ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆ ಆಗುತ್ತೆ

|ಶೀಘ್ರದಲ್ಲೇ ಅಧಿಕೃತ ಘೋಷಣೆ ನಿರೀಕ್ಷೆ |ಕೇಂದ್ರದಿಂದ ಯೋಜನೆಗೆ ದೊರೆಯಲಿದೆ ಅನುದಾನ: ಸಚಿವ ರಮೇಶ್‌ ಜಾರಕಿಹೊಳಿ

Team Udayavani, May 13, 2020, 4:35 PM IST

13-May-22

ಚಿತ್ರದುರ್ಗ: ಸಚಿವ ರಮೇಶ್‌ ಜಾರಕಿಹೊಳಿ, ಶಾಸಕರಾದ ಚಂದ್ರಪ್ಪ, ಗೂಳಿಹಟ್ಟಿ ಶೇಖರ್‌ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ ಮಾಡಿದರು.

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ವ್ಯಾಪ್ತಿಗೆ ತರಲು ಅಗತ್ಯ ಕ್ರಮ ಕೈಗೊಂಡಿದ್ದು, ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಘೋಷಣೆಯಾಗುವ ನಿರೀಕ್ಷೆಯಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದರು.

ಮಂಗಳವಾರ ಹೊಳಲ್ಕೆರೆ ತಾಲೂಕಿನ ಗೂಳಿಹೊಸಹಳ್ಳಿ ಬಳಿ ನಡೆಯುತ್ತಿರುವ ಭದ್ರಾ ಮೇಲ್ದಂಡೆ ಯೋಜನೆಯ ಸುರಂಗ ಮಾರ್ಗ ಕಾಮಗಾರಿ ವೀಕ್ಷಿಸಿ ಅವರು ಮಾತನಾಡಿದರು. ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆಯಾದರೆ ಕೇಂದ್ರದಿಂದ ಅನುದಾನ ಬರಲಿದ್ದು, ಕಾಮಗಾರಿ ತ್ವರಿತವಾಗಿ ಮುಗಿಯಲಿದೆ. ಅಗತ್ಯ ಹಣಕಾಸಿನ ವ್ಯವಸ್ಥೆಯೂ ಆಗಲಿದೆ ಎಂದರು.

2008 ರಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗೆ ಚಾಲನೆ ನೀಡಿತ್ತು. 6 ಸಾವಿರ ಕೋಟಿ ಯೋಜನೆ ಇದಾಗಿತ್ತು. ಭೂಸ್ವಾಧಿಧೀನ, ಅರಣ್ಯ ಭೂಮಿ ಮತ್ತಿತರೆ ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದೆ. ಎಲ್ಲಾ ತಾಂತ್ರಿಕ ಅಡೆತಡೆಗಳನ್ನು ನಿವಾರಿಸಿ ಕಾಮಗಾರಿ ವೇಗ ಹೆಚ್ಚಿಸಲಾಗಿದೆ. ಪ್ಯಾಕೇಜ್‌ 8, 9 ರಲ್ಲಿ 7.5 ಕಿಮೀ ಟನಲ್‌ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, 300 ಮೀಟರ್‌ ಮಾತ್ರ ಬಾಕಿ ಇದೆ. ಅದನ್ನೂ ಜುಲೈ 15ರೊಳಗೆ ಮುಗಿಸುವಂತೆ ಗುತ್ತಿಗೆದಾರರಿಗೆ ಗಡುವು ನೀಡಲಾಗಿದೆ ಎಂದು ತಿಳಿಸಿದರು.

