ಕೋವಿಡ್ 19 ವಿರುದ್ಧ ದಾದಿಯರ ಸೇವೆ ಅನನ್ಯ
Team Udayavani, May 13, 2020, 11:07 AM IST
ಚಿಕ್ಕಬಳ್ಳಾಪುರ: ಜಾಗತಿಕವಾಗಿ ಮಾನವ ಸಮುದಾಯವನ್ನು ಬೆಚ್ಚಿ ಬೀಳಿಸುತ್ತಿರುವ ಕೋವಿಡ್ 19 ವಿರುದ್ಧದ ಹೋರಾಟದಲ್ಲಿ ಎಲ್ಲ ವರ್ಗಗಳಿಗಿಂತ ದಾದಿಯರ ಸೇವೆ ಇಡೀ ಮನುಕುಲಕ್ಕೆ ಮಾದರಿ ಹಾಗೂ ಆದರ್ಶವಾದದ್ದು ಎಂದು ಕೋವಿಡ್-19 ನಿಯಂತ್ರಣದ ವಿಶೇಷ ನೋಡಲ್ ಅಧಿಕಾರಿ ಭಾಸ್ಕರ್ ತಿಳಿಸಿದರು.
ನಗರದ ಜಿಲ್ಲಾಸ್ಪತ್ರೆ ಹಾಗೂ ಕೋವಿಡ್-19 ಐಸೋಲೇಷನ್ ಯಲ್ಲಿ ಮಂಗಳವಾರ ವಿಶ್ವ ದಾದಿಯರ ದಿನಾಚರಣೆ ಪ್ರಯುಕ್ತ ಕೋವಿಡ್-19 ಯಂತ್ರಣಕ್ಕಾಗಿ ಶ್ರಮಿಸುತ್ತಿರುವ ಹಿರಿಯ ಮಹಿಳಾ ಆರೋಗ್ಯ ಸಹಾಯಕರಿಗೆ ಹಾಗೂ ಶುಶ್ರೂಷಕಿಯರಿಗೆ ಮಾಸ್ಕ್ ಹಾಗೂ ಸಿಹಿ ವಿತರಿಸಿ ಅವರು ಮಾತನಾಡಿದರು.
2020 ವರ್ಷದಲ್ಲಿ ಮಾನವ ಕುಲದ ಉಳಿವಿಗಾಗಿ ಹೋರಾಡುತ್ತಿರುವ ವೈದ್ಯರ ಜೊತೆಗೆ ದಾದಿಯರ ಪರಿಶ್ರಮ ಹೆಚ್ಚು ಮಹತ್ವ ಪಡೆದುಕೊಂಡಿದೆ. ಆರೋಗ್ಯ ಕ್ಷೇತ್ರದಲ್ಲಿ ದಾದಿಯರು ವಿಶೇಷ ಛಾಪೂ ಮೂಡಿಸುವ ಕೆಲಸ ಮಾಡಿದ್ದಾರೆ.
ಅವರನ್ನು ಪ್ರತಿಯೊಬ್ಬರು ಗೌರವಿಸಬೇಕು. ಆದರೆ ಇತ್ತೀಚೆಗೆ ವೈದ್ಯರು ಮತ್ತು ಶುಶ್ರೂಷಕಿಯರ ಮೇಲೆ ಹಲ್ಲೆ ನಡೆಯುತ್ತಿರುವುದು ದುರದೃಷ್ಟಕರ ಎಂದರು.ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಮಹಾಮಾರಿ ಕೋವಿಡ್ 19 ಸೋಂಕು ತಡೆಗೆ ವೈದ್ಯರು, ಶುಶ್ರೂಷಕಿಯರು ತಮ್ಮ ಪ್ರಾಣ ಪಣಕ್ಕಿಟ್ಟು ಸೇವೆ ಸಲ್ಲಿಸುತ್ತಿದ್ದಾರೆ.
ಈ ಸಂದರ್ಭದಲ್ಲಿ ವಿಷ್ಣುಪ್ರಿಯ ಶಿಕ್ಷಣ ಸಂಸ್ಥೆ ವತಿಯಿಂದ ಎಲ್ಲ ಶುಶ್ರೂಕಿಯರಿಗೆ ಸಿಹಿ ಹಾಗೂ ಮಾಸ್ಕ್ ವಿತರಿಸಲಾಯಿತು. ತಹಶೀಲ್ದಾರ್ ನಾಗಪ್ರಶಾಂತ್, ಜಿಲ್ಲಾಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ.ರಮೇಶ್, ವಿಷ್ಣುಪ್ರಿಯ ಕಾಲೇಜಿನ ಅಧ್ಯಕ್ಷ ರಾಮಚಂದ್ರರರೆಡ್ಡಿ, ವಿದ್ಯಾರ್ಥಿ ಮುಖಂಡ ಎನ್.ಮಂಜುನಾಥರೆಡ್ಡಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covishield Vaccine ಹಾಕಿಸಿಕೊಂಡವರು ಐಸ್ಕ್ರೀಮ್ ತಿನ್ನಬಾರದಾ?
Honnavar; ಖಾಸಗಿ ಬಸ್ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
MUST WATCH
ಹೊಸ ಸೇರ್ಪಡೆ
Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು
MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು
ಬಿಗ್ಬಾಸ್ ವಿಜೇತ ಎಲ್ವಿಶ್ ಯಾದವ್ ವಿರುದ್ಧ ಅಕ್ರಮ ವರ್ಗಾವಣೆ ಕೇಸ್ ದಾಖಲಿಸಿದ ಇ.ಡಿ
T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್ ಕೆಂಜಿಗೆಗೆ ಸ್ಥಾನ