ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿ ಕಾಸರಗೋಡು, ದ.ಕ. ಜಿಲ್ಲೆ ಯುವಕರು

ಕೇರಳ - ಕರ್ನಾಟಕ ಗಡಿ ಬಂದ್‌ ಸಮಸ್ಯೆ

Team Udayavani, May 12, 2020, 10:35 AM IST

ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿ ಕಾಸರಗೋಡು, ದ.ಕ. ಜಿಲ್ಲೆ ಯುವಕರು

ಮಂಗಳೂರು: ಕೋವಿಡ್ ಹರಡಬಾರದೆಂಬ ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ-ಕೇರಳ ಗಡಿ ಬಂದ್‌ ಮಾಡಿರುವುದು ಇದೀಗ ಉಭಯ ರಾಜ್ಯಗಳ ಉದ್ಯೋಗಿಗಳ ಮೇಲೆ ಪರಿಣಾಮ ಬೀರಿದೆ. ಗಡಿ ದಾಟಿ ಬರಲಾರದೆ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಿದೆ.

ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಕ್ಕೆ, ಅದರಲ್ಲೂ ಮುಖ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಕೇರಳದಿಂದ ಬರುವ ಸುಮಾರು 10 ಗಡಿಗಳನ್ನು ಬಂದ್‌ ಮಾಡಲಾಗಿತ್ತು. ದ.ಕ.ದಲ್ಲಿ ಪ್ರಕರಣ ವೃದ್ಧಿಸಿ ಕಾಸರಗೋಡಿನಲ್ಲಿ ಇಳಿಕೆಯಾಗುತ್ತಿದ್ದಂತೆ ಕೇರಳ ಸರಕಾರವೂ ಇದೇ ನಿರ್ಧಾರವನ್ನು ತೆಗೆದುಕೊಂಡಿತ್ತು. ಈ ನಿರ್ಧಾರ ಇದೀಗ ಮಂಗಳೂರಿನಲ್ಲಿ ಕೆಲಸ ಮಾಡುವ ಕೇರಳದ ಮತ್ತು ಕೇರಳದಲ್ಲಿ ಕೆಲಸ ಮಾಡುವ ದಕ್ಷಿಣ ಕನ್ನಡದ ಉದ್ಯೋಗಿಗಳ ಮೇಲೆ ಪರಿಣಾಮ ಬೀರಿದೆ. ನಿರಂತರ ಗೈರುಹಾಜರಿಯಿಂದ ಕೆಲವರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ಲಾಕ್‌ಡೌನ್‌ ಪರಿಣಾಮ ಒಂದೂವರೆ ತಿಂಗಳಿನಿಂದ ಬಾಗಿಲು ಹಾಕಿದ್ದ ಕೆಲವು ಕಂಪೆನಿಗಳು ಲಾಕ್‌ಡೌನ್‌ ಸಡಿಲಿಕೆಯಾಗುತ್ತಿದ್ದಂತೆ ಬಾಗಿಲು ತೆರೆದು ಕನಿಷ್ಠ ಸಿಬಂದಿ ಮೂಲಕ ಕಾರ್ಯಾರಂಭಿಸಿವೆ. ಮಂಗಳೂರಿನಲ್ಲಿ ಕೆಲಸ ಮಾಡುವ ಕೇರಳದ ಕಾಸರಗೋಡಿನವರನ್ನು ಆಯಾ ಕಂಪೆನಿಗಳು ಕೆಲಸಕ್ಕೆ ಹಾಜರಾಗಬೇಕೆಂದು ತಿಳಿಸಿವೆ. ಅತ್ತ ಕೇರಳದ ಕಂಪೆನಿಗಳೂ ಕೆಲಸಕ್ಕೆ ಬರುವಂತೆ ಸೂಚಿಸಿವೆ. ಆದರೆ ಇನ್ನೂ ಕೂಡ ಗಡಿ ಸಂಚಾರಕ್ಕೆ ಮುಕ್ತವಾಗದ ಕಾರಣ ಉದ್ಯೋಗಿಗಳು ದಾರಿ ಕಾಣದಾಗಿದ್ದಾರೆ.

