ಕೋವಿಡ್ ವಿರುದ್ಧ ಹೋರಾಟ ದಾದಿಯರ ಸೇವೆ ಶ್ಲಾಘನೀಯ: ಅಜಿತ್‌


Team Udayavani, May 14, 2020, 11:12 AM IST

ಕೋವಿಡ್ ವಿರುದ್ಧ ಹೋರಾಟ ದಾದಿಯರ ಸೇವೆ ಶ್ಲಾಘನೀಯ: ಅಜಿತ್‌

ಸಾಂದರ್ಭಿಕ ಚಿತ್ರ

ಮುಂಬಯಿ: ವಿಶ್ವಾದ್ಯಂತ ಹರಡಿರುವ ಮಹಾಮಾರಿ ಕೋವಿಡ್ ಸೋಂಕಿನ ವಿರುದ್ಧದ ಹೋರಾಟದಲ್ಲಿ ವೈದ್ಯರೊಂದಿಗೆ ಸೇವೆ ಸಲ್ಲಿಸುವ ಮತ್ತು ವೈದ್ಯರಿಗಿಂತ ಒಂದು ಹೆಜ್ಜೆ ಮುಂದೆ ನಿಂತು ರೋಗಿಗಳ ಆರೋಗ್ಯದ ಕಾಳಜಿ ವಹಿಸುವ ನರ್ಸ್‌ ಸಹೋದರಿಯರ ಮಾನವೀಯತೆಯ ಸೇವೆಯುಇತಿಹಾಸದ ಪುಟಗಳಲ್ಲಿ ಚಿನ್ನದ ಅಕ್ಷರಗಳಿಂದ ದಾಖಲಾಗಲಿ ಎಂದು ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಹೇಳಿದ್ದಾರೆ.

ಮಂಗಳವಾರ ವಿಶ್ವ ದಾದಿಯರ ದಿನಾಚರಣೆಯ ಅಂಗವಾಗಿ ಎಲ್ಲ ದಾದಿಯರಿಗೆ ಶುಭಾಶಯ ಕೋರಿದ ಅವರು, ಮಾನವೀಯತೆಯ ಕಲ್ಯಾಣದಲ್ಲಿ ರೋಗಿಗಳ ಸೇವೆ ಅತ್ಯುನ್ನತವಾಗಿದೆ. ಕೋವಿಡ್ ಮಹಾಮಾರಿಯ ಆತಂಕದ ಸಂದರ್ಭದಲ್ಲಿ ವಿಶ್ವಾದ್ಯಂತ ದಾದಿಯರು ತಮ್ಮ ವತಿಯಿಂದ ಅಚಲ ಸೇವೆಯನ್ನು ನೀಡುತ್ತಿದ್ದಾರೆ. ಮಾನವೀಯತೆಯ ನಿಜರೂಪವನ್ನು ಅವರಲ್ಲಿ ನಾವಿಂದು ಕಾಣಬಹುದು. ನಿಸ್ವಾರ್ಥ ಸೇವೆಯಿಂದ ಈ ಸಹೋದರಿಯರು ಸಮಾಜದಲ್ಲಿ ಪ್ರೀತಿ ಮತ್ತು ಗೌರವದ ಸ್ಥಾನಗಳನ್ನೂಹೊಂದಿದ್ದಾರೆ. ಇಂದು, ಪ್ರಪಂಚವು ಆತಂಕದಲ್ಲಿರುವಾಗ ಅನೇಕ ದಾದಿಯರು ದೇವದೂತರಂತೆ ರೋಗಿಗಳ ಪ್ರಾಣ ಉಳಿಸಲು ನಿರಂತರ ಹೋರಾಟವನ್ನು ಮಾಡುತ್ತಿದ್ದಾರೆ. ರೋಗಿಗಳ ಚಿಕಿತ್ಸೆಯ ಜತೆಗೆ, ಅವರು ರೋಗಿಗಳಿಗೆ ತಾಳ್ಮೆ, ಆತ್ಮವಿಶ್ವಾಸ ಮತ್ತು ಸ್ವಾವಲಂಬನೆಯನ್ನು ನೀಡುತ್ತಿದ್ದಾರೆ. ಕೋವಿಡ್ ವಿರುದ್ಧದ ಹೋರಾಟದಲ್ಲಿ ದಾದಿಯರ ಪಾತ್ರ ಮುಖ್ಯವಾಗಿದೆ. ತಮ್ಮ ಜೀವನವನ್ನು ಅಪಾಯದಲ್ಲಿ ಇರಿಸಿ ಮತ್ತು ಕುಟುಂಬದ ಎಲ್ಲ ಕಲ್ಪನೆಯನ್ನು ಬದಿಗಿಟ್ಟು, ಅನೇಕ ದಾದಿಯರು ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ. ವಿಶ್ವದ, ದೇಶ, ರಾಜ್ಯ , ನಗರ, ಗ್ರಾಮೀಣ, ದೂರದ ಪ್ರದೇಶಗಳಲ್ಲಿ ಇವರು ಇಂದು ಹಗಲು -ರಾತ್ರಿಯೆನ್ನದೆ ಕರ್ತವ್ಯದಲ್ಲಿದ್ದಾರೆ. ಅವರ ಸೇವೆಗೆ ಕೃತಜ್ಞತೆ ಸಲ್ಲಿಸಲು ಪದಗಳು ಸಾಲವು ಎಂದು ಅಜಿತ್‌ ಪವಾರ್‌ ಹೇಳಿದರು.

