ಮಡಿದ ಕಾರ್ಮಿಕರಿಗೆ ಶ್ರದ್ಧಾಂಜಲಿ
Team Udayavani, May 12, 2020, 8:24 AM IST
ದಾವಣಗೆರೆ: ಮಡಿದ ಕಾರ್ಮಿಕರಿಗೆ ಎಐಯುಟಿಯುಸಿ ಕಾರ್ಯಕರ್ತರು ಶ್ರದ್ಧಾಂಜಲಿ ಸಲ್ಲಿಸಿದರು.
ದಾವಣಗೆರೆ: ಮಹಾರಾಷ್ಟ್ರದ ಔರಂಗಬಾದ್ ಬಳಿ 16 ವಲಸೆ ಕಾರ್ಮಿಕರ ಮೇಲೆ ರೈಲು ಹರಿದು ದುರ್ಮರಣಕ್ಕೀಡಾಗಿರುವುದು ಸೇರಿದಂತೆ ಹಸಿವು, ಕಾಲ್ನಡಿಗೆಯ ಬಳಲಿಕೆ ಮತ್ತಿತರ ಕಾರಣಗಳಿಂದ ಮಡಿದ ಕಾರ್ಮಿಕರಿಗೆ ಸೋಮವಾರ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಕಾರ್ಯಕರ್ತರು ಅಖೀಲ ಭಾರತ ಸಂತಾಪ ಸೂಚಕ ದಿನವನ್ನಾಗಿ ಆಚರಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.
ಎಐಯುಟಿಯುಸಿ ಜಿಲ್ಲಾ ಅಧ್ಯಕ್ಷ ಕೈದಾಳ್ ಮಂಜುನಾಥ್ ಮಾತನಾಡಿ, ಸರ್ಕಾರ ಲಾಕ್ಡೌನ್ ಸಡಿಲಿಕೆಯ ನಡುವೆ ವಲಸೆ ಕಾರ್ಮಿಕರಿಗೆ ತಮ್ಮ ಸ್ವಗ್ರಾಮಗಳಿಗೆ ಮರಳಲು ಅಗತ್ಯ ಸಾರಿಗೆ ವ್ಯವಸ್ಥೆ ಮಾಡದೆ ಅನೇಕರ ಸಂಕಷ್ಟಕ್ಕೆ ಕಾರಣವಾಗುತ್ತಿದೆ. ಅನೇಕ ಕಡೆ ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಬಡ ವಲಸೆ ಕಾರ್ಮಿಕರ ಸಾವಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೇ ನೇರ ಕಾರಣ. ಹೊರದೇಶದಲ್ಲಿರುವರನ್ನು ವ್ಯವಸ್ಥಿತವಾಗಿ ಕರೆದು ಕೊಂಡು ಬರುವ ಸರ್ಕಾರಗಳು ಇಲ್ಲೇ ಇರುವ ಬಡ ಕಾರ್ಮಿಕರನ್ನು ಅಕ್ಷರಶಃ ನಿರ್ಗತಿಕರನ್ನಾಗಿಸಿರುವುದು ಬೇಸರದ ಸಂಗತಿ ಎಂದು ದೂರಿದರು.
ಜಿಲ್ಲಾ ಉಪಾಧ್ಯಕ್ಷ ತಿಪ್ಪೇಸ್ವಾಮಿ ಅಣಬೇರು, ಪರಶುರಾಮ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: “ರಾಹುಲ್ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’
Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ
Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ
Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ
Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್
ʼಟಾಕ್ಸಿಕ್ʼ ಅಪ್ಡೇಟ್ಗಾಗಿ ಸೋಶಿಯಲ್ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?
Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