ಪಾಸಿಟಿವ್ ಬಂದಲ್ಲಿ ಕಂಟೇನ್ಮೆಂಟ್-ಬಫರ್ ಝೋನ್ ಸ್ಥಾಪನೆ
Team Udayavani, May 14, 2020, 5:33 AM IST
ರಾಯಚೂರು: ಕಟ್ಟುನಿಟ್ಟಿನ ಕ್ರಮಗಳ ಮಧ್ಯೆಯೂ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾದರೆ, ಆ ಪ್ರದೇಶದಲ್ಲಿ ಕಂಟೇನ್ಮೆಂಟ್ ಹಾಗೂ ಬಫರ್ ಜೋನ್ಗಳನ್ನು ಸ್ಥಾಪಿಸಿ ಸೋಂಕು ಹರಡದಂತೆ ತಡೆಯುವಂತೆ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆದ ವಿಡಿಯೋ ಸಂವಾದದಲ್ಲಿ ಸೂಚನೆ ನೀಡಿದರು. ಕಂಟೇನ್ಮೆಂಟ್ ವಲಯ ರಚಿಸಿದಲ್ಲಿ ಆ ಪ್ರದೇಶಗಳಲ್ಲಿ ಜನ ಮನೆಯಿಂದ ಹೊರಬಾರದಂತೆ ತಡೆಯಬೇಕು. ಕೋವಿಡ್ ಸೋಂಕು ಹರಡಿದ ದೃಢೀಕರಣ ನಂತರ ಆಯಾ ವಾರ್ಡ್ಗಳಲ್ಲಿ ಸೀಲ್ಡೌನ್ ಮಾಡಬೇಕು. ಸೋಂಕು ಇರುವವರ ಮನೆಯಿಂದ ನೂರು ಮೀಟರ್ ದೂರದಲ್ಲಿ ಅವರೊಂದಿಗೆ ಯಾವುದೇ ರೀತಿಯ ಸಂಪರ್ಕ ಇಟ್ಟುಕೊಳ್ಳದಂತೆ ಮಾಡಬೇಕು ಎಂದು ವಿವರಿಸಿದರು.
ಸೀಲ್ಡೌನ್ ಮಾಡಿದ ನಂತರ ಪೊಲೀಸರು ಆ ಪ್ರದೇಶದಲ್ಲಿ ಬ್ಯಾರಿಕೇಡ್ ಅಳವಡಿಸಿ ಜನ ಮನೆಯಿಂದ ಹೊರ ಬರದಂತೆ ತಡೆಯುತ್ತಾರೆ. ನಿಯಂತ್ರಿತ ವಲಯದ ಒಳಗೆ ಮತ್ತು ಹೊರಗೆ ಯಾವುದೇ ಖಾಸಗಿ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ. ಇಡೀ ಪ್ರದೇಶವನ್ನು ಸಂಪೂರ್ಣವಾಗಿ ಸೀಲ್ಡೌನ್ ಮಾಡಬೇಕಾಗುತ್ತದೆ ಎಂದು ಹೇಳಿದರು.
ಕಂಟೇನ್ಮೆಂಟ್ ವಲಯಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸಂಪರ್ಕ ವ್ಯಕ್ತಿಗಳಿಗೆ ಆರೋಗ್ಯ ದೃಷ್ಟಿಯಿಂದ ಕ್ವಾರಂಟೈನ್ ಮಾಡಲಾಗುತ್ತದೆ. ಇದರ ಬಗ್ಗೆ ಯಾರು ಭಯಪಡುವ ಅಗತ್ಯವಿಲ್ಲ. ಸೀಲ್ಡೌನ್ ಪ್ರದೇಶಗಳಲ್ಲಿ ಜನರ ಮನೆ ಬಾಗಿಲಿಗೆ ಅಗತ್ಯ ವಸ್ತು ಪೂರೈಸಲು ಕ್ರಮ ಕೈಗೊಳ್ಳಬೇಕು. ಅನಾವಶ್ಯಕವಾಗಿ ಸಂಚರಿಸುವುದನ್ನು ಸಂಪೂರ್ಣ ನಿಷೇಧಿಸಲಾಗುತ್ತದೆ. ಪಾಸ್ ಇದ್ದವರಿಗೆ ಮಾತ್ರ ಮನೆಯಿಂದ ಹೊರ ಬರಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಹೇಳಿದರು.
ಪಾಸಿಟಿವ್ ಕೇಸ್ ಪತ್ತೆಯಾದಲ್ಲಿ ತಕ್ಷಣವೇ ಅವರನ್ನು ಐಸೋಲೇಷನ್ ವಾರ್ಡ್ಗೆ ಶಿಫ್ಟ್ ಮಾಡಬೇಕು. ಅವರ ಜತೆ ಯಾರು ಯಾರು ಸಂಪರ್ಕ ಹೊಂದಿರುವವರ ಮಾಹಿತಿ ಕಲೆ ಹಾಕಬೇಕು. ಬಫರ್ ಝೋನ್ಗಳಲ್ಲಿ ನಗರ ಪ್ರದೇಶದಲ್ಲಿ 5 ಕಿಮೀ ಮತ್ತು ಗ್ರಾಮೀಣ ಪ್ರದೇಶದಲ್ಲಿ 7 ಕಿಮೀ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ಹರಡದಂತೆ ತಡೆಯಲು ನಿರಂತರವಾಗಿ ಕಣ್ಗಾವಲು ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.
ಎಡಿಸಿ ದುರುಗೇಶ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶ್ರೀಹರಿಬಾಬು, ರಾಯಚೂರು ಸಹಾಯಕ ಆಯುಕ್ತ ಸಂತೋಷ ಕಾಮಗೌಡ, ರಾಯಚೂರು ತಹಶೀಲ್ದಾರ್ ಡಾ| ಹಂಪಣ್ಣ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ರಾಮಕೃಷ್ಣ, ಜಿಪಂ ಉಪ ಕಾರ್ಯದರ್ಶಿ ಮಹ್ಮದ್ ಯೂಸೂಫ್, ಡಾ| ಕೆ. ನಾಗರಾಜ, ಡಾ| ವೈ. ಸುರೇಂದ್ರ ಬಾಬು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mother Teresa; ವೆಬ್ ಸೀರೀಸ್ನಲ್ಲಿ ಮದರ್ ತೆರೇಸಾ ಜೀವನ ಚರಿತ್ರೆ
Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ
Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ
Hubli; ನೇಹಾ ಪ್ರಕರಣದ ಬಳಿಕ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು: ಜಯಮೃಂತ್ಯುಜಯ ಸ್ವಾಮೀಜಿ
Belagavi; ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Mother Teresa; ವೆಬ್ ಸೀರೀಸ್ನಲ್ಲಿ ಮದರ್ ತೆರೇಸಾ ಜೀವನ ಚರಿತ್ರೆ
Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ
Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ
Hubli; ನೇಹಾ ಪ್ರಕರಣದ ಬಳಿಕ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು: ಜಯಮೃಂತ್ಯುಜಯ ಸ್ವಾಮೀಜಿ
Belagavi; ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