ಪ್ರಸ್ತುತ ಕೋವಿಡ್ ಚಿಕಿತ್ಸೆಗೆ ಯಾವುದೇ ಲಸಿಕೆ ಪತ್ತೆಯಾಗಿಲ್ಲ. ಆದರೂ ವೈರಾಣು ಸೋಂಕಿತರಿಗೆ ಸರಿಯಾದ ಆರೈಕೆಯು ಮಾಡುವ ಜತೆಗೆ ಅವರನ್ನು ಗುಣಮುಖ ಮಾಡುವುದರಲ್ಲಿ ದಾದಿಯರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ದಾದಿಯರು ಈ ಕೆಲಸವನ್ನು ಅತ್ಯಂತ ಪ್ರಾಮಾಣಿಕತೆಯಿಂದ ಮಾಡುತ್ತಿದ್ದಾರೆ. ಆದ್ದರಿಂದ, ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿತರು ಗುಣಮುಖ ಆಗಿರುವ ಪ್ರಮಾಣ ಉತ್ತಮವಾಗಿದೆ. ಇದಕ್ಕೆಲ್ಲ ಇವರು ನೀಡುತ್ತಿರುವ ಕೊಡುಗೆಯನ್ನು ಯಾರೂ ಮರೆಯುವಂತಿಲ್ಲ. ಸಾಂಕ್ರಾಮಿಕ ರೋಗಗಳು, ಇತರ ದೀರ್ಘ‌ಕಾಲದ ಕಾಯಿಲೆಗಳು, ಪ್ರಸ್ತುತ ಕೋವಿಡ್ ಮಹಾಮಾರಿ ಹೀಗೆ ಅನೇಕ ಸಮಸ್ಯೆಗಳನ್ನು ದಾದಿಯರು ಎದುರಿಸುತ್ತಿರುತ್ತಾರೆ. ಅವರು ನೀಡುವ ನಿರಂತರ ಸೇವೆಯನ್ನು ಗಮನಿಸಿ ಅವರನ್ನು ಪ್ರೋತ್ಸಾಹಿಸುವುದು, ಅವರ ಸ್ಥೈರ್ಯವನ್ನು ಹೆಚ್ಚಿಸುವುದು ಮತ್ತು ಅವರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸುವುದು ನಮ್ಮ ಕರ್ತವ್ಯ ಎಂದು ಅಜಿತ್‌ ಪವಾರ್‌ ಹೇಳಿದ್ದಾರೆ .

ಟಾಪ್ ನ್ಯೂಸ್

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.