ಅರ್ಜಿ ಸ್ವೀಕರಿಸುತ್ತಿಲ್ಲ “ಸೇವಾ ಸಿಂಧು’


Team Udayavani, May 16, 2020, 5:25 AM IST

ಅರ್ಜಿ ಸ್ವೀಕರಿಸುತ್ತಿಲ್ಲ “ಸೇವಾ ಸಿಂಧು’

ಗಂಗಾವತಿ: ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವವರಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಭರಪೂರ ಕೊಡುಗೆ ನೀಡಿದ್ದಾರೆ. ಆದರೆ ಫಲಾನುಭವಿಗಳಿಗೆ ಸೇವಾ ಸಿಂಧು ವೆಬ್‌ ಸೈಟ್‌ ಮೂಲಕ ಅರ್ಜಿ ಹಾಕಲು ಆಗುತ್ತಿಲ್ಲ.

ಹಲವು ದಾಖಲೆಗಳ ಸಮೇತ ಅರ್ಜಿ ಸಲ್ಲಿಸಲು ಮುಂದಾದರೆ ಸಾಫ್ಟವೇರ್‌ ತಯಾರಿಕೆ ಹಂತದಲ್ಲಿದ್ದು, ಶೀಘ್ರ ಅರ್ಜಿ ಸ್ವೀಕಾರ ಮಾಡಲಾಗುತ್ತದೆ ಎನ್ನುತ್ತಾರೆ ಸಂಬಂಧಿಸಿದವರು. ಅಸಂಘಟಿತ ವಲಯದ ಕಟ್ಟಡ ಕಾರ್ಮಿಕರು ಕಾರ್ಮಿಕ ಇಲಾಖೆಯಲ್ಲಿ ದಾಖಲಾತಿ ಸಮೇತ ಅರ್ಜಿ ಸಲ್ಲಿಸಿದ್ದು, ಈಗಾಗಲೇ ಮೊದಲ ಹಂತದಲ್ಲಿ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬರಿಗೂ 2 ಸಾವಿರ ಮತ್ತು 5 ಸಾವಿರ ರೂ. ಖಾತೆಗೆ ಜಮಾ ಮಾಡಲಾಗಿದೆ. ಉಳಿದಂತೆ ಅರ್ಜಿ ಸಲ್ಲಿಸಿದ ಗುರುತಿನ ಚೀಟಿ ಇರುವ ಪ್ರತಿಯೊಬ್ಬ ಕಟ್ಟಡ ಕಾರ್ಮಿಕನಿಗೆ 5 ಸಾವಿರ ರೂ. ಜಮಾ ಮಾಡಲಾಗುತ್ತದೆ.

ಆಟೋ-ಟ್ಯಾಕ್ಸಿ, ನೇಕಾರ, ಮಡಿವಾಳ ಸೇರಿ ಕುಶಲಕರ್ಮಿಗಳಿಗೂ ಸರಕಾರ ಸಂಕಷ್ಟ ಪರಿಹಾರ ನೀಡಲು ಮುಂದಾಗಿದ್ದು, ಸೇವಾ ಸಿಂಧು ವೆಬ್‌ ಮೂಲಕ ಅಗತ್ಯ ಜಾತಿ ಪ್ರಮಾಣ ಪತ್ರ, ಕುಶಲಕರ್ಮಿಗಳಾಗಿದ್ದರೆ ಕಾರ್ಮಿಕ ಇಲಾಖೆಯಲ್ಲಿ ಪಡೆದ ಗುರುತಿನ ಚೀಟಿ, ಅಸಂಘಟಿತ ವಲಯದವರಾಗಿದ್ದರೆ. ನಗರಸಭೆಯಿಂದ ಪಡೆದ ಗುರುತಿನ ಚೀಟಿ ದಾಖಲಾತಿ ಜತೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ನಗರ ಪ್ರದೇಶದಲ್ಲಿ ಹಣ್ಣು, ತರಕಾರಿ, ಚಪ್ಪಲಿ ರಿಪೇರಿ ಮಾಡುವವರು ಗೂಡಂಗಡಿಗಳ ಮೂಲಕ ವ್ಯಾಪಾರ ಮಾಡುವವರು ಜೋಗೇರ್‌, ಮಾಂಸ ಮಾರಾಟಗಾರರು, ಹೋಟೆಲ್‌ಗ‌ಳಲ್ಲಿ ಕೆಲಸ ಮಾಡುವವರು ಗಂಜ್‌ ಮತ್ತು ಬಜಾರ್‌ ಹಮಾಲಿ ಕಾರ್ಮಿಕರಿಗೆ ಸರಕಾರ ಸಂಕಷ್ಟ ಪರಿಹಾರ ಘೋಷಿಸಿಲ್ಲ. ವಿವಿಧ ಕಾರ್ಮಿಕ ಸಂಘಟನೆಗಳು ಅಸಂಘಟಿತ ವಲಯದಲ್ಲಿ ಇವರನ್ನು ಪರಿಗಣಿಸುವಂತೆ ಸರಕಾರಕ್ಕೆ ಒತ್ತಾಯಿಸಿವೆ.

