ಕೋವಿಡ್ ಸೋಂಕಿಗೆ ಸದ್ಯದಲ್ಲೇ ಸ್ವದೇಶಿ ಲಸಿಕೆ ; ಹೊಸ ಪ್ರಯತ್ನಕ್ಕೆ ಕೈಹಾಕಿರುವ ICMR‌, BBIL


Team Udayavani, May 11, 2020, 7:15 AM IST

ಕೋವಿಡ್ ಸೋಂಕಿಗೆ ಸದ್ಯದಲ್ಲೇ ಸ್ವದೇಶಿ ಲಸಿಕೆ ; ಹೊಸ ಪ್ರಯತ್ನಕ್ಕೆ ಕೈಹಾಕಿರುವ ICMR‌, BBIL

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಭಾರತೀಯ ವೈದ್ಯಕೀಯ ಸಂಶೋಧನಾ ಕೌನ್ಸಿಲ್‌ (ಐಸಿಎಂಆರ್‌) ಹಾಗೂ ಹೈದರಾಬಾದ್‌ನ ಭಾರತ್‌ ಬಯೋಟೆಕ್‌ ಇಂಟರ್‌ನ್ಯಾಶನಲ್‌ ಲಿಮಿಟೆಡ್‌ (ಬಿಬಿಐಎಲ್‌) ಸಂಸ್ಥೆಗಳು ಪರಸ್ಪರ ಒಗ್ಗೂಡಿ, ಕೋವಿಡ್ ನಿಗ್ರಹಕ್ಕಾಗಿ ಸ್ವದೇಶಿ ಲಸಿಕೆಯೊಂದನ್ನು ಅಭಿವೃದ್ಧಿಪಡಿಸುವತ್ತ ಹೆಜ್ಜೆಯಿಟ್ಟಿವೆ.

ಐಸಿಎಂಆರ್‌ನ ಸಾಂಕ್ರಾಮಿಕ ರೋಗಗಳ ವಿಭಾಗದ ಮುಖ್ಯಸ್ಥ ಡಾ| ರಮಣ ಆರ್‌. ಗಂಗಖೇಡ್ಕರ್‌ ಈ ವಿಷಯ ತಿಳಿಸಿದ್ದಾರೆ.

‘ಫೆಬ್ರವರಿಯಲ್ಲಿ ಕೇರಳದ ಕೋವಿಡ್ ಸೋಂಕಿತರಿಂದ ಸಂಗ್ರಹಿಸಲಾಗಿದ್ದ ಗಂಟಲ ದ್ರವದಿಂದ ಈ ವೈರಾಣುಗಳನ್ನು ಬೇರ್ಪಡಿಸಿ ಅವುಗಳನ್ನು ಪುಣೆಯಲ್ಲಿರುವ ಐಸಿಎಂಆರ್‌ನ ರಾಷ್ಟ್ರೀಯ ವೈರಾಲಜಿ ಸಂಸ್ಥೆಯಲ್ಲಿ (ಎನ್‌ಐವಿ) ಸಂಗ್ರಹಿಸಿ ಇಡಲಾಗಿದೆ.

ಲಸಿಕೆ ಕುರಿತ ಪ್ರಯೋಗಗಳಿಗೆ ಅದೇ ಮಾದರಿಗಳನ್ನು ಬಳಸಲಾಗುತ್ತದೆ ಹಾಗೂ ಆ ಎಲ್ಲಾ ಪ್ರಯೋಗಗಳು ಎನ್‌ಐವಿಯಲ್ಲೇ ನಡೆಯಲಿವೆ. ಭಾರತ್‌ ಬಯೋಟೆಕ್‌ ಸಂಸ್ಥೆಗಳು ಸಂಶೋಧನೆಗೆ ಸಹಾಯಕವಾಗುವ ವಿಚಾರಗಳತ್ತ ಗಮನಹರಿಸಿದರೆ, ಐಸಿಎಂಆರ್‌ ಸಂಸ್ಥೆ ಸಂಶೋಧನೆಗೆ ಬೇಕಾದ ತಂತ್ರಜ್ಞಾನ ಹಾಗೂ ವೈರಾಣುಗಳ ಸ್ಯಾಂಪಲ್‌ಗಳನ್ನು (ಸ್ಟ್ರೈನ್‌) ಭಾರತ್‌ ಬಯೋಟೆಕ್‌ಗೆ ನೀಡಲಿದೆ’ ಎಂದು ಅವರು ವಿವರಿಸಿದ್ದಾರೆ.

ಶೀಘ್ರ ಗತಿಯಲ್ಲಿ ಕಿಟ್‌ ಉತ್ಪಾದನೆ
ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವಂತೆಯೇ ಭಾರತದಲ್ಲೇ ಕಿಟ್‌ ತಯಾರಿಸುವ ಪ್ರಕ್ರಿಯೆಯೂ ವೇಗ ಪಡೆದಿದೆ.

ಪರೀಕ್ಷಾ ಕಿಟ್‌ಗಳಿಗಾಗಿ ಬೇರೆ ದೇಶಗಳನ್ನು ಅವಲಂಬಿಸುವುದನ್ನು ತಪ್ಪಿಸುವ ಉದ್ದೇಶದಿಂದ ಪುಣೆಯ ಮೈಲ್ಯಾಬ್‌ ಡಿಸ್ಕವರಿ ಸೊಲ್ಯೂಷನ್ಸ್‌ ಎಂಬ ಸಂಸ್ಥೆಯು ಸೇರಮ್‌ ಇನ್‌ ಸ್ಟಿಟ್ಯೂಟ್‌ ಆಫ್ ಇಂಡಿಯಾದೊಂದಿಗೆ ಕೈಜೋಡಿಸಿಕೊಂಡು ಸಮರೋಪಾದಿಯಲ್ಲಿ ಕಿಟ್‌ ತಯಾರಿಕೆ ಕೆಲಸವನ್ನು ಮಾಡುತ್ತಿದೆ.

ಏಪ್ರಿಲ್‌ ತಿಂಗಳಲ್ಲಿ ದಿನಕ್ಕೆ 20 ಸಾವಿರ ಪರೀಕ್ಷಾ ಕಿಟ್‌ ಗಳನ್ನು ಉತ್ಪಾದಿಸುತ್ತಿದ್ದ ಸಂಸ್ಥೆ ಈಗ ದಿನಕ್ಕೆ 2 ಲಕ್ಷ ಕಿಟ್‌ ತಯಾರಿಸುತ್ತಿದೆ. ಇದರ ಜತೆಗೆ ದಿಲ್ಲಿ, ಮುಂಬಯಿಯ ಕಂಪೆನಿಗಳು ಇದೇ ದಾರಿ ಅನುಸರಿಸುತ್ತಿವೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.