ಆಪತ್ಕಾಲದಲ್ಲಿ ಆಸರೆಯಾದ ಜಲಾಮೃತ


Team Udayavani, May 15, 2020, 4:32 PM IST

ಆಪತ್ಕಾಲದಲ್ಲಿ  ಆಸರೆಯಾದ ಜಲಾಮೃತ

ಹಾವೇರಿ: ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲಾ ಪಂಚಾಯತ್‌ ಹಾಗೂ ಕೃಷಿ ಇಲಾಖೆ ಜಿಲ್ಲೆಯಲ್ಲಿ “ಜಲಾಮೃತ’ ಜಲಾನಯನ ಯೋಜನೆಯಡಿ 22,082 ಹೆಕ್ಟೇರ್‌ ಪ್ರದೇಶದಲ್ಲಿ ನೀರು ಮತ್ತು ಮಣ್ಣು ಸಂರಕ್ಷಣೆ ಚಟುವಟಿಕೆ ಮೂಲಕ ಜಲಸಂಪನ್ಮೂಲ ಕ್ರೋಡೀಕರಣ ಕಾರ್ಯ ಕೈಗೊಂಡಿದೆ.

ಜಲಾಮೃತ ಜಲಾನಯನ ಯೋಜನೆಯಡಿ ಪ್ರಮುಖವಾಗಿ ನೀರು ಮತ್ತು ಮಣ್ಣು ಸಂರಕ್ಷಣೆ ಕಾಮಗಾರಿಗಳಾದ ಮಣ್ಣಿನ ಬದು, ಕೃಷಿ ಹೊಂಡ, ನೀರಿನ ಕಾಲುವೆ, ಕೊಳವೆಬಾವಿ ಪುನರುಜ್ಜೀವನ, ಕೃಷಿ ಅರಣ್ಯ, ತೋಟಗಾರಿಕೆ ಇತ್ಯಾದಿ ಕಾಮಗಾರಿಗಳನ್ನು ಕೈಗೊಂಡಿದೆ.

ಇದೀಗ ರಾಣಿಬೆನ್ನೂರು ತಾಲೂಕಿನಲ್ಲಿ 2,710 ಹೆಕ್ಟೇರ್‌ ಪ್ರದೇಶದ ಚಟುವಟಿಕೆ ನಡೆಯುತ್ತಿದೆ. ಈ ಭಾಗದ ಮೈದೂರು ಉಪಜಲಾನಯನ ಪ್ರದೇಶವನ್ನು ಆಯ್ಕೆ ಮಾಡಲಾಗಿದೆ. ಈ ವ್ಯಾಪ್ತಿಯಲ್ಲಿ ಚಿಕ್ಕ ಅರಳಿಹಳ್ಳಿ, ಬೇವಿನಹಳ್ಳಿ, ಗುಡಗೂರ, ಮೈದೂರು, ಕುದರಿಹಾಳ, ಹರನಗಿರಿ, ಯತ್ತಿನಹಳ್ಳಿ ಹೊನ್ನತ್ತಿ, ಕೆರಿಮಲ್ಲಾಪುರ ಒಂಭತ್ತು ಗ್ರಾಮಗಳಲ್ಲಿ ಕಾಮಗಾರಿ ಆರಂಭಿಸಲಾಗಿದೆ. 153ಕ್ಕೂ ಹೆಚ್ಚು ಜನ ಕೂಲಿಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಜಂಟಿ ಕೃಷಿ ನಿರ್ದೇಶಕ ಬಿ. ಮಂಜುನಾಥ ತಿಳಿಸಿದ್ದಾರೆ.

ಮೈದೂರ ಜಲಾನಯನ ಪ್ರದೇಶದಲ್ಲಿ 2,234 ಹೆಕ್ಟೇರ್‌ ಕಂದಕ ಬದು ನಿರ್ಮಾಣ ಕಾರ್ಯ, 518 ಕಲ್ಲಿನ ಕೋಡಿ, 30 ರಬ್ಬಲ್‌ ತಡೆ, 121 ಕೃಷಿಹೊಂಡ, 78 ಎರೆಹುಳ ತೊಟ್ಟಿ, 17 ತಡೆ ಅಣೆಕಟ್ಟು, 489 ಹೆಕ್ಟೇರ್‌ ಪ್ರದೇಶದಲ್ಲಿ ತೋಟಗಾರಿಕೆ, 1203 ಹೆಕ್ಟೇರ್‌ ಪ್ರದೇಶದಲ್ಲಿ ಅರಣ್ಯೀಕರಣ, 50 ಹೆಕ್ಟೇರ್‌ ಪ್ರದೇಶದಲ್ಲಿ ಮೇವು ಅಭಿವೃದ್ಧಿ, 118 ಇಂಗು ಗುಂಡಿ, 18 ದನದ ಕೊಟ್ಟಿಗೆ, 18 ಕುರಿ ಕೊಟ್ಟಿಗೆ ಕಾಮಗಾರಿಗಳ ನಿರ್ಮಾಣದ ಉದ್ದೇಶ ಹೊಂದಲಾಗಿದೆ. ಇದರಲ್ಲಿ 125 ಹೆಕ್ಟೇರ್‌ ಪ್ರದೇಶದಲ್ಲಿ ಈಗಾಗಲೇ ಕಂದಕ ಬದು ನಿರ್ಮಾಣ ಮಾಡಲಾಗಿದೆ.