ಅಸಂಘಟಿತ ವಲಯದ ಕಟ್ಟಡ ಕಾರ್ಮಿಕರಿಗೆ ಈಗಾಗಲೇ ಮೊದಲ ಹಂತದಲ್ಲಿ ಅವರ ಬ್ಯಾಂಕ್‌ ಖಾತೆಗೆ ಹಣ ಜಮಾ ಆಗಿದ್ದು, ಮಡಿವಾಳರು, ನೇಕಾರರು ಮತ್ತು ಕುಶಲಕರ್ಮಿಗಳಿಗೆ ಸೇವಾ ಸಿಂಧು ವೆಬ್‌ಸೈಟ್‌ನಲ್ಲಿ ಅರ್ಜಿ ಸ್ವೀಕರಿಸಿ ಹಣ ಜಮಾ ಮಾಡಲಾಗುತ್ತದೆ. ಸೇವಾ ಸಿಂಧು ಆನ್‌ಲೈನ್‌ನಲ್ಲಿ ಅರ್ಜಿ ಸ್ವೀಕಾರ ಮಾಡಲು ಸಾಫ್ಟವೇರ್‌ ತಯಾರಿಕೆ ಪೂರ್ಣಗೊಂಡಿದ್ದು, ಶೀಘ್ರ ಅರ್ಜಿ ಸ್ವೀಕರಿಸಲಾಗುತ್ತದೆ. –ಶಿವರಾಂ ಹೆಬ್ಟಾರ್‌, ಕಾರ್ಮಿಕ ಖಾತೆ ಸಚಿವ

ವಾರದಿಂದ ಕಂಪ್ಯೂಟರ್‌ ಕೇಂದ್ರಗಳಿಗೆ ಸೇವಾ ಸಿಂಧು ವೆಬ್‌ಸೈಟ್‌ನಲ್ಲಿ ಸಂಕಷ್ಟ ಪರಿಹಾರ ಭತ್ಯೆ ಪಡೆಯಲು ಅಲೆದಾಡುತ್ತಿದ್ದು ವೆಬ್‌ಸೈಟ್‌ ಕೆಲಸ ಮಾಡುತ್ತಿಲ್ಲ. ಇದರಿಂದ ಅರ್ಜಿ ಸಲ್ಲಿಸಲು ಆಗುತ್ತಿಲ್ಲ. ಸರಕಾರ ಈಗಾಗಲೇ ಎರಡನೇ ಹಂತದ ಪ್ಯಾಕೇಜ್‌ ಘೋಷಿಸಿದ್ದು, ಮೊದಲ ಹಂತದ ಯೋಜನೆಗೆ ಅರ್ಜಿ ಸಲ್ಲಿಕೆಗೆ ಸಾಫ್ಟವೇರ್‌ ತಯಾರಿಕೆ ಇನ್ನೂ ಪೂರ್ಣಗೊಂಡಿಲ್ಲ. ಸಂಕಷ್ಟದಲ್ಲಿರುವವರಿಗೆ ಬೇಗ ಪರಿಹಾರ ಹಣ ನೀಡಿದರೆ ಅನುಕೂಲವಾಗುತ್ತದೆ.- ರಾಮಣ್ಣ ವಡ್ರಟ್ಟಿ, ಟ್ಯಾಕ್ಸಿ ಚಾಲಕ.

 

-ಕೆ.ನಿಂಗಜ್ಜ

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.