ಶಾಲೆಗಳ ಪ್ರಾರಂಭ ರಾಜ್ಯದ ಶಿಕ್ಷಣ ಸಂಸ್ಥೆಗಳಿಗೆ ಹೊಸ ಮಾರ್ಗಸೂಚಿ


Team Udayavani, May 15, 2020, 10:11 PM IST

ರಾಜ್ಯದ ಶಿಕ್ಷಣ ಸಂಸ್ಥೆಗಳಿಗೆ ಹೊಸ ಮಾರ್ಗಸೂಚಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಕೋವಿಡ್ ಕಾಟದಿಂದಾಗಿ ಹೊಸ ಶೈಕ್ಷಣಿಕ ವರ್ಷ ರಾಜ್ಯದಲ್ಲಿ ಯಾವಾಗ ಪ್ರಾರಂಭವಾಗುತ್ತದೆ ಎಂಬ ಗೊಂದಲ ಇನ್ನೂ ಮುಂದುವರೆದಿದೆ.

ಈ ನಡುವೆ ಹೊಸ ಮಾರ್ಗಸೂಚಿಯೊಂದನ್ನು ಬಿಡುಗಡೆಗೊಳಿಸಿರುವ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ರಾಜ್ಯದ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅನುಸರಿಸಬೇಕಾದ ಕ್ರಮಗಳ ಕುರಿತಾಗಿ ಮಾರ್ಗಸೂಚಿಯೊಂದನ್ನು ಇಂದು ಬಿಡುಗಡೆ ಮಾಡಿದೆ.

ಮಾರ್ಗಸೂಚಿಯಲ್ಲಿನ ಪ್ರಮುಖ ಸೂಚನೆಗಳು ಹೀಗಿವೆ:

– ಶಾಲಾ ತರಗತಿ ಕೊಠಡಿಗಳಲ್ಲಿ ಸಾಮಾಜಿಲ ಅಂತರ ಕಾಯ್ದುಕೊಳ್ಳಲು ಒಂದು ಡೆಸ್ಕ್ ನಲ್ಲಿ ಮೂವರ ವಿದ್ಯಾರ್ಥಿಗಳಿಗೆ ಮಾತ್ರ ಕುಳಿತುಕೊಳ್ಳಲು ಅವಕಾಶ.

– ಈ ಸಂದರ್ಭದಲ್ಲಿ ಕೊಠಡಿಗಳ ಕೊರತೆ ಕಂಡುಬಂದರೆ ಶಾಲಾ ಗ್ರಂಥಾಲಯ ಕೊಠಡಿ, ಕ್ರೀಡಾ ಕೊಠಡಿ ಮತ್ತು ಕಂಪ್ಯೂಟರ್ ಕೊಠಡಿಗಳನ್ನು ಬಳಸಿಕೊಳ್ಳಬಹುದು.

– ಇನ್ನು ಜನವಸತಿ ಪ್ರದೇಶಗಳಲ್ಲಿ ಲಭ್ಯವಿರುವ ಸಮುದಾಯ ಭವನಗಳು, ಸರಕಾರಿ ಕಟ್ಟಡಗಳು ಹಾಗೂ ಮಧ್ಯಾಹ್ನದ ಬಳಕ ಲಭ್ಯವಿರುವ ಅಂಗನವಾಡಿ ಕಟ್ಟಡಗಳನ್ನು ಈ ಉದ್ದೇಶಕ್ಕಾಗಿ ಬಳಸಿಕೊಳ್ಳುವಂತೆ ಸೂಚಿಸಲಾಗಿದೆ.

ಶಿಪ್ಟ್ (ಪಾಳಿ) ಪದ್ಧತಿಯಲ್ಲಿ ತರಗತಿಗಳನ್ನು ನಡೆಸುವುದು:

ರಾಜ್ಯದಲ್ಲಿ 1 ರಿಂದ 5 ನೇ ತರಗತಿವರೆಗಿನ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇರುವುದರಿಂದ ಇವುಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಪಾಳಿ ವ್ಯವಸ್ಥೆಯಲ್ಲಿ ತರಗತಿಗಳನ್ನು ನಡೆಸಲು ಸೂಚಿಸಲಾಗಿದೆ.

1 ರಿಂದ 7ನೇ ತರಗತಿವರಗಿನ ಶಾಲೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ತರಗತಿ ನಡೆಸಲು ಲಭ್ಯ ಎಲ್ಲಾ ವ್ಯವಸ್ಥೆಗಳು ಸಾಲದಾದಲ್ಲಿ ಪಾಳಿ ಪದ್ದತಿಯಲ್ಲಿ ತರಗತಿಗಳನ್ನು ನಡೆಸಲು ಸೂಚಿಸಲಾಗಿದೆ.

