ಮೇ 12ರಿಂದ ದೇಶಾದ್ಯಂತ ಪ್ರಯಾಣಿಕ ರೈಲು ಸೇವೆ ಆಂಶಿಕ ಪುನರಾರಂಭ ; ಮಾಸ್ಕ್ ಕಡ್ಡಾಯ


Team Udayavani, May 10, 2020, 9:50 PM IST

ಮೇ 12ರಿಂದ ದೇಶಾದ್ಯಂತ ಪ್ರಯಾಣಿಕ ರೈಲು ಸೇವೆ ಆಂಶಿಕ ಪುನರಾರಂಭ ; ಮಾಸ್ಕ್ ಕಡ್ಡಾಯ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ಕೋವಿಡ್ 19 ವೈರಸ್ ಸಂಬಂಧಿತ ಲಾಕ್ ಡೌನ್ ನಿಂದಾಗಿ ದೇಶಾದ್ಯಂತ ಸ್ಥಗಿತಗೊಂಡಿದ್ದ ಪ್ರಯಾಣಿಕ ರೈಲು ಸೇವೆ ಸರಿ ಸುಮಾರು ಎರಡು ತಿಂಗಳುಗಳ ಬಳಿಕ ಪುನರಾಂಭಗೊಳ್ಳಲಿದೆ.

ಈ ಕುರಿತಾಗಿ ಇಂದು ಪ್ರಕಟನೆಯನ್ನು ಹೊರಡಿಸಿರುವ ರೈಲ್ವೇ ಇಲಾಖೆಯು ನಾಳೆಯಿಂದಲೇ ಮುಂಗಡ ಪ್ರಯಾಣದ ಬುಕ್ಕಿಂಗ್ ಪ್ರಾರಂಭವಾಗಲಿದೆ ಎಂದು ತಿಳಿಸಿದೆ. ಮತ್ತು ಮೇ 12ರ ಮಂಗಳವಾರದಿಂದ 15 ಜೊತೆ (30 ಟ್ರಿಪ್) ಪ್ರಯಾಣಿಕ ರೈಲು ಸೇವೆಗಳು ಪುನರಾಂಭಗೊಳ್ಳಲಿವೆ.

ಪ್ರಯಾಣಿಕ ರೈಲು ಸೇವೆಗಳ ಪುನರಾರಂಭದ ಪ್ರಾರಂಭಿಕ ಹಂತವಾಗಿ ನವದೆಹಲಿ ರೈಲ್ವೇ ನಿಲ್ದಾಣದಿಂದ ದಿಭ್ರುಗಢ, ಅಗರ್ತಲಾ, ಹೌರಾ, ಪಟ್ನಾ, ಬಿಲಾಸ್ ಪುರ, ರಾಂಚಿ, ಭುವನೇಶ್ವರ, ಸಿಕಂದರಾಬಾದ್, ಬೆಂಗಳೂರು, ಚೆನ್ನೈ, ತಿರುವನಂತಪುರಂ, ಮಡ್ಗಾಂವ್, ಮುಂಬೈ ಸೆಂಟ್ರಲ್, ಅಹಮದಾಬಾದ್ ಮತ್ತು ಜಮ್ಮು ತಾವಿ ರೈಲ್ವೇ ನಿಲ್ದಾಣಗಳನ್ನು ಸಂಪರ್ಕಿಸುವ ಪ್ರಯಾಣಿಕರ ರೈಲುಗಳು ಓಡಾಟ ನಡೆಸಲಿವೆ.

ಈ ಮಾರ್ಗಗಳಲ್ಲಿ ಪ್ರಯಾಣಿಸುವ ರೈಲುಗಳ ಟಿಕೆಟ್ ಗಳ ಮುಂಗಡ ಬುಕ್ಕಿಂಗ್ ಮೇ 11 ಸೋಮವಾರ ಸಾಯಂಕಾಲ 4 ಗಂಟೆಯಿಂದ ಪ್ರಾರಂಭವಾಗಲಿದೆ. ಮತ್ತಿದು IRCTCಯ ವೆಬ್ ಸೈಟ್ ನಲ್ಲಿ ಮಾತ್ರವೇ ಲಭ್ಯವಾಗಲಿದೆ. ರೈಲ್ವೇ ನಿಲ್ದಾಣಗಳಲ್ಲಿ ಯಾವುದೇ ಕಾರಣಕ್ಕೂ ಟಿಕೆಟ್ ಗಳನ್ನು ನೀಡಲಾಗುವುದಿಲ್ಲ ಮತ್ತು ಅಲ್ಲಿನ ಟಿಕೆಟ್ ಕೌಂಟರ್ ಗಳು ಮುಚ್ಚಿರುತ್ತವೆ ಎಂದು ರೈಲ್ವೇ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.

