ಬೇಡಿಕೆ ಕುಸಿತ: ಎಂಆರ್ಪಿಎಲ್ನ 2ನೇ ಘಟಕ ತಾತ್ಕಾಲಿಕ ಸ್ಥಗಿತ!
Team Udayavani, May 15, 2020, 5:45 AM IST
ಸಾಂದರ್ಭಿಕ ಚಿತ್ರ.
ಮಂಗಳೂರು: ವಾರ್ಷಿಕ ನಿರ್ವಹಣೆ ಹಾಗೂ ನೀರಿನ ಕೊರತೆ ಎದುರಾಗುವ ಕಾರಣದಿಂದ ಎಂಆರ್ಪಿಎಲ್ನ ಪೆಟ್ರೋಲ್, ಡೀಸೆಲ್ ಉತ್ಪಾದನೆಯ ಮೂರು ಘಟಕಗಳ ಪೈಕಿ ಒಂದೆರಡನ್ನು ಬಂದ್ ಮಾಡುವುದು ಪ್ರತಿ ವರ್ಷದ ಸಾಮಾನ್ಯ ಸಂಗತಿ. ಆದರೆ ಇದೇ ಮೊದಲ ಬಾರಿಗೆ ಲಾಕ್ಡೌನ್ನಿಂದಾಗಿ ವಾಹನ ಓಡಾಟ ಕಡಿಮೆಯಾಗಿ ಪೆಟ್ರೋಲ್, ಡೀಸೆಲ್ಗೆ ಬೇಡಿಕೆ ಕಡಿಮೆಯಾದ ಕಾರಣಕ್ಕಾಗಿ ಇದೀಗ ಮೂರು ಘಟಕಗಳ ಪೈಕಿ ಎರಡನೇ ಘಟಕದ ಕಾರ್ಯನಿರ್ವಹಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ!
ಲಾಕ್ಡೌನ್ ಪರಿಣಾಮ ಶೇ. 60ರಷ್ಟು ಪೆಟ್ರೋಲ್, ಡೀಸೆಲ್ ಉತ್ಪಾದನೆ ಕಡಿಮೆಯಾಗಿದೆ. ಲಾಕ್ಡೌನ್ ಆರಂಭದ ದಿನಗಳಲ್ಲಿ ಶೇ. 100ರಷ್ಟು ಕಾರ್ಯಾಚರಿ ಸಿದ ಘಟಕ ಬಳಿಕ ಶೇ.75ರಷ್ಟು ಮಾತ್ರ ಉತ್ಪಾದನೆ ಮಾಡಿತು. ಇದೀಗ ಶೇ. 40ರಷ್ಟು ಮಾತ್ರ ಉತ್ಪಾದಿಸುತ್ತಿದೆ. ಕೆಲವು ದಿನಗಳಲ್ಲಿ ವಾರ್ಷಿಕ ನಿರ್ವಹಣೆಗಾಗಿ ಮತ್ತೂಂದು ಘಟಕ ಶಟ್ಡೌನ್ ಆಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಕಚ್ಚಾತೈಲ ನಿರಾತಂಕ ವಿದೇಶದಲ್ಲಿ ಕೋವಿಡ್ 19 ಆತಂಕದ ಮಧ್ಯೆಯೂ ಇರಾಕ್, ಕುವೈಟ್, ಸೌದಿಯಿಂದ ಎಂಆರ್ಪಿಎಲ್ಗೆ ಕಚ್ಚಾತೈಲ ನಿರಂತರವಾಗಿ ಸರಬರಾಜಾಗುತ್ತಿದೆ. ಹೆಚ್ಚುವರಿ ಕಚ್ಚಾತೈಲವನ್ನು ಪೆರ್ಮುದೆಯ ಐಎಸ್ಪಿಆರ್ಎಲ್ನಲ್ಲಿ ಸಂಗ್ರಹ ಮಾಡಲಾಗುತ್ತಿದೆ. ಬೇಡಿಕೆ ಕೊರತೆ ಹಿನ್ನೆಲೆಯಲ್ಲಿ ಹಾಸನಕ್ಕೆ ಪೈಪ್ಲೈನ್ ಮೂಲಕ ಡೀಸೆಲ್ ಸರಬರಾಜು ಸ್ಥಗಿತಗೊಂಡಿತ್ತು; ಬುಧವಾರದಿಂದ ಮತ್ತೆ ಆರಂಭಿಸಲಾಗು ತ್ತಿದೆ. ದೇಶೀಯ ಬೇಡಿಕೆ ಇಲ್ಲದ ಕಾರಣ ಡೀಸೆಲ್ ಈಗಲೂ ವಿದೇಶಕ್ಕೆ ರಫ್ತಾಗುತ್ತಿದೆ ಎಂದು ಎಂಆರ್ಪಿಎಲ್ನ ಕಾರ್ಪೊರೇಟ್ ಕಮ್ಯುನಿಕೇಶನ್ನ ಜನರಲ್ ಮ್ಯಾನೇಜರ್ ರುಡೋಲ್ಫ್ ನೊರೋನ್ಹಾ “ಉದಯವಾಣಿ’ಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ
Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ
Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ
Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ
Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು
Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