– 1 ಮತ್ತು 2ನೇ ತರಗತಿ ನಲಿ ಕಲಿ ಮಕ್ಕಳನ್ನು ಒಟ್ಟಿಗೆ ಸೇರ್ಪಡೆ ಮಾಡಿ ಬೋಧನೆಗೆ ಅವಕಾಶ.

– 1ರಿಂದ 7ನೇ ತರಗತಿಯವರೆಗೆ ಶಿಕ್ಷಕರ ಕೊರತೆ ಇದ್ದಲ್ಲಿ ಸ್ಥಳೀಯವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅವಕಾಶ.

– ಪ್ರಾಥಮಿಕ ಶಾಲೆಗಳಲ್ಲಿಯೂ ಪದವಿಗಳನ್ನು ಪಡೆದಿರುವ ಶಿಕ್ಷಕರು ಲಭ್ಯವಿರುವುದರಿಂದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಪರಸ್ಪರ ಸಮಾಲೋಚನೆ ನಡೆಸಿ ಪ್ರೌಢ ಶಾಲಾ ಶಿಕ್ಷಕರು 6 ಮತ್ತು 7 ನೇ ತರಗತಿಗಳಿಗೂ ಪ್ರಾಥಮಿಕ ಶಾಲೆಗಳಲ್ಲಿ ಪದವಿ ಹೊಂದಿರುವ ಶಿಕ್ಷಕರು 8 ಮತ್ತು 9ನೇ ತರಗತಿಗಳಿಗೂ ಬೋಧಿಸಲು ಅವಕಾಶ.

– ಸದ್ಯಕ್ಕೆ ಪಿಯು ತರಗತಿಗಳು 10 ಗಂಟೆಯಿಂದ 3.30ರವರೆಗೆ ನಡೆಯುತ್ತಿವೆ ಆದರೆ ಈ ತರಗತಿಗಳನ್ನು ಬೆಳಿಗ್ಗೆ 8.30 ರಿಂದ 12.30ರವರೆಗೆ ನಡೆಸಿದಲ್ಲಿ ಪ್ರೌಢಶಾಲಾ ಕೊಠಡಿಗಳನ್ನು ಬಳಸಿಕೊಂಡು ಪಿಯು ತರಗತಿಗಳನ್ನು ಸೂಕ್ತ ಸಾಮಾಜಿಕ ಅಂತರದೊಂದಿಗೆ ನಡೆಸಲು ಸೂಚನೆ.

– ರಾಜ್ಯದ ತಾಲೂಕು/ಹೋಬಳಿ ಕೇಂದ್ರಗಳಲ್ಲಿ ಕೆಲವು ಶಾಲೆಗಳು ಮಕ್ಕಳ ಕೊರತೆಯಿಂದ ಮುಚ್ಚಲ್ಪಟ್ಟಿದ್ದು, ಅವುಗಳನ್ನು ಅಗತ್ಯ ದುರಸ್ತಿ ಮಾಡಿಸಿ ಪ್ರೌಢಶಾಲೆಯ ಕೆಲವು ತರಗತಿಗಳನ್ನು ಅಲ್ಲಿಗೆ ಸ್ಥಳಾಂತರಿಸಲು ಸೂಚನೆ.

ಪಾಳಿ ಪದ್ಧತಿಯಲ್ಲಿ ತರಗತಿ ಸಮಯಗಳ ವಿಂಗಡನೆ:
ಮೊದಲನೇ ಪಾಳಿ ಸಮಯ ಬೆಳಿಗ್ಗೆ 7.50ರಿಂದ ಪ್ರಾರಂಭಗೊಂಡು ಮಧ್ಯಾಹ್ನ 12.20ರವರೆಗೆ ನಡೆಸುವುದು ಹಾಗೂ ಎರಡನೇ ಪಾಳಿಯನ್ನು ಮಧ್ಯಾಹ್ನ 12.10ರಿಂದ ಸಂಜೆ 5.00 ಗಂಟೆಯವರೆಗೆ ನಡೆಸಲು ಸಮಾಲೋಚನೆ ಮಾಡುವಂತೆ ಸೂಚನೆ.

– ಖಾಸಗಿ ಶಾಲೆಗಳ ಆಡಳಿತ ಮಂಡಳಿಯವರು ಸಾರಿಗೆ ವ್ಯವಸ್ಥೆಯನ್ನು ಒದಗಿಸುವಾಗ ವಿದ್ಯಾರ್ಥಿಗಳನ್ನು ವಾಹನಗಳಲ್ಲಿ ಕರೆತರುವಾಗ ಸೂಕ್ತ ಸಾಮಾಜಿಕ ಅಂತರ ನಿಯಮಗಳನ್ನು ಪಾಲನೆ ಮಾಡಲು ನಿರ್ದೇಶನ ನೀಡಲಾಗಿದೆ.

ಟಾಪ್ ನ್ಯೂಸ್

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.