ಹಾಸನದ ಮಹಿಳೆಗೆ ಸೋಂಕು
ಬೆಳಗಾವಿ: ಗುಣ ಹೊಂದಿದ ವ್ಯಕ್ತಿಗೆ ಮತ್ತೆ ಕೋವಿಡ್-19
Team Udayavani, May 12, 2020, 5:30 AM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ರಾಜ್ಯದಲ್ಲಿ ಸೋಮವಾರ ಹೊಸದಾಗಿ 14 ಕೋವಿಡ್-19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿಗೊಳಗಾದವರ ಸಂಖ್ಯೆ 862ಕ್ಕೆ ಏರಿದೆ.
ಮುಂಬಯಿಯಿಂದ ಮಂಡ್ಯಕ್ಕೆ ಬಂದಿರುವ ಹಾಸನದ ಮಹಿಳೆಗೆ ಸೋಂಕು ದೃಢಪಟ್ಟಿದೆ. ಹಾಗೆಯೇ ಬೆಳಗಾವಿಯಲ್ಲಿ ಕೋವಿಡ್-19ದಿಂದ ಗುಣ ಹೊಂದಿದ್ದ ವ್ಯಕ್ತಿಗೆ ಮತ್ತೆ ಸೋಂಕು ಕಾಣಿಸಿಕೊಂಡಿದ್ದು ಆತಂಕ ಸೃಷ್ಟಿಸಿದೆ.
ಬೆಳಗಾವಿಯಲ್ಲಿ ತಬ್ಲಿ ಜಮಾತ್ ಮರ್ಕಜ್ ಸದಸ್ಯರ ಸಂಪರ್ಕ ಹೊಂದಿ ಎ.16ರಂದು ಸೋಂಕುಪೀಡಿತನಾಗಿದ್ದ 50 ವರ್ಷದ ವ್ಯಕ್ತಿ ಚಿಕಿತ್ಸೆಯ ಬಳಿಕ ಗುಣ ಹೊಂದಿ ಮೇ 6ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಇವರನ್ನು ಕುಡುಚಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಆದರೆ ಮೇ 7ರಂದು ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಸೋಂಕು ಪರೀಕ್ಷೆ ನಡೆಸಲಾಯಿತು. ಈ ವೇಳೆ ಸೋಂಕು ಪಾಸಿಟಿವ್ ಬಂದಿದೆ. ಈ ವ್ಯಕ್ತಿಯು ಹೃದ್ರೋಗಿಯಾಗಿದ್ದು, ಆಸ್ಪತ್ರೆಯಲ್ಲಿಯೇ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹಾಸನದ ಮಹಿಳೆಯೊಬ್ಬರಲ್ಲಿ ಸೋಂಕು ದೃಢವಾಗಿದೆ. ಈ ಮಹಿಳೆ ಮುಂಬಯಿಗೆ ಪ್ರಯಾಣ ಮಾಡಿ ವಾಪಸಾ ಗಿದ್ದವರಾಗಿದ್ದು, ಮಂಡ್ಯದ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಮೂಲಕ ಹಾಸನ ಜಿಲ್ಲೆಗೂ ಸೋಂಕು ಕಾಲಿಟ್ಟಂತಾಗಿದೆ. ಮುಂಬಯಿಯಿಂದ ಬಂದ ಮಹಿಳೆಯನ್ನು ನೇರವಾಗಿ ಕ್ವಾರಂಟೈನ್ಗೆ ಕಳುಹಿಸಿದ್ದರಿಂದ ಅವರ ಮೂಲಕ ಇತರ ಯಾರಿಗೂ ಕೋವಿಡ್-19 ಹರಡಿಲ್ಲ ಎಂದು ಭಾವಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್