ಗಡಿಯಲ್ಲಿ ಭಾರತ – ಚೀನೀ ಸೈನಿಕರ ಮುಖಾಮುಖಿ ; ಎರಡೂ ದೇಶಗಳ ಸೈನಿಕರಿಗೆ ಗಾಯ


Team Udayavani, May 11, 2020, 5:55 AM IST

ಗಡಿಯಲ್ಲಿ ಭಾರತ – ಚೀನೀ ಸೈನಿಕರ ಮುಖಾಮುಖಿ ; ಎರಡೂ ದೇಶಗಳ ಸೈನಿಕರಿಗೆ ಗಾಯ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಉತ್ತರ ಸಿಕ್ಕಿಂನಲ್ಲಿರುವ ‘ನಾಕು ಲಾ’ ಎಂಬ ಪ್ರಾಂತ್ಯದಲ್ಲಿ ಭಾರತ ಮತ್ತು ಚೀನ ಸೈನಿಕರು ಕೈಕೈ ಮಿಲಾಯಿಸಿದ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.

ಘಟನೆಯಲ್ಲಿ ನಾಲ್ವರು ಭಾರತೀಯ ಸೈನಿಕರು ಹಾಗೂ ಏಳು ಚೀನ ಸೈನಿಕರು ಗಾಯಗೊಂಡಿದ್ದಾರೆ.

ಈ ಕುರಿತಂತೆ ಪ್ರತಿಕ್ರಿಯಿಸಿರುವ ಭಾರತೀಯ ಸೇನೆ, “ಸಿಕ್ಕಿಂನ ಉತ್ತರ ಭಾಗದಲ್ಲಿರುವ “ನಾಕು ಲಾ’ದಲ್ಲಿ ಗಡಿ ಕಾಯುತ್ತಿದ್ದ ಎರಡೂ ಕಡೆಯ ಸೈನಿಕರು ಗಡಿ ರೇಖೆಯ ವಿಚಾರವಾಗಿ ಜಗಳವಾಡಿದ್ದಾರೆ. ಪರಸ್ಪರ ಕೈ ಮಿಲಾಯಿಸಿದ್ದರಿಂದ ಎರಡೂ ಕಡೆಯ ಸೈನಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಾಜತಾಂತ್ರಿಕ ಮಾತುಕತೆಯ ನಂತರ ಗಲಾಟೆ ಅಂತ್ಯಗೊಂಡಿದೆ’ ಎಂದು ತಿಳಿಸಿದೆ.

ಏನಿದು ‘ನಾಕು ಲಾ’?: ‘ನಾಕು ಲಾ’ ಎಂಬುದು ಎರಡೂ ದೇಶಗಳನ್ನು ಸಂಪರ್ಕಿಸುವ ಒಂದು ಕಾಲುದಾರಿ ಸಾಗಿ ಹೋಗುವ ಜಾಗ. ಸಮುದ್ರಮಟ್ಟಕ್ಕಿಂತ ಸುಮಾರು 5,000 ಅಡಿಗಳಷ್ಟು ಎತ್ತರದಲ್ಲಿದೆ.

ಇಲ್ಲಿ ಭಾರತ ಮತ್ತು ಚೀನಾ ಸೈನಿಕರು ಪರಸ್ಪರ ಕಾವಲು ಕಾಯುತ್ತಿರುತ್ತಾರೆ. ಸಾಮಾನ್ಯವಾಗಿ ಭಾರತ, ಚೀನ ನಡುವಿನ ನೈಜ ಗಡಿ ರೇಖೆ (ಎಲ್‌ಎಸಿ) ಬಳಿಯಲ್ಲಿ ಆಗಾಗ ಎರಡೂ ದೇಶಗಳ ಸೈನಿಕರು ವಾದ-ವಿವಾದಗಳಲ್ಲಿ ತೊಡಗಿದ್ದುಂಟು. ಆದರೆ, ‘ನಾಕು ಲಾ’ ಸ್ಥಳ ಉತ್ತರ ಸಿಕ್ಕಿಂನಲ್ಲಿ ಹಿಂದೆ ಯಾವಾಗಲೂ ಇಂಥ ಘಟನೆ ನಡೆದಿರಲಿಲ್ಲ. ಈ ಪ್ರದೇಶದಲ್ಲಿ ಹೀಗಾಗಿರುವುದು ಇದೇ ಮೊದಲು.

ಸೈನಿಕರ ಕ್ಲಾಶ್‌: ಒಂದು ಫ್ಲ್ಯಾಶ್‌ಬ್ಯಾಕ್‌
– 2017ರ ಜೂನ್‌ 16ರಂದು ಭಾರತ-ಚೀನ ಗಡಿಯ ವಿವಾದಾತ್ಮಕ ಜಾಗವಾದ ಡೋಕಲಂನಲ್ಲಿ ಚೀನದ ಸೈನ್ಯವು ಕಟ್ಟಡವೊಂದನ್ನು ನಿರ್ಮಿಸಲು ಹೊರಟಿತ್ತು. ಆಗ, ಭಾರತದ ಸೈನಿಕರು ಅದನ್ನು ತಡೆದಾಗ ಎರಡೂ ಕಡೆಯ ಸೈನಿಕರ ನಡುವೆ ಜಗಳ ಏರ್ಪಟ್ಟಿತ್ತು. ವಿವಾದಿತ ಜಾಗದಲ್ಲಿ ಎರಡೂ ಬದಿಯ ಸೈನಿಕರು 73 ದಿನಗಳ ಕಾಲ ಮುಖಾಮುಖಿಯಾಗಿ ನಿಂತಿದ್ದರು. ಆ. 28ರಂದು ಈ ವಿವಾದ ಮುಕ್ತಾಯವಾಯಿತು.

– 2019ರಲ್ಲಿ “ಪಂಗ್ಯಾಂಗ್‌ ತ್ಸೋ’ ಸರೋವರದ ಬಳಿಯಲ್ಲಿ ಭಾರತ ಮತ್ತು ಚೀನದ ಸೈನಿಕರು ಪರಸ್ಪರ ಮುಖಾಮುಖಿಯಾಗಿದ್ದರು. ಆ ವಿವಾದ ಎರಡೂ ಕಡೆಯ ರಾಜತಾಂತ್ರಿಕ ಸಿಬಂದಿಯ ಮಾತುಕತೆ ಮೂಲಕ ಪರಿಹಾರವಾಯಿತು.

2018ರಲ್ಲಿ ಪ್ರಧಾನಿ ಮೋದಿ, ಚೀನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಭಾಗವಹಿಸಿದ್ದ ಉಭಯ ದೇಶಗಳ ನಡುವಿನ ಅನಧಿಕೃತ ಸಮ್ಮೇಳನದಲ್ಲಿ ಭಾರತ-ಚೀನ ಸೈನಿಕರಿಗೆ ಗಡಿಯಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಕೆಲವಾರು ಮಾರ್ಗಸೂಚಿಗಳನ್ನು ನಿಗದಿಗೊಳಿಸಲಾಗಿತ್ತು.

ಟಾಪ್ ನ್ಯೂಸ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.