ನರೇಗಾ ಯೋಜನೆ ಸದ್ಬಳಕೆಗೆ ಸಲಹೆ
Team Udayavani, May 13, 2020, 2:35 PM IST
ಗದಗ: ಕೋವಿಡ್-19ರ ಸೋಂಕು ನಿಯಂತ್ರಣಕ್ಕೆ ವಿಧಿಸಿದ್ದ ಲಾಕ್ಡೌನ್ನ್ನು ಸಡಿಲಿಕೆಗೊಳಿಸಿ ಗ್ರಾಮೀಣ ಪ್ರದೇಶದಲ್ಲಿ ನರೇಗಾ ಯೋಜನೆಯಡಿ ಕೆಲಸ ನೀಡಲು ಕ್ರಮ ಜರುಗಿಸಲಾಗಿದೆ. ರೈತರ, ಕೂಲಿ ಕಾರ್ಮಿಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಪಂ ಅಧ್ಯಕ್ಷ ಸಿದ್ದು ಪಾಟೀಲ ಹೇಳಿದರು.
ಉದ್ಯೋಗ ಖಾತ್ರಿ ಯೋಜನೆಯಡಿ ಮುಂಡರಗಿ ತಾಲೂಕಿನ ಬಸಾಪೂರ ಗ್ರಾಮದಲ್ಲಿ ಕೈಗೊಂಡ ಜಲ ಸಂವರ್ಧನೆ, ಸಂರಕ್ಷಣೆ, ರೈತರ ಜಮೀನುಗಳಲ್ಲಿ ಬದುಗಳ ನಿರ್ಮಾಣ ಕಾಮಗಾರಿ ವೀಕ್ಷಿಸಿ ಅವರು ಮಾತನಾಡಿದರು. ಈ ಕಾಮಗಾರಿಯಡಿ 300 ಜನರಿಗೆ ಉದ್ಯೋಗ ಒದಗಿಸಲಾಗಿದೆ. ಮುಂಗಾರು ಪೂರ್ವ ರೈತರ ಹೊಲಗಳಲ್ಲಿ ಮಳೆ ನೀರು ಇಂಗುವಿಕೆ, ಅಂತರ್ಜಲ ಸಂವರ್ಧನೆಗೆ ಅಗತ್ಯದ ಕಾಮಗಾರಿ ಕೈಗೊಳ್ಳಬೇಕು. ಅದಕ್ಕಾಗಿ ರೈತರ ವೈಯಕ್ತಿಕ ಕಾಮಗಾರಿಗಳಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ. ಉದ್ಯೋಗ ಖಾತ್ರಿಯಡಿ ಕೆಲಸ ಮಾಡುವವರ ಖಾತೆಗೆ ಕೇಂದ್ರ ಸರ್ಕಾರದಿಂದ ನೇರವಾಗಿ ಹಣ ಪಾವತಿ ಆಗುತ್ತದೆ. ಆಸಕ್ತರು ಬಳಸಿಕೊಳ್ಳಬೇಕು. ಕೋವಿಡ್-19 ಸೋಂಕು ನಿಯಂತ್ರಣ ಪರಿಣಾಮಕಾರಿ ತಡೆಗೆ ಹಾಗೂ ಸೋಂಕಿನಿಂದ ಸ್ವ ರಕ್ಷಣೆಗೆ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಪಂ ಸದಸ್ಯ ಈರಪ್ಪ ನಾಡಗೌಡ್ರ, ಮುಂಡರಗಿ ತಾಪಂ ಇಒ ಕಲ್ಮನಿ, ಬಸಾಪೂರ ಗ್ರಾಪಂ ಪಿಡಿಒ ಹಾಗೂ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