ಡೊನೇಷನ್ ಹಾವಳಿ ತಡೆಯಲು ಒತ್ತಾಯ
Team Udayavani, May 15, 2020, 6:09 AM IST
ಹರಪನಹಳ್ಳಿ: ರಾಜ್ಯಾದ್ಯಂತ ಖಾಸಗಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳು ಪ್ರತಿವರ್ಷ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ವಿದ್ಯಾರ್ಥಿಗಳಿಂದ ಡೊನೇಷನ್ ವಸೂಲಿ ಮಾಡುತ್ತಿರುವುದನ್ನು ತಡೆಯಲು ಒತ್ತಾಯಿಸಿ ಎನ್ಎಸ್ಯುಐ ಪದಾಧಿಕಾರಿಗಳು ಸ್ಥಳೀಯ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ಖಾಸಗಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳು ಸರ್ಕಾರದಿಂದ ವಿವಿಧ ತೆರನಾದ ಅನೇಕ ವಿನಾಯಿತಿ ಪಡೆದಿದ್ದರೂ ಡೊನೇಷನ್ ವಿಚಾರದಲ್ಲಿ ಸರ್ಕಾರದ ನಿಯಮಗಳನ್ನು ಪಾಲಿಸುತ್ತಿಲ್ಲ. ಶಿಕ್ಷಣದ ಖಾಸಗೀಕರಣದ ಪರಿಣಾಮದಿಂದಾಗಿ ಈ ಶಿಕ್ಷಣ ಸಂಸ್ಥೆಗಳು ಸಂಪೂರ್ಣ ಸರ್ಕಾರದ ನಿಯಂತ್ರಣದಲ್ಲಿಲ್ಲ. ಹೀಗಾಗಿ ಶಿಕ್ಷಣ ದಾಸೋಹ ಪರಿಕಲ್ಪನೆ ಬಡ ಮತ್ತು ಮಧ್ಯಮ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಂಚಿತವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕೋವಿಡ್ ವೈರಸ್ ಕಾರಣಕ್ಕೆ ಸದ್ಯಕ್ಕೆ ಶಾಲಾ-ಕಾಲೇಜುಗಳು ತಟಸ್ಥಗೊಂಡಿದ್ದರೂ ಕೂಡ ಶೈಕ್ಷಣಿಕ ವರ್ಷ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಪಾಲಕರಿಗೆ ಶಿಕ್ಷಣ ಸಂಸ್ಥೆಗಳು ಫೋನು ಕರೆಗಳು, ಮೆಸೇಜ್ಗಳ ಮುಖಾಂತರ ಡೊನೇಷನ್ ಪೀಡನೆ ಆರಂಭಗೊಂಡಿದೆ. ಲಾಕೌಡೌನ್ನಿಂದ ಈಗಾಗಲೇ ಜನ ಆರ್ಥಿಕ ಹೊರೆಯಿಂದ ಬಳಲುತ್ತಿದ್ದು, ಕಾರ್ಮಿಕ ವರ್ಗ ಮತ್ತು ದಿನಗೂಲಿ ಕುಟುಂಬಗಳು ಬೀದಿಗೆ ಬಿದ್ದು ಕೇವಲ ದಾನಿಗಳ ಆಹಾರ ಸಾಮಾಗ್ರಿಗಳ ಸಹಕಾರದಿಂದ ಬದುಕು ಸಾಗಿಸುತ್ತಿದ್ದಾರೆ.
ಇಂತಹ ಸಮಯದಲ್ಲಿ ದುಬಾರಿ ಶುಲ್ಕ ನೀಡಿ ಶಾಲಾ-ಕಾಲೇಜುಗಳಲ್ಲಿ ಭರ್ತಿ ಮಾಡುವುದು ಗಾಯದ ಮೇಲೆ ಬರೆ ಎಳೆದಂತಾಗುತ್ತದೆ. ಆದ್ದರಿಂದ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ಈ ಕೂಡಲೇ ಖಾಸಗಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳು ಡೊನೇಷನ್ ಪಡೆಯದಂತೆ ಕಟ್ಟು ನಿಟ್ಟಾದ ಕ್ರಮ ಜರುಗಿಸಿ, ಸರ್ಕಾರ ನಿಗದಿ ಮಾಡಿದ ಶುಲ್ಕವನ್ನು ಮಾತ್ರ ವಿದ್ಯಾರ್ಥಿಗಳಿಂದ ಪಡೆಯಲು ಆದೇಶ ನೀಡಬೇಕೆಂದು ಒತ್ತಾಯಿಸಿದರು.
ಎನ್ಎಸ್ಯುಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಡಿ. ಜೀಷಾನ್, ತಾಲೂಕು ಅಧ್ಯಕ್ಷ ಎಂ.ಡಿ. ಶ್ರೀಕಾಂತ, ಪ್ರಧಾನ ಕಾರ್ಯದರ್ಶಿ ಎಸ್.ಸಾದಿಕ್, ಕಾರ್ಯದರ್ಶಿ ಬಿ.ಮೋಹನ್ಕುಮಾರ, ಲಾಟಿ ಅಮೀರ್ ಸೊಹೇಲ್, ಉಪಾಧ್ಯಕ್ಷ ಡಂಕಿ ವಾಸೀಂ, ಸಹಕಾರ್ಯದರ್ಶಿ ದೊರೆ ಗುರುಬಸವರಾಜ, ಹಡಗಲಿ ಅಬುಸಾಲೇಹ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು