ವಲಸೆ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ನೀಡಲು ಮನವಿ
Team Udayavani, May 15, 2020, 6:27 AM IST
ಶಿವಮೊಗ್ಗ: ಲಂಬಾಣಿ (ಬಂಜಾರ) ಸಮುದಾಯದ ವಲಸೆ ಕಾರ್ಮಿಕರಿಗೆ ಕೋವಿಡ್-19 ಸಂದರ್ಭದಲ್ಲಿ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘದ ವತಿಯಿಂದ ಗುರುವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಕೋವಿಡ್ ಪರಿಣಾಮದಿಂದ ದೇಶ ತಲ್ಲಣಗೊಂಡಿದ್ದು, ವಲಸೆ ಕಾರ್ಮಿಕರ ಬದುಕು ಅತಂತ್ರ ಸ್ಥಿತಿಗೆ ತಲುಪಿದೆ. ಇದರಿಂದಾಗಿ ರಾಜ್ಯದ ಉತ್ತರ ಭಾಗ ಮತ್ತು ಬೇರೆಬೇರೆ ಭಾಗಗಳಿಂದ ಬಂಜಾರ ಸಮುದಾಯದವರು ಜೀವನೋಪಾಯಕ್ಕಾಗಿ ಉದ್ಯೋಗ ಹರಸಿ ಮಲೆನಾಡು, ಕಾಫಿ ಸೀಮೆ, ದಕ್ಷಿಣ ಭಾಗಗಳಿಗೆ ವಲಸೆ ಹೋಗುತ್ತಾರೆ ಎಂದರು.
ಅನ್ಯ ರಾಜ್ಯಗಳಾದ ಗೋವಾ, ಮಹಾರಾಷ್ಟ್ರ, ಆಂದ್ರಪ್ರದೇಶ, ತೆಲಂಗಾಣ,ಕೇರಳ ರಾಜ್ಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಲಸೆ ಹೋಗುತ್ತಾರೆ. ಲಾಕ್ಡೌನ್ ಪರಿಣಾಮದಿಂದ ಬಹುತೇಕ ಕಾರ್ಮಿಕರು ತಮ್ಮ ಊರುಗಳಿಗೆ ವಾಪಾಸ್ ತೆರಳುತ್ತಿದ್ದಾರೆ. ಇದರ ಪರಿಣಾಮ ಉದ್ಯೋಗ, ಆಹಾರ ಇತರೆ ಅವಶ್ಯಕತೆಗಳ ಕೊರತೆ ಉಂಟಾಗಿದೆ ಎಂದರು.
ಬಂಜಾರ ಸಮಾಜದ ಪ್ರಮುಖರಾದ ಡಿ.ಆರ್. ಗಿರೀಶ್, ಉಮಾ ಮಹೇಶ್ವರ ನಾಯ್ಕ, ಉಷಾನಾಯ್ಕ, ಸುನಿಲ್ ನಾಯ್ಕ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ
Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!
Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ
Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್: ದೂರು
BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