ನಿತ್ಯ ಈ ಉಪಜಲಾನಯನ ವ್ಯಾಪ್ತಿಯಲ್ಲಿ 250ರಿಂದ 300 ಜನ ಕಾರ್ಮಿಕರಿಗೆ ಕೆಲಸ ನೀಡಲಾಗಿದೆ. ಕೂಲಿಕಾರರಿಗೆ ಕೋವಿಡ್‌ ಸುರಕ್ಷತಾ ಕ್ರಮಗಳ ಕುರಿತು ಜಾಗೃತಿಯ ಜೊತೆಗೆ ಮುಖಗವಸು ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೆಲಸ ನಿರ್ವಹಿಸುತ್ತಿದ್ದಾರೆ.

ಜಿಲ್ಲಾ ಮಾಹಿತಿ: ಹಾವೇರಿ ತಾಲೂಕಿನಲ್ಲಿ 4849.07 ಹೆಕ್ಟೇರ್‌ ಪ್ರದೇಶದ ಜಲಾಯನಯನ ಚಟುವಟಿಕೆ ನಡೆಯುತ್ತಿದೆ. ದೇವಿಹೊಸೂರು ಉಪಜಲಾನಯನ ವ್ಯಾಪ್ತಿಯಲ್ಲಿ ಆಲದಕಟ್ಟಿ, ನಾಗಣೂರು, ದೇವಿಹೊಸೂರು, ಹೊಸಳ್ಳಿ ಹಾಗೂ ವೆಂಕಟಾಪುರ ಗ್ರಾಮಗಳಲ್ಲಿ ಕಾಮಗಾರಿಗಳನ್ನು ಆರಂಭಿಸಲಾಗಿದೆ. ಸವಣೂರು ತಾಲೂಕಿನಲ್ಲಿ 3020.27 ಹೆಕ್ಟೇರ್‌ ಪ್ರದೇಶದ ಚಟುವಟಿಕೆ ನಡೆಯುತ್ತಿದೆ. ಕಳಸೂರು ಉಪಜಲಾನಯನ ವ್ಯಾಪ್ತಿಯಲ್ಲಿ ಕಳಸೂರು ಹಾಗೂ ಹತ್ತಿಮತ್ತೂರು ಗ್ರಾಮಗಳಲ್ಲಿ ಕಾಮಗಾರಿಗಳನ್ನು ಆರಂಭಿಸಲಾಗಿದೆ.

ಶಿಗ್ಗಾಂವ ತಾಲೂಕಿನಲ್ಲಿ 2900.35 ಹೆಕ್ಟೇರ್‌ ಪ್ರದೇಶದ ಚಟುವಟಿಕೆ ನಡೆಯುತ್ತಿದೆ. ಬಂಕಾಪುರ ಉಪಜಲಾನಯನ ವ್ಯಾಪ್ತಿಯಲ್ಲಿ ನಿರಲಕಟ್ಟಿ, ಬಿಸಲಹಳ್ಳಿ, ಮುನವಳ್ಳಿ, ಕುರಸಾಪುರ, ನಾರಾಯಣಪುರ ಹಾಗೂ ಕಲ್ಯಾಣ ಗ್ರಾಮಗಳಲ್ಲಿ ಕಾಮಗಾರಿಗಳನ್ನು ಆರಂಭಿಸಲಾಗಿದೆ. ಬ್ಯಾಡಗಿ ತಾಲೂಕಿನಲ್ಲಿ 2850.36 ಹೆಕ್ಟೇರ್‌ ಪ್ರದೇಶದ

