ಸಾವಿರಾರು ವಲಸೆ ಕಾರ್ಮಿಕರು ಅತಂತ್ರ!

ದ.ಕ.: ವದಂತಿ, ಮಾಹಿತಿ ಕೊರತೆ ಹಿನ್ನೆಲೆ

Team Udayavani, May 14, 2020, 5:55 AM IST

ಸಾವಿರಾರು ವಲಸೆ ಕಾರ್ಮಿಕರು ಅತಂತ್ರ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾಕಿಯಾಗಿರುವ ಹೊರ ರಾಜ್ಯದ ವಲಸೆ ಕಾರ್ಮಿಕರನ್ನು ಕೆಲವು ದಿನಗಳಿಂದ ತಮ್ಮ ಊರುಗಳಿಗೆ ಕಳುಹಿಸಿ ಕೊಡಲಾಗುತ್ತಿದ್ದು, ಕೆಲವೊಂದು ವಲಸೆ ಕಾರ್ಮಿಕರು ಜಿಲ್ಲಾಡಳಿತದ ಮಾಹಿತಿ ಕೊರತೆ, ವದಂತಿಗಳಿಂದಾಗಿ ಅತಂತ್ರರಾಗಿದ್ದಾರೆ.

ಮಂಗಳೂರು ಜಂಕ್ಷನ್‌ ಮತ್ತು ಪುತ್ತೂರು ರೈಲು ನಿಲ್ದಾಣದಿಂದ ಕಾರ್ಮಿಕರನ್ನು ಹೊತ್ತು 8 ರೈಲುಗಳು ಈಗಾಗಲೇ ತೆರಳಿವೆ. ಅವುಗಳಲ್ಲಿ ಸುಮಾರು 10 ಸಾವಿರ ಮಂದಿ ತಮ್ಮ ಊರು ತಲುಪಿದ್ದಾರೆ. ಇನ್ನೂ ಇಪ್ಪತ್ತು ಸಾವಿರದಷ್ಟು ಮಂದಿ ಊರುಗಳಿಗೆ ತೆರಳುವ ಧಾವಂತದಲ್ಲಿದ್ದು, ಇತ್ತ ಜಿಲ್ಲಾಡಳಿತದಿಂದ ಮಾಹಿತಿ ಕೊರತೆ ಯಿಂದಾಗಿ ಕಾರ್ಮಿಕರು ಅತಂತ್ರ ಸ್ಥಿತಿಯಲ್ಲಿದ್ದಾರೆ.

ಎರಡೂ ರಾಜ್ಯಗಳ ಒಪ್ಪಿಗೆ ಸಿಗಬೇಕು
ಹೊರ ರಾಜ್ಯದ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು “ಸೇವಾ ಸಿಂಧು’ ಪೋರ್ಟಲ್‌ ಮುಖೇನ ಕಡ್ಡಾಯವಾಗಿ ನೋಂದಣಿ ಮಾಡಬೇಕು. ಎರಡೂ ರಾಜ್ಯಗಳ ಒಪ್ಪಿಗೆ ಬಳಿಕ ಅವರನ್ನು ರೈಲು ಮುಖೇನ ತಮ್ಮ ಊರುಗಳಿಗೆ ಕಳುಹಿಸಲಾಗುತ್ತಿದೆ. ಇಂತಹ ಕಾರ್ಮಿಕನ್ನು ಕರೆದೊಯ್ಯಲು ದ.ಕ. ಜಿಲ್ಲಾಡಳಿತವು ರೈಲು ವ್ಯವಸ್ಥೆ ಮಾಡಿದ್ದು, ಆಯಾ ದಿನದಂದು ವಲಸೆ ಕಾರ್ಮಿಕರು ಇದ್ದ ಸ್ಥÙದಿಂದಲೇ ಕೆಎಸ್ಸಾರ್ಟಿಸಿ ಬಸ್‌ ಮುಖೇನ ನೇರವಾಗಿ ರೈಲು ನಿಲ್ದಾಣಕ್ಕೆ ಕಳುಹಿಸಲಾಗುತ್ತಿದೆ. ಆದರೆ ಕೆಲವೊಬ್ಬರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು,ಇದರಿಂದಾಗಿ ಕಾರ್ಮಿಕರು ನಗರದಲ್ಲಿ ತಂಡೋಪತಂಡವಾಗಿ ಅಲ್ಲಲ್ಲಿ ಜಮಾಯಿಸುತ್ತಿದ್ದಾರೆ.

ಗೊಂದಲ
ಲಾಕ್‌ಡೌನ್‌ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಿ ಕೊಡ ಲಾಗುತ್ತದೆ ಎಂಬ ವದಂತಿಯಿಂದಾಗಿ ಮೇ 8ರಂದು ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದಲ್ಲಿ ಸಾವಿರಾರು ಮಂದಿ ಕಾರ್ಮಿಕರು ಜಮಾಯಿಸಿ ಗೊಂದಲಕ್ಕೆ ಎಡೆ ಯಾಗಿತ್ತು. ಅಷ್ಟೇ ಅಲ್ಲದೆ, ತಮ್ಮನ್ನು ಊರಿಗೆ ಕಳುಹಿಸುವಂತೆ “ವಿ ವಾಂಟ್‌ ಟು ಗೋ ಹೋಮ್‌’ ಎಂಬ ಪೋಸ್ಟರ್‌ ಹಿಡಿದು ಪ್ರತಿಭಟನೆ ನಡೆಸಿದ್ದರು. ಅದೇ ರೀತಿ ನಗರದ ಪುರಭವನ, ಕರಾವಳಿ ಉತ್ಸವ ಮೈದಾನದಲ್ಲಿಯೂ ಈ ಹಿಂದೆ ಅನೇಕ ಮಂದಿ ಹೊರ ರಾಜ್ಯಗಳ ವಲಸೆ ಕಾರ್ಮಿಕರು ಜಮಾಯಿಸಿದ್ದರು.

