಂ ಕ್ರಮದಿಂದಾಗಿ ಒಟ್ಟು 400ಕ್ಕೂ ಹೆಚ್ಚು ಬೆಳೆಗಾರರಿಗೆ ತಾತ್ಕಾಲಿಕ ಪರಿಹಾರ ಒದಗಲಿದೆ ಎಂದರು. ರೈತ ಸಂಘದ ತಾಲೂಕು ಅಧ್ಯಕ್ಷ ಸಿದ್ದನಗೌಡ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಿಂದ ಸಾಲ ಪಡೆದವರಿಗೆ ಮರುಪಾವತಿಗೆ ಸೂಕ್ತ ಕಾಲಾವಕಾಶ ಕಲ್ಪಿಸಲಿ ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