ಪುರೋಹಿತರು- ಬಾಣಸಿಗರ ನೆ‌ರವಿಗೆ ಧಾವಿಸಿ


Team Udayavani, May 10, 2020, 12:30 PM IST

Udayavani Kannada Newspaper

ಸಾಗರ: ರಾಜ್ಯದ ಎಲ್ಲ ಸಮುದಾಯಗಳಲ್ಲಿರುವ ಮುಜರಾಯಿ ಅರ್ಚಕರು, ಖಾಸಗಿ ಪುರೋಹಿತರು, ಬಾಣಸಿಗರಿಗೆ ಆರ್ಥಿಕ ನೆರವಿನ ಪ್ಯಾಕೇಜ್‌ ಘೋಷಿಸುವಂತೆ ಶುಕ್ರವಾರ ತಾಲೂಕು ಬ್ರಾಹ್ಮಣ ಮಹಾಸಭಾದ ಶಾಸಕ ಎಚ್‌.ಹಾಲಪ್ಪ ಹರತಾಳು ಅವರ ಮೂಲಕ ಸಿಎಂಗೆ ಮನವಿ ಸಲ್ಲಿಸಿತು.

ರಾಜ್ಯ ಸರ್ಕಾರ ಕೊರೊನಾ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟದಲ್ಲಿರುವವರಿಗೆ 1,610 ಕೋಟಿ ರೂ. ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಿರುವುದನ್ನು ಬ್ರಾಹ್ಮಣ ಮಹಾಸಭಾ ಸ್ವಾಗತಿಸುತ್ತದೆ. ಈ ಪಟ್ಟಿಯಲ್ಲಿ ರಾಜ್ಯದ ಎಲ್ಲ ಸಮುದಾಯದಲ್ಲಿರುವ ಮುಜರಾಯಿ ಅರ್ಚಕರು, ಖಾಸಗಿ ಪುರೋಹಿತರು, ಬಾಣಸಿಗರನ್ನು ಕೂಡ ಸೇರಿಸಿ ಸಹಾಯ ಹಸ್ತ ಚಾಚಬೇಕು ಎಂದು ನಾವು ಸರ್ಕಾರವನ್ನು ವಿನಂತಿಸುತ್ತೇವೆ. ಆರ್ಥಿಕವಾಗಿ ಸಮಸ್ಯೆಯಲ್ಲಿರುವ ಈ ಜನರಿಗೂ ಹೆಚ್ಚಿನ ಧನಸಹಾಯ ವಿತರಿಸಲು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಹಿನ್ನೆಲೆಯಲ್ಲಿ ರಂಗಭೂಮಿ ಕಲಾವಿದರ ವಿಚಾರದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಸಹಾಯ ಪಡೆಯಲು ಜಿಲ್ಲಾವಾರು ಅರ್ಜಿ ಆಹ್ವಾನಿಸಿದಂತೆ ಇತರ ಕುಲಕಸುಬು ಆಧಾರಿತ ಕುಟುಂಬಗಳು ಆಯಾ ಇಲಾಖೆಗೆ ಅರ್ಜಿ ಸಲ್ಲಿಸುವ ಮೂಲಕವೇ ಪಟ್ಟಿ ತಯಾರಾಗುವಂತಾದರೆ ಹೆಚ್ಚು ಜನ ಅರ್ಹರಿಗೆ ಸರ್ಕಾರದ ಸಹಾಯ ಸಿಕ್ಕಂತಾಗುತ್ತದೆ. ಆ ದಿಸೆಯಲ್ಲಿ ಸಿಎಂ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಮ.ಸ.ನಂಜುಂಡಸ್ವಾಮಿ, ರವೀಶ್‌ ಕುಮಾರ್‌, ಜಿ.ಕೆ.ಮುರಳಿಧರ ಹತ್ವಾರ್‌, ವೈ.ಮೋಹನ್‌, ಹಂದಿಗೋಡು ರಾಜಶೇಖರ್‌, ಲಕ್ಷ್ಮೀನಾರಾಯಣ್‌, ವಿನಾಯಕರಾವ್‌, ರಾಮಚಂದ್ರಭಟ್‌, ಸುಧೀಂದ್ರಭಟ್‌, ಮಾಲತೇಶ್‌ಭಟ್‌, ಗಣಪತಿಭಟ್‌, ಮಲ್ಲಿಕಾರ್ಜುನಯ್ಯ, ಚರಂತನಯ್ಯ, ಗಜಾನನ ಶಾಸ್ತ್ರಿ, ಕೃಷ್ಣಮೂರ್ತಿ ಉಡುಪ, ಪಿ.ಬಿ.ಗುರುಬಸವನ ಗೌಡ, ನಾಗರಾಜ್‌ ಇತರರು ಹಾಜರಿದ್ದರು.

ಹಮಾಲಿಗರಿಗೆ ಆರ್ಥಿಕ ಸಹಾಯಕ್ಕೆ ಮನವಿ: ನಗರದ ಮಾರಿಕಾಂಬಾ ಹಮಾಲರ ಸಂಘದ ವತಿಯಿಂದ ಶುಕ್ರವಾರ ಕೋವಿಡ್‌ -19 ಹಿನ್ನೆಲೆಯಲ್ಲಿ ದಿನನಿತ್ಯ ಹಮಾಲಿ ಮಾಡುತ್ತಿದ್ದವರ ಬದುಕು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದು, ಕುಟುಂಬ ಉಪವಾಸದಿಂದ ಇರುವ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಹಮಾಲರಿಗೆ ಆರ್ಥಿಕ ಸಹಕಾರದ ವಿಶೇಷ ಪ್ಯಾಕೇಜ್‌ ಘೋಷಿಸುವಂತೆ ಉಪವಿಭಾಗಾಧಿಕಾರಿಗಳ ಕಚೇರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಸಂಘದ ಪ್ರಮುಖರಾದ ಲಕ್ಷ್ಮಣರಾವ್‌ ಬಾಪಟ್‌, ಶೇಟು, ಲಕ್ಷ್ಮಣ ಎಲ್‌.ವಿ., ಕಬೀರ್‌, ಪಿಂಚಾಡಿ, ತಾಪಂ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ತೀ.ನ.ಶ್ರೀನಿವಾಸ್‌, ಅಮೃತ್‌ರಾಸ್‌ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.