ಬೆಂಗಳೂರಿಗೆ ನಡೆದೇ ಹೊರಟ ಝಾರ್ಖಂಡ್ ಕಾರ್ಮಿಕರು
1,200 ಮಂದಿಗೆ ಬಂಟ್ವಾಳ ಬಂಟರ ಭವನದಲ್ಲಿ ಊಟ, ವಸತಿ ವ್ಯವಸ್ಥೆ
Team Udayavani, May 14, 2020, 5:30 AM IST
ಸಾಂದರ್ಭಿಕ ಚಿತ್ರ.
ಬಂಟ್ವಾಳ: ಬೆಂಗಳೂರಿನಿಂದ ಝಾರ್ಖಂಡ್ಗೆ ರೈಲು ಇದೆ ಎಂದು ಯಾರೋ ತಪ್ಪು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಮಂಗಳೂರಿನಿಂದ ಹೆದ್ದಾರಿಯಲ್ಲಿ ಕಾಲ್ನಡಿಗೆಯಲ್ಲಿ ಹೊರಟ ಝಾರ್ಖಂಡ್ ಮೂಲದ 1,200 ಕಾರ್ಮಿಕರಿಗೆ ಬ್ರಹ್ಮರಕೂಟ್ಲು ಬಳಿಯ ಬಂಟ್ವಾಳದ ಬಂಟರ ಭವನದಲ್ಲಿ ವಸತಿ, ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.
ಈ ಮಾಹಿತಿ ಪಡೆದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ಬಂಟ್ವಾಳ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಅವರನ್ನು ಸಂಪರ್ಕಿಸಿದರು. ಬಳಿಕ ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ವಿವೇಕ್ ಶೆಟ್ಟಿ ನಗ್ರಿಗುತ್ತು ಹಾಗೂ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ಅವರ ಮೂಲಕ ಕಾರ್ಮಿಕರಿಗೆ ವ್ಯವಸ್ಥೆ ಮಾಡಲಾಯಿತು. ರಾಜೇಶ್ ನಾೖಕ್ ಬುಧವಾರದಿಂದ ಊಟೋಪಹಾರ ನೀಡುವ ಕುರಿತು ಭರವಸೆ ನೀಡಿದ್ದಾರೆ. 2 ದಿನಗಳೊಳಗೆ ರೈಲಿನ ವ್ಯವಸ್ಥೆ ಮಾಡುವ ಕುರಿತು ಕಾರ್ಮಿಕರಿಗೆ ಭರವಸೆ ನೀಡಲಾಗಿದೆ.
ತಡರಾತ್ರಿ ಎಸ್ಪಿ ಬಿ.ಎಂ. ಲಕ್ಷ್ಮೀ ಪ್ರಸಾದ್ ನೇತೃತ್ವದ ಬಂಟ್ವಾಳ ಪೊಲೀಸರು ಕಾರ್ಮಿಕರ ಮನವೊಲಿಸುವ ಕಾರ್ಯ ನಡೆಸಿದ್ದಾರೆ. ಬುಧವಾರ ಬೆಳಗ್ಗೆ ಸ್ಥಳಕ್ಕೆ ಶಾಸಕ ರಾಜೇಶ್ ನಾೖಕ್, ಮಂಗಳೂರು ಎಸಿ ಮದನ್ ಮೋಹನ್, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್, ಡಿವೈಎಸ್ಪಿ ವೆಲೆಂಟೈನ್ ಡಿ’ಸೋಜಾ, ತಾ.ಪಂ. ಇಒ ರಾಜಣ್ಣ, ತಾಲೂಕು ಆರೋಗ್ಯಾಧಿಕಾರಿ ಡಾ| ದೀಪಾ ಪ್ರಭು ಭೇಟಿ ನೀಡಿ ಕಾರ್ಮಿಕರ ಆರೋಗ್ಯ ತಪಾಸಣೆ ನಿರ್ವಹಿಸಿದ್ದಾರೆ.
ಬಂಟರ ಭವನಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಅವರೂ ಬುಧವಾರ ಭೇಟಿ ನೀಡಿ ಮಾಹಿತಿ ಪಡೆದರು.
ಬಂಟ್ವಾಳ ಗ್ರಾಮಾಂತರ ಠಾಣಾ ಪಿಎಸ್ಐ ಪ್ರಸನ್ನ ಕಾರ್ಮಿಕರನ್ನು ಕಳುಹಿಸುವ ಪ್ರಕ್ರಿಯೆ ಕುರಿತು ಮಾಹಿತಿ ನೀಡಿದರು. ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ ಸೇರಿದಂತೆ ಶಾಸಕರ ತಂಡ ಕಾರ್ಮಿಕರ ಊಟೋಪಹಾರದ ವ್ಯವಸ್ಥೆ ನಿರ್ವಹಿಸಿತು.
ಸ್ಥಳೀಯರಿಂದ ನೆರವು
ಗಂಟುಮೂಟೆ ಹಿಡಿದುಕೊಂಡು ಹೊರಟಿದ್ದ ಕಾರ್ಮಿಕರಿಗೆ ಫರಂಗಿಪೇಟೆ, ತುಂಬೆಯಲ್ಲಿ ಸ್ಥಳೀಯ ಯುವಕರು ನೀರು, ಹಣ್ಣಿನ ವ್ಯವಸ್ಥೆ ಕಲ್ಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