ಶಂಕಿತರ “ಬಂಧನ’ವೇ ಹೋಟೆಲ್‌ಗ‌ಳಿಗೆ ವರ!


Team Udayavani, May 11, 2020, 4:42 PM IST

ಶಂಕಿತರ “ಬಂಧನ’ವೇ ಹೋಟೆಲ್‌ಗ‌ಳಿಗೆ ವರ!

ಸಾಂದರ್ಭಿಕ ಚಿತ್ರ

ಬೆಂಗಳೂರು: ನಗರಕ್ಕೆ ಬಂದಿಳಿಯಲಿರುವ ಅನಿವಾಸಿ ಕನ್ನಡಿಗರ ಪಾಲಿಗೆ ಚಲನ-ವಲನ ನಿರ್ಬಂಧಿಸುವ “ಕ್ವಾರಂಟೈನ್‌’ ಶಿಕ್ಷೆಯಾದರೆ, ಅವರನ್ನು ಸ್ವಾಗತಿಸಲು ಸಿದ್ಧಗೊಂಡ ಸ್ಟಾರ್‌ ಹೋಟೆಲ್‌ ಗಳಿಗೆ ಅದೇ ಕ್ವಾರಂಟೈನ್‌ ವರವಾಗಿದೆ!

ಸದ್ಯ ನಗರದಲ್ಲಿ ಕೋವಿಡ್ ಸೋಂಕಿತರ ಪ್ರಾಥಮಿಕ, ದ್ವಿತೀಯ ಸಂಪರ್ಕಿತರನ್ನು ನಗರದ ಹೋಟೆಲ್‌ಗ‌ಳಲ್ಲಿ ಕ್ವಾರಂಟೈನ್‌ ಮಾಡಲಾಗುತ್ತಿದ್ದು, ಸುದೀರ್ಘ‌ ಲಾಕ್‌ಡೌನ್‌ನಿಂದ ತತ್ತರಿಸಿದ್ದ ಹೋಟೆಲ್‌ಗ‌ಳಿಗೆ ತಕ್ಕಮಟ್ಟಿಗೆ ಆದಾಯ ಹರಿದುಬರುತ್ತಿದೆ. ಸಾಮಾನ್ಯವಾಗಿ ತಾರಾ ಹೋಟೆಲ್‌ಗ‌ಳಲ್ಲಿ ದಿನಕ್ಕೆ 3-4 ಸಾವಿರ ರೂ. ಬಾಡಿಗೆ ಇರುತ್ತದೆ. ಆದರೆ, ಒಂದೂವರೆ ತಿಂಗಳಿಂದ ಗ್ರಾಹಕರಿಲ್ಲದೆ ಐಷಾರಾಮಿ ಹೋಟೆಲ್‌ಗ‌ಳು ಕಂಗಾಲಾಗಿದ್ದವು. ಈಗ ನಿತ್ಯ 1,200 ರೂ. ದರದಲ್ಲಿ “ಕ್ವಾರಂಟೈನ್‌ ಅತಿಥಿ’ಗಳು ಆಗಮಿಸುತ್ತಿದ್ದಾರೆ. ಅಂದಾಜು 7 ಸಾವಿರಕ್ಕೂ ಹೆಚ್ಚು ಜನ ಬೆಂಗಳೂರು ಹಾಗೂ ಬೆಂಗಳೂರು ಹೊರವಲಯದ ಫೈವ್‌ಸ್ಟಾರ್‌, ತ್ರಿಸ್ಟಾರ್‌ ಸೇರಿದಂತೆ ಅವರ ಆರ್ಥಿಕ ಅನುಕೂಲಕ್ಕೆ ಅನುಗುಣವಾಗಿ ಹೋಟೆಲ್‌ಗ‌ಳನ್ನು ಆಯ್ಕೆ
ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ. ಇದರಿಂದ ಕೆಲವು (ವಸತಿ ವ್ಯವಸ್ಥೆ ಇರುವ) ಹೋಟೆಲ್‌, ಲಾಡ್ಜ್ಗಳ ಮಾಲಿಕರಿಗೆ ಮರು ಭೂಮಿಯಲ್ಲಿ ಒಯಾಸಿಸ್‌ ಕಂಡಂತಾಗಿದೆ.

