600 ಕ್ವಿಂಟಾಲ್‌ ಬಿತ್ತನೆ ಬೀಜ ಮಾರಾಟ; ಕೃಷಿ ಚಟುವಟಿಕೆಯಲ್ಲಿ ಹೆಚ್ಚಿದ ಆಸಕ್ತಿ


Team Udayavani, May 14, 2020, 5:45 AM IST

600 ಕ್ವಿಂಟಾಲ್‌ ಬಿತ್ತನೆ ಬೀಜ ಮಾರಾಟ

ಕೋಟ: ಮುಂಗಾರು ಹಂಗಾಮು ಹತ್ತಿರವಾಗುತ್ತಿದ್ದಂತೆ ರೈತರು ಬಿತ್ತನೆಗೆ ಪೂರಕ ತಯಾರಿಗಳನ್ನು ನಡೆಸುತ್ತಿದ್ದು ಬೀಜ ಖರೀದಿಗಾಗಿ ಕೃಷಿ ಕೇಂದ್ರಕ್ಕೆ ಲಗ್ಗೆ ಇಡುತ್ತಿದ್ದಾರೆ. ಲಾಕ್‌ಡೌನ್‌ ಕಾರಣಕ್ಕೆ ಊರಿಗಿಳಿದವರು ಗದ್ದೆ ಕಡೆ ಮುಖ ಮಾಡಿದ್ದು ಕೃಷಿಯಲ್ಲಿ ಆಸಕ್ತಿ ತೋರುತ್ತಿದ್ದಾರೆ. ಹೀಗಾಗಿ ಹಡಿಲು ಹಾಕಿದ ಹೆಕ್ಟೇರ್‌ಗಟ್ಟಲೆ ಭೂಮಿ ಈ ಬಾರಿ ಹಸಿರಾಗುವ ಲಕ್ಷಣ ಗೋಚರಿಸುತ್ತಿದ್ದು ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಜಾಸ್ತಿಯಾಗುವ ಲಕ್ಷಣಗಳಿವೆ.

ದಾಖಲೆಯ ಬೀಜ ಮಾರಾಟ
ಉಡುಪಿ ಜಿಲ್ಲೆಯ ಹಿಂದಿನ ಋತುವಿನಲ್ಲಿ ಸುಮಾರು 42 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಮುಂಗಾರು ಹಂಗಾಮಿನಲ್ಲಿ ಭತ್ತ ಬೆಳೆಯಲಾಗುತಿತ್ತು ಹಾಗೂ ಮೇ 10ರ ಅನಂತರ ಬೀಜ ಖರೀದಿ ಮುಂತಾದ ಚಟುವಟಿಕೆ ಆರಂಭವಾಗುತಿತ್ತು. ಆದರೆ ಈ ಬಾರಿ ಮೇ 6ರೊಳಗೆ ದಾಖಲೆ ಪ್ರಮಾಣದಲ್ಲಿ 600 ಕ್ವಿಂಟಾಲ್‌ ಎಂ.ಒ.4 ಭತ್ತದ ಬೀಜ ಮಾರಾಟವಾಗಿದೆ ಹಾಗೂ ಪ್ರಸ್ತುತ ಕೋಟ ಹೋಬಳಿಯಲ್ಲಿ 350ಕ್ವಿಂಟಾಲ್‌, ಬ್ರಹ್ಮಾವರ 290ಕ್ವಿಂಟಾಲ್‌, ಬೈಂದೂರು 330ಕ್ವಿಂಟಾಲ್‌, ವಂಡ್ಸೆ 200ಕ್ವಿಂಟಾಲ್‌, ಕಾರ್ಕಳ 60ಕ್ವಿಂಟಾಲ್‌, ಅಜೆಕಾರು 60ಕ್ವಿಂಟಾಲ್‌ ಬೀಜ ಮಾರಾಟವಾಗಿದ್ದು ಹಿಂದಿನ ವರ್ಷಗಳಿಗೆ ಹೋಲಿಸಿದರೆ ಮಾರಾಟವಾದ ಬೀಜದ ಪ್ರಮಾಣ ಸಾಕಷ್ಟು ಅಧಿಕವಿದೆ.

