ಪೋಖರಣ್ ವಿಜ್ಞಾನಿಗಳ ನೆನೆದ ಪ್ರಧಾನಿ ನರೇಂದ್ರ ಮೋದಿ
Team Udayavani, May 12, 2020, 6:41 AM IST
ಹೊಸದಿಲ್ಲಿ: ರಾಷ್ಟ್ರೀಯ ತಂತ್ರಜ್ಞಾನ ದಿನವಾದ ಸೋಮವಾರದಂದು ಪ್ರಧಾನಿ ನರೇಂದ್ರ ಮೋದಿ, 1998ರ ಪೋಖರಣ್ ಅಣ್ವಸ್ತ್ರ ಪರೀಕ್ಷೆ ಯಶಸ್ಸಿಗೆ ಕಾರಣಕರ್ತರಾದ ವಿಜ್ಞಾನಿಗಳನ್ನು ಸ್ಮರಿಸಿದರು.
ಅಲ್ಲದೆ, ‘ಇಂದು ಕೋವಿಡ್ ಸೋಂಕಿನಿಂದ ದೇಶವನ್ನು ಮುಕ್ತಗೊಳಿಸಲು ಕೂಡ ತಂತ್ರಜ್ಞಾನಗಳು ನೆರವಾಗುತ್ತಿವೆ. ವೈರಾಣುವನ್ನು ಸೋಲಿಸುವ ತಂತ್ರ ಜ್ಞಾನ ಮಾರ್ಗಗಳ ಸಂಶೋಧನೆಯಲ್ಲಿ ಮುಂಚೂಣಿಯಲ್ಲಿರುವ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಆರೋಗ್ಯಕರ ಪೃಥ್ವಿ ವಾತಾವರಣವನ್ನು ನಿರ್ಮಿಸಲು ಪಣತೊಡೋಣ’ ಎಂದು ಕರೆಕೊಟ್ಟರು. ವಿಶೇಷವಾಗಿ ಪೋಖ್ರಾನ್ ಪರೀಕ್ಷೆ ವೇಳೆ ವಾಜಪೇಯಿ ಅವರು ವಹಿಸಿದ್ದ ದಿಟ್ಟ ನಾಯಕತ್ವವನ್ನು ಮೋದಿ ಶ್ಲಾಘಿಸಿದರು.
ಏನಿದು ತಂತ್ರಜ್ಞಾನ ದಿನ?: 1998ರ ಮೇ 11ರಂದು ರಾಜಸ್ಥಾನದ ಪೋಖರಣ್ನಲ್ಲಿ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ವಿಜ್ಞಾನಿ ಅಬ್ದುಲ್ ಕಲಾಂ ನೇತೃತ್ವದಲ್ಲಿ ಭಾರತ ಪ್ರಬಲ ಅಣ್ವಸ್ತ್ರ ಪರೀಕ್ಷೆ ನಡೆಸಿ, ಜಗತ್ತಿನ ಶಕ್ತಿಶಾಲಿ ರಾಷ್ಟ್ರಗಳ ಸಾಲಿನಲ್ಲಿ ನಿಂತಿತ್ತು.
‘ಜೈ ಜವಾನ್, ಜೈ ಕಿಸಾನ್, ಜೈ ತಂತ್ರಜ್ಞಾನ್’ ಎನ್ನುವ ಘೋಷಣೆಯೂ ಮೊಳಗಿತ್ತು. ವಾಜಪೇಯಿ ಅವರು ಆ ದಿನವನ್ನು “ರಾಷ್ಟ್ರೀಯ ತಂತ್ರಜ್ಞಾನ ದಿವಸ್’ ಅಂತಲೇ ಆಚರಣೆಗೆ ತಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