ಸವಾಲೂ ಕೂಡ: ಈ ರೀತಿ ಹೋಟೆಲ್‌ಗ‌ಳಲ್ಲಿ ಕೋವಿಡ್ ಶಂಕಿತರು ಹಾಗೂ ಕೋವಿಡ್ ಸೋಂಕಿನ ಸಂಪರ್ಕಿತರನ್ನು ಕ್ವಾರಂಟೈನ್‌ ಮಾಡುವುದು ಸವಾಲಿನ ಕೆಲಸವೂ ಹೌದು.
ರೂಮ್‌ಗಳಲ್ಲಿ ಬಳಸಿದ ಬೆಡ್‌ಶೀಟ್‌, ಊಟಕ್ಕೆ ಬಳಸಿದ ವಸ್ತು ಹಾಗೂ ರೂಮ್‌ ಸ್ವಚ್ಛತೆ ಸವಾಲಿನ ಕೆಲಸ. ಅಲ್ಲದೆ, ನಿರ್ದಿಷ್ಟ ಹೋಟೆಲ್‌ಗ‌ಳನ್ನು ಕ್ವಾರಂಟೈನ್‌ಗೆ ಬಳಸಲಾಗಿತ್ತು ಎಂದು ತಿಳಿದು ಬಂದರೆ ಮುಂದಿನ ದಿನಗಳಲ್ಲಿ ಈ ಹೋಟೆಲ್‌ಗೆ ಗ್ರಾಹಕರು ಬರುವ ಸಾಧ್ಯತೆ ತೀರಾ ಕಡಿಮೆ. ಅಲ್ಲದೆ, ಇತ್ತೀಚೆಗೆ ಶಿವಾಜಿನಗರದ ಹೋಟೆಲ್‌ವೊಂದರಲ್ಲಿ ಕ್ವಾರಂಟೈನ್‌ಗೆ ಒಪ್ಪಿಗೆ ನೀಡಿದ್ದ ಹೋಟೆಲ್‌ನಲ್ಲಿದ್ದ ಒಬ್ಬ ಸಹಾಯಕ ಸಿಬ್ಬಂದಿಗೂ ಕೋವಿಡ್ ಸೋಂಕು ತಗುಲಿದ್ದು, ಸಹಜವಾಗಿಯೇ ಆತಂಕ ಹೆಚ್ಚಾಗಿದೆ. ನಗರದ ಹೊರವಲಯಗಳಲ್ಲಿನ ಕೆಲವು ಪಿಜಿಗಳನ್ನು ಅವಶ್ಯಕತೆಗೆ ಅನುಗುಣವಾಗಿ ಪಾಲಿಕೆ ಕೋವಿಡ್ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್‌ ವ್ಯವಸ್ಥೆಗೆ ಬಳಸಿಕೊಂಡಿದೆ.

ಸಣ್ಣ ಹೋಟೆಲ್‌ಗ‌ಳಿಗೆ ತೀವ್ರ ಆರ್ಥಿಕ ಸಂಕಷ್ಟ: ಲಾಕ್‌ಡೌನ್‌ನಿಂದ ಸಣ್ಣ ಹೋಟೆಲ್‌ಗ‌ಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿವೆ. ಈ ಸಂಬಂಧ “ಉದಯವಾಣಿ’ಯೊಂದಿಗೆ ಮಾತನಾಡಿದ ರಾಜ್ಯ ಹೋಟಲ್‌ ಉದ್ಯಮಿಗಳ ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ್‌ ಹೆಬ್ಟಾರ್‌, ನಗರದಲ್ಲಿ ಅಂದಾಜು 5 ಸಾವಿರ ಹಾಗೂ ರಾಜ್ಯದಲ್ಲಿ 30 ಸಾವಿರಕ್ಕೂ ಹೆಚ್ಚು ಹೋಟೆಲ್‌ಗ‌ಳಿವೆ. ಲಾಕ್‌ಡೌನ್‌ನಿಂದ ಈಗಾಗಲೇ ಸಂಕಷ್ಟ ಅನುಭವಿಸಿದ್ದು, ಈಗ ಕಾರ್ಮಿಕರ ಕೊರತೆ ಸೃಷ್ಟಿಯಾಗಿದೆ.

ಹೋಟೆಲ್‌ಗ‌ಳನ್ನು ಕೋವಿಡ್ ಕ್ವಾರಂಟೈನ್‌ ಕೇಂದ್ರಗಳಂತೆ ಬಳಸಿಕೊಳ್ಳಲಾಗುತ್ತಿದೆ. ಹೊರರಾಜ್ಯದಿಂದ ಬರುವವರಿಗೆ ಕ್ವಾರಂಟೈನ್‌ ಕೇಂದ್ರ ವ್ಯವಸ್ಥೆಯೂ ಇದ್ದು, ಅವರಿಗೆ
ಬೇಡವಾದರೆ ಹೋಟೆಲ್‌ಗ‌ಳನ್ನು ಬುಕ್‌ ಮಾಡಿಕೊಳ್ಳಬಹುದಾಗಿದೆ.
ಬಿ.ಎಚ್‌.ಅನಿಲ್‌ಕುಮಾರ್‌, ಬಿಬಿಎಂಪಿ ಆಯುಕ್ತ

– ಹಿತೇಶ್‌ ವೈ

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.