ಮುಂದಿನ ಜೂನ್‌ ಒಳಗಾಗಿ ಜಿಲ್ಲೆಯ 48 ಕೆರೆಗಳಿಗೆ ನೀರು ತುಂಬಿಸುವ ಉದ್ದೇಶವಿದೆ. ಎಲ್ಲಾ ರೈತರಿಗೂ ನೀರಾವರಿ ಸೌಲಭ್ಯ ಸಿಗಬೇಕೆನ್ನುವುದು ನಮ್ಮ ಗುರಿ. ಚಿತ್ರದುರ್ಗ ಶಾಖಾ ಕಾಲುವೆಯ 61.230 ಕಿಮೀದಿಂದ 90.000 ವರೆಗೆ ಪಂಕ್ತೀಕರಣಕ್ಕೆ ಅನುಮೋದನೆ ನೀಡಲಾಗಿದೆ. ಹೊಸದುರ್ಗ ತಾಲೂಕು ವ್ಯಾಪ್ತಿಯ ಕಿಮೀ 61.230 ಕಿಮೀಯಿಂದ 67.230 ರಿಂದ 67.416 ಕಿಮೀ ವರೆಗೆ ದೊಡ್ಡಕಿಟ್ಟದಹಳ್ಳಿ, ಕೆಂಚಿಹಳ್ಳಿ, ನಾಕೀಕೆರೆ ಗ್ರಾಮಗಳ ಮೂಲಕ 67.419 ಕಿಮೀಯಿಂದ 73.3ದ75 ವರೆಗೆ ಬೂದಿಪುರ, ಮಾಳಗೇರನಹಳ್ಳಿ, ಗೂಳಿಹೊಸಹಳ್ಳಿ, ಶಂಕರನಹಳ್ಳಿ, 73.375 ಕಿಮೀಯಿಂದ 81.820 ಕಿಮೀವರೆಗ,ೆ ಲಕ್ಕಿಹಳ್ಳಿ ಕಾಯ್ದಿರಿಸಿದ ಅರಣ್ಯ ಪ್ರದೇಶ ಹಾಗೂ ಹಿರಿಯೂರು ತಾಲೂಕಿನ 81.920 ಕಿಮೀ 90.00 ಕಿಮೀ ವರೆಗೆ ಗೋಗುದ್ದು, ಕೊಳಾಳು ಮತ್ತು ಭರಂಪುರ ಗ್ರಾಮಗಳ ಜಮೀನುಗಳಲ್ಲಿ ಕಾಲುವೆ ಹಾದು ಹೋಗುತ್ತದೆ ಎಂದು ಮಾಹಿತಿ ನೀಡಿದರು.

ಪ್ಯಾಕೇಜ್‌-9ರ ಅಡಿ ಚಿತ್ರದುರ್ಗ ಶಾಖಾ ಕಾಲುವೆ 73 ರಿಂದ 90 ಕಿಮೀವರೆಗೆ ಇದ್ದು ಇದರ ಟೆಂಡರ್‌ ಮೊತ್ತ 368.81 ಕೋಟಿ ರೂ. ಆಗಿದೆ. ಈಗಾಗಲೇ 279.60 ಕೋಟಿ ರೂ. ವೆಚ್ಚ ಮಾಡಿದ್ದು 146.01 ಕೋಟಿಯಷ್ಟು ಬಾಕಿ ಇದೆ. ಇದರಡಿ ಮೂರು ಟನಲ್‌ಗ‌ಳು ಹಾಗೂ ತೆರೆದ ಕಾಲುವೆ ಬರಲಿದ್ದು ಟನಲ್‌ ಕಾಮಗಾರಿ ವೇಗವಾಗಿ ನಡೆಯುತ್ತಿದೆ ಎಂದರು. ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ, ವಿಶ್ವೇಶ್ವರಯ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮಣರಾವ್‌ ಪೇಶ್ವೆ, ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್‌ ರಾಘವನ್‌, ಅಧೀಕ್ಷಕ ಇಂಜಿನಿಯರ್‌ ವೇಣುಗೋಪಾಲ್‌, ಕಾರ್ಯನಿರ್ವಾಹಕ ಇಂಜಿನಿಯರ್‌ ಚಂದ್ರಹಾಸ್‌, ಶ್ರೀಧರ್‌, ಟಾಟಾ ಶಿವನ್‌ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.