11 ಕೋಟಿ ವೆಚ್ಚದಲ್ಲಿ ಸಣ್ಣ ಕೆರೆ ಅಭಿವೃದ್ಧಿ: ಶಾಸಕ ಎಂ. ಚಂದ್ರಪ್ಪ
Team Udayavani, May 12, 2020, 10:41 AM IST
ಹೊಳಲ್ಕೆರೆ: ಪಟ್ಟಣದ ಹೊಸದುರ್ಗ ರಸ್ತೆಯ ಸಣ್ಣ ಕೆರೆ ಅಭಿವೃದ್ಧಿಗೆ 11ಕೋಟಿ ರೂ. ಅನುದಾನ ಬಿಡಗಡೆಯಾಗಿದ್ದು, ಕೆರೆ ಮೇಲೆ ಷಟ್ಪಥ ನಿರ್ಮಾಣ ಮಾಡಿ ಚಿಕ್ಕ ಉದ್ಯಾನವನವನ್ನು ನಿರ್ಮಿಸಲಾಗುವುದು ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು. ಹೊಸದುರ್ಗ ರಸ್ತೆಯಲ್ಲಿರುವ ಸಣ್ಣಕೆರೆ ರಸ್ತೆ ಅಗಲೀಕರಣ ಕಾಮಗಾರಿಯನ್ನು ಪರಿಶೀಲಿಸಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿಗೆ ಸೇರಿಕೊಂಡಿರುವ ಪಟ್ಟಣದ ಗಣಪತಿ ಸರ್ಕಲ್, ಬಸ್ ನಿಲ್ದಾಣ, ಹೊಸದುರ್ಗ ರಸ್ತೆಯ ಇಕ್ಕೆಲವನ್ನು ಅಗಲೀಕರಣ ಮಾಡುವ ನಿಟ್ಟಿನಲ್ಲಿ ರಸ್ತೆ ಒತ್ತುವರಿ ಮಾಡಿದ್ದ
ಕಟ್ಟಡಗಳನ್ನು ತೆರವುಗೊಳಿಸಲಾಗಿದೆ.
ಪಟ್ಟಣದ ಕೊಳಚೆ ನೀರು ಸರಾಗವಾಗಿ ಹರಿಯುವಂತೆ ಬೃಹತ್ ಚರಂಡಿ ನಿರ್ಮಾಣ ಕಾಮಗಾರಿ ನಡೆಯುತ್ತಿದೆ ಎಂದರು. ಸಣ್ಣ ಕೆರೆಯಿಂದ ಹೊಸದುರ್ಗ ರಸ್ತೆಯಲ್ಲಿರುವ ಸಪ್ತಪದಿ ಕಲ್ಯಾಣಮಂಟಪದ ತನಕ ಷಟ³ಥ ನಿರ್ಮಾಣ ಮಾಡಿ ಎರಡು ಬದಿಯಲ್ಲಿ ವಿದ್ಯುತ್ ದೀಪ ಅಳವಡಿಸಲಾಗುವುದು. ಐದಾರು ಅಡಿ ಜಾಗ ಬಿಟ್ಟು ಅಲ್ಲಿ ಸಸಿಗಳು, ಲಾನ್ ಹಾಕಲಾಗುತ್ತದೆ. ಇದರಿಂದ ರಸ್ತೆ ಮತ್ತು ಕೆರೆ ಸೌಂದರ್ಯ ಹೆಚ್ಚಾಗಲಿದೆ. ಭದ್ರಾ ಮೇಲ್ದಂಡೆ ಯೋಜನೆಯಡಿ ಸಣ್ಣ ಕೆರೆಗೆ ನೀರು ತುಂಬಿಸಲಾಗುತ್ತದೆ. ಅಲ್ಲಿ ಟ್ಯಾಂಕ್ ನಿರ್ಮಾಣ ಮಾಡಿ ಅಲ್ಲಿಂದ ತಾಳ್ಯ, ಎಚ್.ಡಿ. ಪುರ ಮತ್ತಿತರ ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತದೆ. ಅದಕ್ಕೆ 101 ಕೋಟಿ ರೂ. ಬಿಡುಗಡೆಯಾಗಿದ್ದು ಟೆಂಡರ್ ಹಂತದಲ್ಲಿದೆ. ಕೆರೆಯೊಳಗೆ ಬೃಹತ್ ಶಿವಲಿಂಗ ಸ್ಥಾಪಿಸಿ ನೀರಿನ ಕಾರಂಜಿ ನಿರ್ಮಾಣ ಮಾಡುವ ಉದ್ದೇಶವಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ
ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ
ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು
Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ
ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ
MUST WATCH
ಹೊಸ ಸೇರ್ಪಡೆ
Dakshina Kannada: 14 ಗ್ರಾ.ಪಂ.ಗಳಲ್ಲಿ ಶೇಕಡಾ 100 ತೆರಿಗೆ ಸಂಗ್ರಹ
“ಫೆಡೆಕ್ಸ್ ಪಾರ್ಸೆಲ್’ ಹೆಸರಲ್ಲಿ ಸೈಬರ್ ವಂಚಕರಿಂದ “ಗಾಳ’
Daily Horoscope: ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಅನವಶ್ಯ ವೈಮನಸ್ಯಕ್ಕೆ ಅವಕಾಶ ಬೇಡ
ಆಧಾರ್-ಪಹಣಿ ಸೀಡಿಂಗ್ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!
49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