ಜಿಲ್ಲೆಯಲ್ಲಿ ಕಳೆದ ಮೇ 1ಕ್ಕೆ 124 ಕ್ವಿಂಟಾಲ್‌ ಬೀಜ ಮಾರಾಟವಾಗಿದ್ದು . ಈ ಬಾರಿ ಜಿಲ್ಲೆಯಲ್ಲಿ 500 ಕ್ವಿಂಟಾಲ್‌ ಬೀಜ ಮಾರಾಟವಾಗಿದೆ.

15 ವರ್ಷಗಳ‌ ಅನಂತರ ಕೃಷಿಯಲ್ಲಿ
15 ವರ್ಷಗಳಿಂದ ಬೆಂಗಳೂರಿನಲ್ಲಿ ಹೊಟೇಲ್‌ ಕೆಲಸ ಮಾಡುತ್ತಿದ್ದು ವರ್ಷದಲ್ಲಿ ಐದಾರು ಬಾರಿ ಒಂದೆರಡು ದಿನದ ಮಟ್ಟಿಗೆ ಊರಿಗೆ ಬಂದು ಹೋಗುತ್ತಿದ್ದೆವು. ಹೀಗಾಗಿ ಕೃಷಿ ಕೆಲಸವೆಲ್ಲ ಮರೆತೇ ಹೋಗಿತ್ತು. ಈ ಬಾರಿ ಲಾಕ್‌ಡೌನ್‌ನಿಂದ ನಾಲ್ಕು ಮಂದಿ ಅಣ್ಣ-ತಮ್ಮಂದಿರು ಊರಿಗೆ ಬಂದಿದ್ದು ಗದ್ದಗೆ ಗೊಬ್ಬರ, ಸುಡುಮಣ್ಣು ಹಾಕಿ ತರಗೆಲೆ ಸಂಗ್ರಸಿದ್ದೇವೆ. 5 ವರ್ಷಗಳಿಂದ ಹಡಿಲು ಹಾಕಿದ 1ಎಕ್ರೆ ಜಮೀನು ಮತ್ತೆ ನಾಟಿ ಮಾಡಲು ನಿರ್ಧರಿಸಿದ್ದೇವೆ.
-ಬಾಬು ಮರಕಾಲ ಕೋಟ, ಕೃಷಿಕ

ಆಸಕ್ತಿ ಹೆಚ್ಚಿದೆ
ಈ ಹಿಂದೆ ಮೇ 10ರ ಅನಂತರ ಬಿತ್ತನೆ ಬೀಜದ ಮಾರಾಟ ಆರಂಭವಾಗುತಿತ್ತು. ಆದರೆ ಈ ಬಾರಿ ಮೇ 6ರೊಳಗೆ 600ಕ್ವಿಂಟಾಲ್‌ ಬೀಜ ಮಾರಾಟವಾಗಿದ್ದು ಸಾಕಷ್ಟು ವಿಚಾರಣೆ ಬರುತ್ತಿದೆ ಹಾಗೂ ಕೃಷಿ ಚಟುವಟಿಕೆಯ ಕುರಿತು ಹೆಚ್ಚು-ಹೆಚ್ಚು ವಿಚಾರಣೆಗಳು ಬರುತ್ತಿವೆ. ಇದೊಂದು ಉತ್ತಮ ಬೆಳವಣಿಗೆಯಾಗಿದ್ದು ರೈತರ ಉತ್ಸಾಹ ಗಮನಿಸಿದರೆ ಹಡವು ಹಾಕಿದ, ಗೇಣಿ ಕೊಟ್ಟ ಭೂಮಿಯಲ್ಲೂ ಭತ್ತ ಬೆಳೆಯುವ ಲಕ್ಷಣವಿದೆ.
-ಕೆಂಪೇಗೌಡ, ಜಂಟಿ ಕೃಷಿ ಆಯುಕ್ತರು
ಉಡುಪಿ ಜಿಲ್ಲೆ

ಟಾಪ್ ನ್ಯೂಸ್

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.