ಪಂಜಾಬ್ ನ ಕಬಡ್ಡಿ ಆಟಗಾರನನ್ನು ಗುಂಡಿಕ್ಕಿ ಕೊಂದ ಪೊಲೀಸರು
Team Udayavani, May 10, 2020, 5:25 PM IST
ಕಪುರ್ತಲ: ಪಂಜಾಬ್ ಪೊಲೀಸ್ ಇಲಾಖೆಯ ಸಹಾಯಕ ಸಬ್ ಇನ್ಸಪೆಕ್ಟರ್ ಒಬ್ಬರು ಗಡಿಬಿಡಿಯಲ್ಲಿ ಅಂತಾರಾಷ್ಟ್ರೀಯ ಕಬಡ್ಡಿ ಪಟುವನ್ನು ಗುಂಡಿಕ್ಕಿ ಕೊಂದ ಘಟನೆ ಪಂಜಾಬ್ ನ ಕಪುರ್ತಲದಲ್ಲಿ ನಡೆದಿದೆ.
24 ವರ್ಷದ ಕಬಡ್ಡಿ ತಾರೆ ಅರ್ವಿಂದರ್ ಜಿತ್ ಸಿಂಗ್ ಪೊಲೀಸರ ಗುಂಡೇಟಿನ ಕಾರಣ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಆತನ ಗೆಳೆಯ ಪ್ರದೀಪ್ ಸಿಂಗ್ ಆಸ್ಪತ್ರೆಯಲ್ಲಿ ವಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅರ್ವಿಂದರ್ ಸಿಂಗ್ ಮತ್ತು ಆತನ ಗೆಳೆಯರು ಕಬಡ್ಡಿ ಅಭ್ಯಾಸ ಮುಗಿಸಿ ಬರುವಾಗ ರಸ್ತೆಬದಿಯಲ್ಲಿ ಅನುಮಾನಸ್ಪದ ಕಾರು ನಿಂತಿದ್ದನ್ನು ನೋಡಿ ವಿಚಾರಿಸಿದ್ದಾರೆ. ಆಗ ಅದರಲ್ಲಿ ಎ ಎಸ್ ಐ ಮತ್ತು ಆತನ ಗೆಳೆಯಬಿದ್ದು, ಕಬಡ್ಡಿ ಆಟಗಾರರು ಮತ್ತು ಎಎಸ್ ಐ ನಡುವೆ ಜಗಳವಾಗಿದೆ. ತಕ್ಷಣ ಎಎಸ್ ಐ ತನ್ನ ಸೇವಾ ರಿವಾಲ್ವರ್ ನಿಂದ ಗುಂಡು ಹಾರಿಸಿದ್ದಾರೆ.
ಎಎಸ್ ಐ ಮತ್ತು ಆತನ ಸ್ನೇಹಿತನನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು