ನಾಪತ್ತೆ ಆಗಿದ್ದ ಸೋಂಕಿತ ಬೆಂಗಳೂರಲ್ಲಿ ಪತ್ತೆ


Team Udayavani, May 16, 2020, 6:25 AM IST

napatte

ಕೋಲಾರ: ಮಂಡ್ಯ ಮೂಲದ ವ್ಯಕ್ತಿಯಿಂದ ಜಿಲ್ಲಾ ಕೇಂದ್ರ ಕೋಲಾರಕ್ಕೂ ಕೋವಿಡ್‌ 19 ಸೋಂಕು ಕಾಲಿಟ್ಟಿದ್ದು, ನಾಪತ್ತೆ ಆಗಿದ್ದ ಸೋಂಕಿತ ವ್ಯಕ್ತಿ ಬೆಂಗಳೂರಿನ ಬನಶಂಕರಿಯಲ್ಲಿ ಪತ್ತೆ ಆಗಿದ್ದಾನೆ.

ನಗರದ ಗಾಂಧಿನಗರದಲ್ಲಿ ಎರಡು  ವರ್ಷಗಳಿಂದಲೂ ಬಾಡಿಗೆಗೆ ಮನೆಯೊಂದರಲ್ಲಿ ವಾಸವಾಗಿದ್ದ ಸೋಂಕಿತವ್ಯಕ್ತಿ, ಲಾಕ್‌ಡೌನ್‌ಗಿಂತಲೂ ಮುಂಚಿತ ವಾಗಿಯೇ ಅಪಘಾತದಲ್ಲಿ ಕಾಲು ಗಾಯಗೊಂಡು ಮಂಡ್ಯಕ್ಕೆ ತೆರಳಿದ್ದ ಎನ್ನಲಾಗಿದೆ. ಮೇ 11 ರಂದು  ಕೋಲಾರದ ಮನೆಗೆ ವಾಪಸ್ಸಾಗಿದ್ದ ಆತನನ್ನು ಕ್ವಾರಂಟೈನ್‌ ನಲ್ಲಿಟ್ಟು, ಅವರ ಗಂಟಲ ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಶುಕ್ರವಾರ ಪ್ರಯೋಗಾಲಯದ ವರದಿಯಲ್ಲಿ ಪಾಸಿಟಿವ್‌ ಎಂದು ಬಂದಿದೆ.

ಮೊಬೈಲ್‌ ನಂಬರ್‌ ಟ್ರ್ಯಾಕ್‌: ಈ ಹಿನ್ನೆಲೆಯಲ್ಲಿ ಪಾಸಿಟಿವ್‌ ವ್ಯಕ್ತಿಯ ಮನೆಯ ಸುತ್ತಮುತ್ತಲೂ ಕಟ್ಟೆಚ್ಚರವಹಿಸಲು ಆಗಮಿಸಿದ ಆರೋಗ್ಯ ಹಾಗೂ ಪೊಲೀಸ್‌ ಸಿಬ್ಬಂದಿಗೆ ಆಚ್ಚರಿ ಕಾದಿತ್ತು. ಸೋಂಕಿತ ವ್ಯಕ್ತಿ ಮನೆಯಲ್ಲಿರದೆ  ನಾಪತ್ತೆಯಾಗಿದ್ದು, ತೀವ್ರ ಹುಡುಕಾಟ ನಡೆಸಿದ್ದು, ಪತ್ತೆ ಆಗಲಿಲ್ಲ. ನಂತರ ಆತ ಬೆಂಗಳೂರಿಗೆ ತೆರಳಿರುವ ಮಾಹಿತಿ ತಿಳಿದಿದೆ. ನಂತರ ಕಾರ್ಯಪ್ರವೃತ್ತರಾದ ಪೊಲೀಸರು ಆತನ ಮೊಬೈಲ್‌ ನಂಬರ್‌ ಟ್ರ್ಯಾಕ್‌ ಮಾಡಿ ಬೆಂಗಳೂರಿನ  ಬನಶಂಕರಿಯಲ್ಲಿ ಹಿಡಿದು ಸ್ಥಳೀಯ ಕೊವಿಡ್‌-19 ಆಸ್ಪತ್ರೆಗೆ ಸೇರಿಸಿದ್ದಾರೆ.

ಮನೆ ಸುತ್ತ ಕಟ್ಟೆಚ್ಚರ: ಸಂಜೆ ವೇಳೆಗೆ ಗಾಂಧಿನಗರದಲ್ಲಿ ಅವರು ವಾಸವಾಗಿದ್ದ ಮನೆಯ ಸುತ್ತಮುತ್ತ ಹಾಗೂ ರಸ್ತೆಯಲ್ಲಿ ವಾಹನಗಳ ಓಡಾಟ ಮತ್ತು ಜನರ ಸಂಚಾರವನ್ನು ನಿರ್ಬಂಧಿಸಲಾಗಿದೆ. ಸೋಂಕು ನಿವಾರಕ ಔಷಧಿ ಸಿಂಪಡಣೆ  ಮಾಡಿ ಕಟ್ಟೆಚ್ಚರ ವಹಿಸಲಾಗಿದೆ.

ಮತ್ತೂಂದು ಪ್ರಕರಣ: ಮುಳಬಾಗಿಲು ತಾಲೂಕಿನಲ್ಲಿ ಐದು ಪಾಸಿಟಿವ್‌ ಪ್ರಕರಣಗಳು ಪತ್ತೆಯಾದ ನಂತರ ಕೆಜಿಎಫ್ ತಾಲೂಕಿನ ರಾಬರ್ಟ್‌ಸನ್‌ಪೇಟೆ ಹೋಬಳಿ ಬೈನೇನಪಲ್ಲಿ ಗ್ರಾಮದಲ್ಲಿ ಪಾಸಿಟಿವ್‌ ಪ್ರಕರಣವೊಂದು ಯುವಕನಲ್ಲಿ  ಪತ್ತೆಯಾಗಿದೆ.

992 ಸಂಖ್ಯೆಯ ಈತನು ಚನ್ನೈಗೆ ತೆರಳಿದ್ದ ಇತಿಹಾಸ ಹೊಂದಿದ್ದು, ಈ ಸಂದರ್ಭದಲ್ಲಿ ಪಾಸಿಟಿವ್‌ ಸೋಂಕು ತಗುಲಿರಬಹುದೆಂದು ಶಂಕಿಸಲಾಗಿದೆ. ಈತನನ್ನು ಅಧಿಕೃತ ಕೊವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.  ಸದ್ಯಕ್ಕೆ ಬೈನೇಪಲ್ಲಿಯಲ್ಲಿ ಈತನ ಪ್ರಥಮ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ. ಇದರಿಂದ ಜಿಲ್ಲೆಯ ಪಾಸಿಟಿವ್‌ ಪ್ರಕರಣಗಳು ಅಧಿಕೃತವಾಗಿ 7ಕ್ಕೇರಿದೆ.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.