ರಸ್ತೆಗೆ ಹೂ ಸುರಿದು ಬೆಳೆಗಾರರ ಆಕ್ರೋಶ

ಮಾರುಕಟ್ಟೆ ವ್ಯವಸ್ಥೆ ಇಲ್ಲದೇ ಕಂಗಾಲು; ವಿದ್ಯುತ್‌ ಶುಲ್ಕ ಮನ್ನಾ ಮಾಡಿ, 6 ತಿಂಗಳ ಜಿಎಸ್‌ಟಿ ಕೈಬಿಡಿ

Team Udayavani, May 11, 2020, 9:14 AM IST

ರಸ್ತೆಗೆ ಹೂ ಸುರಿದು ಬೆಳೆಗಾರರ ಆಕ್ರೋಶ

ಸಾಂದರ್ಭಿಕ ಚಿತ್ರ

ದೊಡ್ಡಬಳ್ಳಾಪುರ: ಕೋವಿಡ್ ದಿಂದಾಗಿ ಪಾಲಿಹೌಸ್‌ಗಳಲ್ಲಿ ಹೂ ಬೆಳೆದಿರುವ ರೈತರು, ಮಾರುಕಟ್ಟೆ ವ್ಯವಸ್ಥೆಯಿಲ್ಲದೇ ಸಂಕಷ್ಟದಲ್ಲಿದ್ದು, ಕೂಡಲೇ ರೈತರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಆಗ್ರಹಿಸಿ, ರೈತರು ಹೂ ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಹೂಗಳನ್ನು ರಸ್ತೆಗೆ ಸುರಿದು ಪ್ರತಿಭಟಿಸಿದರು.

ದಕ್ಷಿಣ ಭಾರತ ಹೂ ಬೆಳೆಗಾರರ ಸಂಘದ ನಿರ್ದೇಶಕ ಅರವಿಂದ್‌ ಮಾತನಾಡಿ, ರಾಜ್ಯದಲ್ಲಿ ಸುಮಾರು 2.5 ಸಾವಿರ ಎಕರೆ ಪ್ರದೇಶದಲ್ಲಿ ಪಾಲಿಹೌಸ್‌ಗಳಲ್ಲಿ ಹೂ ಬೆಳೆಯಾಗುತ್ತಿದೆ.
ತಾಲೂಕಿನಲ್ಲಿ 600 ಎಕರೆ ಪ್ರದೇಶದಲ್ಲಿ ಹೂ ಬೆಳೆಯಲಾಗುತ್ತಿದೆ. ಕೋವಿಡ್ ಪರಿಣಾಮದಿಂದಾಗಿ ಪಾಲಿಹೌಸ್‌ಗಳಲ್ಲಿ ಹೂ ಬೆಳೆದಿರುವ ರೈತರು ಹೂಗಳ ಮಾರಾಟ ವ್ಯವಸ್ಥೆಯಿಲ್ಲದೇ ಸಂಕಷ್ಟಕ್ಕೀಡಾಗಿದ್ದಾರೆ. ರಾಜ್ಯ ಸರ್ಕಾರ ಹೆಕ್ಟೇರ್‌ಗೆ 25 ಸಾವಿರ ರೂ. ನಿರ್ವಹಣೆ ವೆಚ್ಚ ನೀಡುತ್ತಿದ್ದು, ನಿರ್ವಹಣೆಗೆ ರೈತರು ಎಕರೆಗೆ 1.25 ಲಕ್ಷ ರೂ. ಖರ್ಚು ಮಾಡುತ್ತಿದ್ದಾರೆ. ರೈತರಿಗೆ ಹೆಚ್ಚಿನ ನಿರ್ವಹಣೆ ವೆಚ್ಚ ನೀಡಬೇಕು. ಬ್ಯಾಂಕ್‌ಗಳಲ್ಲಿ ಪಡೆದ ಸಾಲದ 6 ತಿಂಗಳ ಬಡ್ಡಿ ಮನ್ನಾ ಮಾಡಬೇಕು. ಉಚಿತ ವಿದ್ಯುತ್‌ ಸರಬರಾಜು ಮಾಡಬೇಕು ಎಂದು ಸಿಎಂಯಡಿ ಯೂರಪ್ಪ ಅವರಿಗೆ ಮನವಿ ಮಾಡಲಾಗಿದೆ. ಆದರೆ ಸರ್ಕಾರ ದಿಂದ ಭರವಸೆ ದೊರೆತಿಲ್ಲ ಎಂದರು.

