ಐಸಿಸಿ ರ್‍ಯಾಂಕಿಂಗ್‌ ವ್ಯವಸ್ಥೆ ಸಮಂಜಸವಲ್ಲ: ಗಂಭೀರ್‌


Team Udayavani, May 11, 2020, 9:03 PM IST

ಐಸಿಸಿ ರ್‍ಯಾಂಕಿಂಗ್‌ ವ್ಯವಸ್ಥೆ ಸಮಂಜಸವಲ್ಲ: ಗಂಭೀರ್‌

ಹೊಸದಿಲ್ಲಿ: ವಿರಾಟ್‌ ಕೊಹ್ಲಿ ಪಡೆ 2016-17ರ ಸಾಲಿನಲ್ಲಿ ಒಟ್ಟು 12 ಟೆಸ್ಟ್‌ ಪಂದ್ಯಗಳನ್ನು ಆಡಿದ್ದು ಕೇವಲ ಒಂದು ಪಂದ್ಯವನ್ನಷ್ಟೇ ಸೋತು ಉಳಿದೆಲ್ಲವನ್ನು ಗೆದ್ದು ಬೀಗಿತ್ತು. ಹೀಗಿರುವಾಗ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ)ನ ನೂತನ ರ್‍ಯಾಂಕಿಂಗ್‌ನಲ್ಲಿ ಭಾರತ ತಂಡವನ್ನು ಹಠಾತ್‌ 3ನೇ ಸ್ಥಾನಕ್ಕೆ ಕುಸಿಯುವಂತೆ ಮಾಡಿರುವುದು ಸರಿಯಲ್ಲ ಎಂದು ಭಾರತ ಕ್ರಿಕೆಟ್‌ ತಂಡದ ಮಾಜಿ ಆಟಗಾರ ಗೌತಮ್‌ ಗಂಭೀರ್‌ ಐಸಿಸಿ ವಿರುದ್ಧ ಕಿಡಿಕಾರಿದ್ದಾರೆ.

ಇದೇ ತಿಂಗಳ ಆರಂಭದಲ್ಲಿ ಐಸಿಸಿ ಪ್ರಕಟಿಸಿದ್ದ ನೂತನ ಟೆಸ್ಟ್‌ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಟೀಮ್‌ ಇಂಡಿಯಾ 2016ರ ಬಳಿಕ ಮೊದಲ ಬಾರಿ ತನ್ನ ನಂ.1 ಸ್ಥಾನವನ್ನು ಕಳೆದುಕೊಂಡಿತ್ತು. ಕಳೆದ 42 ತಿಂಗಳು ಕಾಲ ಅಗ್ರಸ್ಥಾನದಲ್ಲಿದ್ದ ಭಾರತ ಹಠಾತ್‌ ಮೂರನೇ ಸ್ಥಾನಕ್ಕೆ ಕುಸಿದಿದ್ದು, ಆಸ್ಟ್ರೇಲಿಯ ಮತ್ತು ನ್ಯೂಜಿಲ್ಯಾಂಡ್‌ ಕ್ರಮವಾಗಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿದ್ದವು. ಈ ಬಗ್ಗೆ ಸ್ಟಾರ್‌ ಸ್ಪೋರ್ಟ್ಸ್ ಆನ್‌ಲೈನ್‌ ಸಂದರ್ಶನದಲ್ಲಿ ಮಾತನಾಡಿದ ಗಂಭೀರ್‌, ಐಸಿಸಿ ಟೆಸ್ಟ್‌ ರ್‍ಯಾಂಕಿಂಗ್‌ ಅಂಕ ವಿತರಣೆಯ ನಿಯಮಗಳ ಮೇಲೆ ತಮಗೆ ಯಾವುದೇ ನಂಬಿಕೆ ಇಲ್ಲ. ವಿದೇಶದಲ್ಲಿ ಟೆಸ್ಟ್‌ ಗೆದ್ದಾಗಲೂ ಒಂದೇ ರೀತಿಯ ಅಂಕಗಳನ್ನು ನೀಡುವುದು ಸರಿಯಲ್ಲ ಎಂದು ಗಂಭೀರ್‌ ಅಭಿಪ್ರಾಯಪಟ್ಟಿದ್ದಾರೆ.

ಭಾರತ 3ನೇ ರ್‍ಯಾಂಕಿಂಗ್‌ ಪಡೆದದ್ದು ನನಗೆ ಬೇಸರವಾಗಿಲ್ಲ. ಆದರೆ ಇದರಿಂದಾಗಿ ರ್‍ಯಾಂಕಿಂಗ್‌ ವ್ಯವಸ್ಥೆ ಮೇಲೆ ವಿಶ್ವಾಸವೇ ಕಳೆದುಹೋದಂತಾಗಿದೆ. ಅದರಲ್ಲೂ ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ಈ ನಿಯಮ ಇನ್ನೂ ಕೆಟ್ಟದಾಗಿದೆ. ತವರಿನಲ್ಲಿ ಟೆಸ್ಟ್‌ ಗೆದ್ದರೂ, ವಿದೇಶದಲ್ಲಿ ಜಯ ಸಾಧಿಸಿದರೂ ಒಂದೇ ರೀತಿಯ ಅಂಕ ನೀಡುವ ಪದ್ಧತಿ ಸಮಂಜಸವಲ್ಲ ಎಂದು ಅವರು ಹೇಳಿದರು.

ಭಾರತಕ್ಕೆ ಅಗ್ರ ಸ್ಥಾನ ನೀಡಬೇಕು
ನನ್ನ ಪ್ರಕಾರ ಭಾರತ ನಂ. 1 ಸ್ಥಾನದಲ್ಲಿ ಮುಂದುವರಿಯಬೇಕು. ಏಕೆಂದರೆ ಭಾರತ ತವರಿನಾಚೆ ಆಡಿದ ಬಹುತೇಕ ಎಲ್ಲ ಟೆಸ್ಟ್‌ ಸರಣಿಗಳನ್ನು ಜಯಿಸಿದೆ. ಹೀಗಾಗಿ ಭಾರತಕ್ಕೆ ನಂ.1 ಪಟ್ಟ ನೀಡಬೇಕು. ಆಸ್ಟ್ರೇಲಿಯ ಏಷ್ಯಾ ಭಾಗದಲ್ಲಿ ಆಡಿದ ಎಲ್ಲ ಸರಣಿಗಳಲ್ಲಿ ಕೆಟ್ಟ ಪ್ರದರ್ಶನ ನೀಡಿದೆ. ಈ ಕಾರಣದಿಂದ ಆಸೀಸ್‌ಗೆ ಅಗ್ರಸ್ಥಾನ ನೀಡಿರುವುದು ಸರಿಯಲ್ಲ ಎಂದು ಗಂಭೀರ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

1-wq-ewqew

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ ಕೋಲ್ಕತಾ ನೈಟ್‌ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.