ರಾಜ್ಯಕ್ಕೆ ಮತ್ತೆ ತಬ್ಲಿಘಿ ಕಂಟಕ ; ಧಾರ್ಮಿಕ ಪ್ರವಾಸಿಗರಿಂದ ದಾಖಲೆ ಸೋಂಕು

ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 925 ; ಕೋಲಾರ, ಯಾದಗಿರಿ ಜಿಲ್ಲೆಗೂ ಕೋವಿಡ್ ಸೋಂಕು ಪ್ರವೇಶ

Team Udayavani, May 13, 2020, 5:56 AM IST

ರಾಜ್ಯಕ್ಕೆ ಮತ್ತೆ ತಬ್ಲಿಘಿ ಕಂಟಕ ; ಧಾರ್ಮಿಕ ಪ್ರವಾಸಿಗರಿಂದ ದಾಖಲೆ ಸೋಂಕು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಅಹ್ಮದಾಬಾದ್‌ನ ತಬ್ಲಿಘಿ ಜಮಾತ್‌ ಮರ್ಕಜ್‌ನಲ್ಲಿ ಭಾಗವಹಿಸಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ಹಿಂದಿರುಗಿದವರಲ್ಲಿ ಕೋವಿಡ್ ವೈರಸ್‌ ಸೋಂಕು ಹೆಚ್ಚಳವಾಗಿದೆ.

ಇದರಿಂದಾಗಿ ರಾಜ್ಯದಲ್ಲಿ ಮಂಗಳವಾರ ದಾಖಲೆಯ 63 ಸೋಂಕು ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ರಾಜ್ಯದ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 925ಕ್ಕೆ ಏರಿಕೆಯಾಗಿದೆ. ಇನ್ನು ಕೋಲಾರ, ಯಾದಗಿರಿ ಜಿಲ್ಲೆಗೂ ಕೋವಿಡ್ ವೈರಸ್‌ ಪ್ರವೇಶಿಸಿದೆ.

ಮಂಗಳವಾರ ಸೋಂಕು ದೃಢಪಟ್ಟ 63 ಮಂದಿ ಪೈಕಿ 33 ಮಂದಿ ಗುಜರಾತಿನ ಅಹ್ಮದಾಬಾದ್‌ಗೆ ತೆರಳಿ ಲಾಕ್‌ಡೌನ್‌ ವಿನಾಯಿತಿ ಬಳಿಕ ರಾಜ್ಯದ ವಿವಿಧ ಜಿಲ್ಲೆಗಳಿಗೆ ಹಿಂದಿರುಗಿದ್ದ ತಬ್ಲಿಘಿಗಳು. 33 ಮಂದಿಯ ಪೈಕಿ ಬಾಗಲಕೋಟೆ – 15, ಧಾರವಾಡ – 9, ದಾವಣಗೆರೆ – 6, ಯಾದಗಿರಿ – 2, ಗದಗದ ಒಬ್ಬರು ಸೇರಿದ್ದಾರೆ.

ಇನ್ನು ಅಹ್ಮದಾಬಾದ್‌ನ ತಬ್ಲಿಘಿ ಜಮಾತ್‌ ಮರ್ಕಜ್‌ನಿಂದ ರವಿವಾರ 17 ಮಂದಿಯಲ್ಲಿ, ಸೋಮವಾರ ಒಬ್ಬರಲ್ಲಿ ಸೋಂಕು ದೃಢಪಟ್ಟಿತ್ತು. ಒಟ್ಟಾರೆ ಎರಡನೇ ಹಂತದ ತಬ್ಲಿಘಿ ಜಮಾತ್‌ ಮರ್ಕಜ್‌ನಿಂದ ಇಲ್ಲಿಯವರೆಗೂ ರಾಜ್ಯಕ್ಕೆ ಮರಳಿದ್ದ 51 ಮಂದಿಯಲ್ಲಿ ಸೋಂಕು ದೃಢಪಟ್ಟಂತಾಗಿದೆ.

ಮತ್ತೆರಡು ಜಿಲ್ಲೆಗಳಿಗೆ ಸೋಂಕು
ಮಂಗಳವಾರ ರಾಜ್ಯದ ಕೋಲಾರ ಮತ್ತು ಯಾದಗಿರಿ ಜಿಲ್ಲೆಗೆ ಕೋವಿಡ್ ವೈರಸ್‌ ಪ್ರವೇಶಿಸಿದೆ. ಕೋಲಾರದಲ್ಲಿ ಚೆನ್ನೈನಿಂದ ಬಂದ ಇಬ್ಬರು ಪುರುಷರು, ಒಡಿಶಾದಿಂದ ಬಂದ ಪುರುಷ ಮತ್ತು ಸ್ಥಳೀಯ ಇಬ್ಬರು ಮಹಿಳೆಯರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಯಾದಗಿರಿಗೆ ಅಹ್ಮದಾಬಾದ್‌ನ ತಬ್ಲಿಘಿ ಜಮಾತ್‌ ಮರ್ಕಜ್‌ನಲ್ಲಿ ಭಾಗವಹಿಸಿ ಬಂದ ಇಬ್ಬರು ಸದಸ್ಯರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ರಾಜ್ಯದ ಸೋಂಕಿತ ಜಿಲ್ಲೆಗಳ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಮಂಗಳವಾರ ಚನ್ನರಾಯಪಟ್ಟಣಕ್ಕೆ ಮುಂಬಯಿಯಿಂದ ಬಂದಿದ್ದ ಐದು ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ದಾವಣಗೆರೆಯಲ್ಲೂ ಹೆಚ್ಚಿದ ಆತಂಕ
ದಾವಣಗೆರೆಯಲ್ಲಿ ಅಹ್ಮದಾಬಾದ್‌ ತಬ್ಲಿಘಿ ಜಮಾತ್‌ ಮರ್ಕಜ್‌ನಲ್ಲಿ ಭಾಗವಹಿಸಿ ಜಿಲ್ಲೆಗೆ ವಾಪಸಾಗಿದ್ದ ಆರು ಮಂದಿ ಪುರುಷರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜತೆಗೆ ಸ್ಥಳೀಯ ಸೋಂಕಿತರ (ಪಿ-695 ಹಾಗೂ ಪಿ -696) ಸಂಪರ್ಕದಿಂದ ಇಬ್ಬರು ಬಾಲಕಿಯರು ಮತ್ತು ನಾಲ್ವರು ಪುರುಷರಲ್ಲಿ ಸೋಂಕು ದೃಢಪಟ್ಟಿದೆ. ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 83ಕ್ಕೆ ಏರಿಕೆಯಾಗಿದ್ದು, 77 ಸಕ್ರಿಯ ಪ್ರಕರಣಗಳಿವೆ.

ಧಾರವಾಡದಲ್ಲಿ 9 ಮಂದಿಗೆ ಸೋಂಕು
ಧಾರವಾಡ ಜಿಲ್ಲೆಯಲ್ಲಿ ತಬ್ಲಿಘಿ ಸದಸ್ಯರ ಸೋಂಕು ಪ್ರಕರಣಗಳಿಂದ ಮತ್ತೆ ಸೋಂಕು ಹೆಚ್ಚಳವಾಗಿದೆ. 9 ಮಂದಿ ಪುರುಷರಲ್ಲಿ ಸೋಂಕು ಪತ್ತೆಯಾಗಿದ್ದು, ಈ ಎಲ್ಲ ಸೋಂಕಿತರನ್ನು ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 21ಕ್ಕೆ ಏರಿಕೆಯಾಗಿದ್ದು, 14 ಸಕ್ರಿಯ ಪ್ರಕರಣಗಳಿವೆ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.