ಚಟುವಟಿಕೆ ನಡೆಯುತ್ತಿದೆ. ಹೆಡಿಗೊಂಡ ಉಪಜಲಾನಯನ ವ್ಯಾಪ್ತಿಯಲ್ಲಿ ಚಿನ್ನಿಕಟ್ಟಿ, ತಿಪ್ಪಲಾಪುರ, ನಾಗಾಪುರ, ಹೆಡಿಗೊಂಡ, ಬಡಮಲ್ಲಿ ಹಾಗೂ ದಾಸನಕೊಪ್ಪ ಗ್ರಾಮಗಳಲ್ಲಿ ಕಾಮಗಾರಿ ಆರಂಭಿಸಲಾಗಿದೆ. ಹಾನಗಲ್‌ ತಾಲೂಕಿನಲ್ಲಿ 2765.36 ಹೆಕ್ಟೇರ್‌ ಪ್ರದೇಶದ ಚಟುವಟಿಕೆ ನಡೆಯುತ್ತಿದೆ. ಉಪ್ಪಣಸಿ ಉಪಜಲಾನಯನ ವ್ಯಾಪ್ತಿಯಲ್ಲಿ ಚಿನ್ನಿಕಟ್ಟಿ, ತಿಪ್ಪಲಾಪುರ, ನಾಗಾಪುರ, ಹೆಡಿಗೊಂಡ, ಬಡಮಲ್ಲಿ ಹಾಗೂ ದಾಸನಕೊಪ್ಪ ಗ್ರಾಮಗಳಲ್ಲಿ ಕಾಮಗಾರಿಗಳನ್ನು ಆರಂಭಿಸಲಾಗಿದೆ. ಹಿರೇಕೆರೂರು ತಾಲೂಕಿನಲ್ಲಿ 2986.49 ಹೆಕ್ಟೇರ್‌ ಪ್ರದೇಶದ ಚಟುವಟಿಕೆ ನಡೆಯುತ್ತಿದೆ. ಅಣಜಿ ಉಪಜಲಾನಯನ ಪ್ರದೇಶವನ್ನು ಆಯ್ಕೆ ಮಾಡಲಾಗಿದೆ. ಈ ವ್ಯಾಪ್ತಿಯಲ್ಲಿ ನಾಗವಂದ, ತಡಕನಹಳ್ಳಿ, ಅಣಜಿ ಹಾಗೂ ಇಸ್ರಾಮಪುರ ಗ್ರಾಮಗಳಲ್ಲಿ ಕಾಮಗಾರಿಗಳನ್ನು ಆರಂಭಿಸಲಾಗಿದೆ.

ಒಟ್ಟು ಜಿಲ್ಲೆಯ ಏಳು ತಾಲೂಕುಗಳಲ್ಲಿ 7017 ಮಾನವ ದಿನಗಳನ್ನು ಸೃಜಿಸಿ 226 ಕಾಮಗಾರಿ ಕೈಗೊಳ್ಳಲಾಗಿದ್ದು, 493 ಹೆಕ್ಟೇರ್‌ ಪ್ರದೇಶದಲ್ಲಿ ಕಂದಕ ಬದು ನಿರ್ಮಾಣ ಕೈಗೊಳ್ಳಲಾಗಿದೆ ಹಾಗೂ 2393 ಕೂಲಿಕಾರರಿಗೆ ಕೆಲಸ ನೀಡಲಾಗಿದೆ. ಕಾಮಗಾರಿಗಳು ಪ್ರಗತಿಯಲ್ಲಿವೆ.

ಕೋವಿಡ್ ಲಾಕ್‌ಡೌನ್‌ನಿಂದಾಗಿ ಬೇರೆಡೆ ಹೋಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಸ್ವಾಭಿಮಾನದಿಂದ ದುಡಿಯಲು ಕೂಲಿ ಕೆಲಸ ತಪ್ಪಲ್ಲ. ಈ ಕಾರಣದಿಂದ ಉದ್ಯೋಗ ಖಾತ್ರಿ ಕೂಲಿಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದೇನೆ. ಇದರಿಂದ ನನ್ನ ಕುಟುಂಬದ ಜೀವನ  ಸರಳವಾಗಿದೆ. ಅವಕಾಶ ಸಿಕ್ಕರೆ ಮುಂದಿನ ದಿನಗಳಲ್ಲಿ ಶಿಕ್ಷಕಳಾಗಿ ಕೆಲಸ ಮಾಡುತ್ತೇನೆ. ಸದ್ಯದ ಪರಿಸ್ಥಿತಿಯಲ್ಲಿ ನಮ್ಮ ಕಷ್ಟಗಳ ನಿರ್ವಹಣೆಗೆ ಉದ್ಯೋಗ ಖಾತ್ರಿ ಕೆಲಸ ಆಸರೆಯಾಗಿದೆ.  –ಲಾಲವ್ವ ಲಮಾಣಿ, ಪದವೀಧರೆ

ಟಾಪ್ ನ್ಯೂಸ್

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.