ತಾಲೂಕು ಹಸಿರು ಮನೆ ಹೂವು ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘದ ಖಜಾಂಚಿ ವೆಂಕಟೇಶ್‌ ಮಾತನಾಡಿ, ಲಾಕ್‌ಡೌನ್‌ ಈಗ ಮುಕ್ತಾಯವಾದರೂ ಹೂವಿನ ವ್ಯಾಪಾರ ಬೇಗ
ಆರಂಭವಾಗುತ್ತದೆ ಎನ್ನುವ ನಂಬಿಕೆ ಇಲ್ಲದಾಗಿದೆ. ರಸಗೊಬ್ಬರ, ಕ್ರಿಮಿನಾಶಕದ ಮೇಲಿನ ಜಿಎಸ್‌ಟಿ 6 ತಿಂಗಳ ಕೈ ಬಿಡಬೇಕು ಎಂದು ಒತ್ತಾಯಿಸಿದರು.

ಸಂಘದ ಕಾರ್ಯದರ್ಶಿ ಶಾಮಸುಂದರ್‌ ಮಾತನಾಡಿ, ಹೂವು ಮಾರಾಟವಾಗದೇ ಕಂಗಾಲಾಗಿದ್ದ ಬೆಳೆಗಾರರಿಗೆ ಈಗ ಬೆಸ್ಕಾಂ ವಿದ್ಯುತ್‌ ಶುಲ್ಕ ಪಾವತಿ ಮಾಡಲು ಬಿಲ್‌ ನೀಡಿ, ಶುಲ್ಕ ಪಾವತಿಗೆ ಮೇ 18 ಕೊನೆಯ ದಿನ ಎಂದು ಗಡುವು ನೀಡುವ ಮೂಲಕ ಶಾಕ್‌ ನೀಡಿದೆ. ಆರು ತಿಂಗಳವರೆಗೆ ವಿದ್ಯುತ್‌ ಶುಲ್ಕ ಮನ್ನಾ ಮಾಡಬೇಕು ಎಂದರು. ಸಂಘದ ತಾಲೂಕು ಘಟಕದ ಅಧ್ಯಕ್ಷ ಕೆ.ಎಸ್‌.ಚನ್ನರಾ ಮಯ್ಯ, ದಕ್ಷಿಣ ಭಾರತ ಹೂ ಬೆಳೆ ಗಾರರ ಸಂಘದ ನಿರ್ದೇಶಕ ಶ್ರೀಕಾಂತ್‌, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಟಿ.ವಿ.ಲಕ್ಷ್ಮೀ ನಾರಾಯಣ್‌, ಜಿಪಂ ಮಾಜಿ ಅಧ್ಯಕ್ಷ
ಸಿ.ಡಿ. ಸತ್ಯನಾರಾಯಣ ಗೌಡ, ಮುಖಂಡ ಬಿ.ಸಿ.ನಾರಾಯಣ ಸ್ವಾಮಿ, ತಾಲೂಕು ಸಂಘದ ಸದಸ್ಯ ಸತೀಶ್‌, ನಾಗರಾಜ್‌, ಶಿವಾನಂದರೆಡ್ಡಿ, ಶ್ರೀನಿವಾಸ್‌, ಮಲ್ಲೇಶ್‌, ಮುದ್ದುಕೃಷ್ಣಪ್ಪ,
ಹನುಮಂತಯ್ಯ, ರವಿಕುಮಾರ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.