ವಾರಿಯರ್ಸ್ರಿಂದಲೇ ಕೋವಿಡ್ ನಿಯಂತ್ರಣ
ರೋಗ ನಿಯಂತ್ರಣಕ್ಕೆ ವಿರೋಧ ಪಕ್ಷಗಳು ಕೈ ಜೋಡಿಸಿವೆ: ಸಿರಾಜ್ಶೇಖ್
Team Udayavani, May 11, 2020, 4:45 PM IST
ಹರಪನಹಳ್ಳಿ: ಕೋವಿಡ್ ವೈರಸ್ ನಿಯಂತ್ರಣಕ್ಕಾಗಿ ಕುಟುಂಬವನ್ನು ಲೆಕ್ಕಿಸದೇ ಹಗಲಿರುಳು ಶ್ರಮಸುತ್ತಿರುವ ವೈದ್ಯರು, ನರ್ಸ್, ಪೊಲೀಸರು, ಆಶಾ ಕಾರ್ಯಕರ್ತರು ಸೇರಿದಂತೆ ಅಧಿಕಾರಿಗಳು ದೇಶದ ಸೈನಿಕರಂತೆ ನಮ್ಮ ರಕ್ಷಣೆ ನಿಂತಿದ್ದಾರೆ. ಅವರೇ ನಿಜಕ್ಕೂ ತಾಯಿ ಮತ್ತು ದೇವರ ಸ್ವರೂಪ ಎಂದು ಕಾಂಗ್ರೆಸ್ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಜಿಲ್ಲಾಧ್ಯಕ್ಷ ಸಿರಾಜ್ಶೇಖ್ ಹೇಳಿದರು.
ಪಟ್ಟಣದ ತೆಗ್ಗಿನಮಠ ಸಭಾಂಗಣದಲ್ಲಿ ಬಳ್ಳಾರಿ ಜಿಲ್ಲಾ ಟಾಸ್ಪೋರ್ಸ್, ಬ್ಲಾಕ್ ಕಾಂಗ್ರೆಸ್ ಮತ್ತು ತಾಲೂಕು ಟಾಸ್ಕ್ಫೋರ್ಸ್ ಸಮಿತಿ ವತಿಯಿಂದ ಆಶಾ ಕಾರ್ಯಕರ್ತರಿಗೆ ಆಹಾರ ಕಿಟ್ ವಿತರಿಸಿ ಅವರು ಮಾತನಾಡಿದರು. ಕೋವಿಡ್ ನಿಯಂತ್ರಣಕ್ಕೆ ಸರ್ಕಾರದ ಜತೆ ವಿರೋಧ ಪಕ್ಷಗಳು ಕೈ ಜೋಡಿಸಿವೆ. ಲಾಕ್ಡೌನ್ ಇನ್ನೂ ಕೆಲವು ದಿನ ಮುಂದುವರೆಸಬೇಕು. ಕೋವಿಡ್ ಹೆಚ್ಚಾಗುವ ಸಂದರ್ಭದಲ್ಲಿ ಮದ್ಯದಂಗಡಿ ತೆರೆಯುವುದು ಸರಿಯಲ್ಲ. ಭಾರತಿಯರ ಆಹಾರ ಪದ್ಧತಿಯಲ್ಲಿ ರೋಗ ನಿರೋಧಕ ಶಕ್ತಿ ಜಾಸ್ತಿ ಇರುವುದನ್ನು ಸಾಬೀತಾಗಿದೆ. ನಿಜವಾದ ಹೋರಾಟ ಈಗ ಶುರುವಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದರು.
ಹೂವಿನಹಡಗಲಿ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ ಮಾತನಾಡಿ, ನಿಮ್ಮ ಜತೆಗೆ ನಾವೀದ್ದೇವೆ ಎಂಬ ಭರವಸೆ ತುಂಬಲು ಬಂದಿದ್ದೇವೆ. ಕೋವಿಡ್ ವೈರಸ್ ಮಾರಕವಾಗಿದ್ದು, ಆಶಾ ಕಾರ್ಯಕರ್ತೆಯರ ಅವಿರತ ಪ್ರಯತ್ನವನ್ನು ಗೌರವಿಸಬೇಕಿದೆ. ಕೋವಿಡ್ ವೈರಸ್ ವಿರುದ್ಧದ ಹೋರಾಟಕ್ಕೆ ತೆಗ್ಗಿನಮಠ ಕೂಡ ಬೆಂಬಲ ನೀಡಿದೆ ಎಂದರು.
ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವಯೋಗಿ, ತಾಲೂಕು ಟಾಸ್ಕ್ಫೋರ್ಸ್ ಸಮಿತಿ ಅಧ್ಯಕ್ಷ ಎಚ್. ಕೆ. ಹಾಲೇಶ್ ಮಾತನಾಡಿದರು. ಜಿಪಂ ಸದಸ್ಯರಾದ ಎಚ್.ಬಿ. ಪರುಶುರಾಮಪ್ಪ, ಉತ್ತಂಗಿ ಮಂಜುನಾಥ, ಟಾಸ್ಕ್ಫೋರ್ಸ್ ಸಮಿತಿಯ ಶಶಿಧರ ಪೂಜಾರ್, ಕೆ.ಎಂ. ಶಿವಕುಮಾರಸ್ವಾಮಿ, ಮುತ್ತಿಗಿ ಜಂಬಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಲೂರು ಅಂಜಪ್ಪ, ಎಸ್. ಮಂಜುನಾಥ, ಮುಖಂಡರಾದ ಎಂ.ರಾಜಶೇಖರ್, ಪಿ.ಎಲ್. ಪೋಮ್ಯನಾಯ್ಕ, ಟಿ.ಎಂ. ಚಂದ್ರಶೇಖರಯ್ಯ, ಪಿ.ಟಿ. ಭರತ್, ಬಿ.ನಜೀರಅಹ್ಮದ್, ಇಜಾರಿ ಮಹಾವೀರ, ತಾವರ್ಯನಾಯ್ಕ, ಟಿ.ಎಂ. ಶಿವಶಂಕರ್, ಹರಿಜನ ಕೊಟ್ರೇಶ್, ಎಸ್.ಜಾಕೀರಹುಸೇನ್, ಪಿ.ಪ್ರೇಮಕುಮಾರಗೌಡ, ಲಾಟಿ ದಾದಪೀರ್, ಭರತೇಶ್, ಉದ್ದಾರಗಣೇಶ, ಮಹಬೂಬ್ಸಾಬ್, ರಿಯಾಜ್, ಪಿ.ಶಿವಕುಮಾರ ನಾಯ್ಕ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?