ಜಿಲ್ಲಾಡಳಿತ ಹೆಚ್ಚಿನ ನಿಗಾ ವಹಿಸಲಿ
ದಕ್ಷಿಣ ಕನ್ನಡ ಜಿಲ್ಲೆಯಿಂದ ಬೇರೆ ರಾಜ್ಯಕ್ಕೆ ತೆರಳುವ ಬಹುತೇಕ ವಲಸೆ ಕಾರ್ಮಿಕರು ಸಾಮಾಜಿಕ ಅಂತರ ಕಾಪಾಡಿಕೊಳ್ಳುತ್ತಿಲ್ಲ. ಅದರಲ್ಲೂ ಎರಡು ದಿನಗಳ ಹಿಂದೆ ಮಂಗಳೂರಿನ ಸ್ಟೇಟ್‌ಬ್ಯಾಂಕ್‌ ಖಾಸಗಿ ಬಸ್‌ ನಿಲ್ದಾಣದ ಬಳಿ ಜಮಾಯಿಸಿದ್ದ ಸಾವಿರಾರು ಮಂದಿ ವಲಸೆ ಕಾರ್ಮಿಕರು ಒತ್ತೂತ್ತಾಗಿ ನಿಂತಿದ್ದರು. ಮಾಸ್ಕ್ ಹಾಕುವುದನ್ನು ಮರೆತಿದ್ದರು. ಇನ್ನು, ತಮ್ಮ ಊರುಗಳಿಗೆ ತೆರಳುವ ಧಾವಂತದಲ್ಲಿ ಎಚ್ಚರ ಕಳೆದುಕೊಂಡರೆ ದೊಡ್ಡ ಅನಾಹುತಕ್ಕೆ ಎಡೆ ಮಾಡಿಕೊಟ್ಟಂತಾಗುತ್ತದೆ. ಈ ಬಗ್ಗೆ ಜಿಲ್ಲಾಡಳಿತ ಗಮನ ನೀಡಬೇಕಿದೆ.

ಮತ್ತಷ್ಟು ರೈಲಿಗೆ ಬೇಡಿಕೆ
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು “ಉದಯವಾಣಿ ಸುದಿನ’ಕ್ಕೆ ಪ್ರತಿಕ್ರಿಯಿಸಿ, ಈಗಾಗಾಲೇ ವಿವಿಧ ರಾಜ್ಯಗಳ ವಲಸೆ ಕಾರ್ಮಿಕರನ್ನು ತಮ್ಮ ಊರುಗಳಿಗೆ ಕಳುಹಿಸ ಲಾಗುತ್ತಿದೆ. ಮತ್ತಷ್ಟು ರೈಲಿಗೆ ಬೇಡಿಕೆ ಇದ್ದು, ಈ ಬಗ್ಗೆ ರಾಜ್ಯ ಸರಕಾರದ ಗಮನಕ್ಕೆ ತರಲಾಗಿದೆ. ವಲಸೆ ಕಾರ್ಮಿಕರಿಗೆ ಜಿಲ್ಲಾಡಳಿತದ ವತಿಯಿಂದ ಮಾಹಿತಿ ನೀಡಲಾಗುತ್ತಿದೆ. ದ.ಕ. ಜಿಲ್ಲೆಯಲ್ಲಿ ಇನ್ನೇನು ಕಾಮಗಾರಿಗಳು ಆರಂಭವಾಗಲಿದ್ದು, ಕಾರ್ಮಿಕರನ್ನು ಮನ ವೊಲಿಸಲಾಗುತ್ತಿದೆ’ ಎಂದಿದ್ದಾರೆ.

 ವದಂತಿ ನಂಬಬೇಡಿ
ವಲಸೆ ಕಾರ್ಮಿಕರನ್ನು ಅವರಿರುವ ಪ್ರದೇಶಗಳಿಂದ ರೈಲು ನಿಲ್ದಾಣಕ್ಕೆ ನೇರವಾಗಿ ಕೆಎಸ್ಸಾರ್ಟಿಸಿ ಬಸ್‌ ಮುಖೇನ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಕೆಲವೊಂದು ಮಂದಿ ವಾಟ್ಸಾಪ್‌ ಮುಖೇನ ಸುಳ್ಳು ಸಂದೇಶ ರವಾನಿಸುತ್ತಿದ್ದಾರೆ. ಇದನ್ನು ನಂಬಿ ಅನೇಕ ಮಂದಿ ಅಲ್ಲಲ್ಲಿ ಗುಂಪು ಸೇರುತ್ತಿದ್ದಾರೆ. ಯಾರು ಕೂಡ ವದಂತಿ ನಂಬಬಾರದು.
-ಡಾ|ಭರತ್‌ ಶೆಟ್ಟಿ ವೈ.
ಶಾಸಕ

ಟಾಪ್ ನ್ಯೂಸ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.