ಹಾಗಾಗಿ ಸದ್ಯಕ್ಕೆ, ಆನ್ ಲೈನ್ ನಲ್ಲಿ ಮುಂಗಡ ಕಾಯ್ದಿರಿಸಿದ ಟಿಕೆಟ್ ಗಳನ್ನು ಹೊಂದಿರುವ ಪ್ರಯಾಣಿಕರಿಗೆ ಮಾತ್ರವೇ ರೈಲ್ವೇ ನಿಲ್ದಾಣಕ್ಕೆ ಪ್ರವೇಶಿಸಲು ಅವಕಾಶವನ್ನು ನೀಡಲಾಗುವುದು ಮತ್ತು ಮಂಗಳವಾರದಿಂದ ಪ್ರಾರಂಭಗೊಳ್ಳುವ ರೈಲುಗಳಲ್ಲಿ ಎಲ್ಲಾ ಬೋಗಿಗಳು ಹವಾನಿಯಂತ್ರಿತ ಬೋಗಿಗಳಾಗಿರುತ್ತವೆ ಮತ್ತು ಇವುಗಳ ದರವು ರಾಜಧಾನಿ ಎಸಿ ಕ್ಲಾಸ್ ದರಕ್ಕೆ ಸಮನಾಗಿರುತ್ತದೆ.

ರೈಲಿಗೆ ಹತ್ತುವ ಮೊದಲು ಎಲ್ಲಾ ಪ್ರಯಾಣಿಕರನ್ನು ನಿಲ್ದಾಣಗಳಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುವುದು ಹಾಗೂ ಸೋಂಕು ಲಕ್ಷಣ ರಹಿತ ಪ್ರಯಾಣಿಕರಿಗೆ ಮಾತ್ರವೇ ರೈಲು ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಡಲಾಗುವುದು ಹಾಗೂ ಪ್ರಯಾಣಿಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ.

ಇದೀಗ ಸರಿ ಸುಮಾರು 20 ಸಾವಿರ ರೈಲ್ವೇ ಬೋಗಿಗಳನ್ನು ಕೋವಿಡ್ 19 ಐಸೊಲೇಷನ್ ವಾರ್ಡ್ ಗಳಾಗಿ ಮಾರ್ಪಡಿಸಲಾಗಿರುವುದರಿಂದ ಲಭ್ಯ ಬೋಗಿಗಳ ಸಂಖ್ಯೆಗಳನ್ನು ಪರಿಗಣಿಸಿ ಮುಂಬರುವ ದಿನಗಳಲ್ಲಿ ರೈಲ್ವೇ ಇಲಾಖೆಯು ಹೊಸ ಮಾರ್ಗಗಳಲ್ಲಿ ವಿಶೇಷ ಸೇವೆಗಳನ್ನು ಪ್ರಾರಂಭಿಸಲಿದೆ ಎಂದು ತಿಳಿದುಬಂದಿದೆ.

ಮಾತ್ರವಲ್ಲದೇ, ವಿವಿಧ ರಾಜ್ಯಗಳ ಬೇಡಿಕೆಯ ಮೇರೆಗೆ ಲಾಕ್ ಡೌನ್ ಗೆ ಸಿಲುಕಿಕೊಂಡಿರುವ ತನ್ನ ಜನರನ್ನು ಅವರವರ ಊರಿಗೆ ಮರಳಿ ಕಳುಹಿಸಲು ಸದ್ಯಕ್ಕೆ ಸುಮಾರು 300 ರೈಲುಗಳು ಪ್ರತೀದಿನ ‘ಶ್ರಮಿಕ ವಿಶೇಷ’ ರೈಲು ಸೇವೆಗಳ ಓಡಾಟದಲ್ಲಿ ನಿರತವಾಗಿವೆ.

ಟಾಪ್ ನ್ಯೂಸ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.