ಸರಕಾರಕ್ಕೆ ಮನವಿ
ಸಮಸ್ಯೆಯ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಸಂದೇಶ ಕಳುಹಿಸಿ ಉಭಯ ರಾಜ್ಯಗಳ ಸರಕಾರ, ಜನಪ್ರತಿನಿಧಿಗಳ ಗಮನಕ್ಕೆ ತರುವ ಕೆಲಸ ಮಾಡಲಾಗುತ್ತಿದೆ.ಜೀವನೋಪಾಯಕ್ಕಾಗಿ ನಿತ್ಯ ಓಡಾಟ ನಡೆಸುವ ಅನಿವಾರ್ಯ ಇರುವವರಿಗೆ ಸ್ವಂತ ವಾಹನದಲ್ಲಿ ದಿನಕ್ಕೆರಡು ಬಾರಿ ಸಂಚರಿಸಲು ಪಾಸ್‌ ವ್ಯವಸ್ಥೆ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.

ಕ್ವಾರಂಟೈನ್‌ ಗೊಂದಲ
ನೆರೆಯ ಕೇರಳ ಮಾತ್ರವಲ್ಲದೆ, ಇತರ ಹೊರ ರಾಜ್ಯಗಳಲ್ಲಿರುವ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮಂದಿಯೂ ಇದೇ ಸಮಸ್ಯೆ ಅನುಭವಿಸುತ್ತಿದ್ದಾರೆ. ಕೆಲಸಕ್ಕೆ ಹಾಜರಾಗುವಂತೆ ಕಂಪೆನಿಗಳಿಂದ ಕರೆ ಬಂದಿದ್ದು, ಕೋವಿಡ್ ತಪಾಸಣೆ ನಡೆಸಬೇಕೊ, ಕೋವಿಡ್ ಇಲ್ಲವೆಂಬ ಪ್ರಮಾಣಪತ್ರ ಕೊಂಡೊಯ್ಯಬೇಕೊ, ಹಾಗೆ ಪ್ರಮಾಣಪತ್ರ ಕೊಂಡೊಯ್ದರೆ ಹೋಂ ಕ್ವಾರಂಟೈನ್‌ನಲ್ಲಿರಬೇಕೋ ಎಂಬ ಗೊಂದಲದಲ್ಲಿದ್ದಾರೆ. ಇಂತಹ ಉದ್ಯೋಗಿಗಳೂ ಲಾಕ್‌ಡೌನ್‌ ಮುಗಿಯುವವರೆಗೆ ಕಾದರೆ ಉದ್ಯೋಗ ಕಳೆದುಕೊಳ್ಳುವ ಭೀತಿಯೂ ಇದೆ.

ಲಾಕ್‌ಡೌನ್‌ ಸಂಪೂರ್ಣ ತೆರವಾಗುವವರೆಗೆ ರಾಜ್ಯದ ಹೊರಗಿನವರು ಬರುವುದಕ್ಕೆ ಅವಕಾಶ ಇರುವುದಿಲ್ಲ. ಉದ್ಯೋಗದಾತ ಸಂಸ್ಥೆಗಳೂ ಕೂಡ ಈ ಸಂಬಂಧ ಗಡಿಬಿಡಿ ಮಾಡಬಾರದು. ಕೋವಿಡ್ ಭೀತಿ ಇರುವಾಗ ನಿಯಮ, ಸಮಯಾವಕಾಶದ ಹೆಸರಿನಲ್ಲಿ ಅಮಾನತು, ಕೆಲಸದಿಂದ ತೆಗೆಯುವ ಸೂಚನೆ ನೀಡಬಾರದು.
– ಕೋಟ ಶ್ರೀನಿವಾಸ ಪೂಜಾರಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವರು

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.