ನಾಪತ್ತೆ ಆಗಿದ್ದ ಸೋಂಕಿತ ಬೆಂಗಳೂರಲ್ಲಿ ಪತ್ತೆ
Team Udayavani, May 16, 2020, 6:25 AM IST
ಕೋಲಾರ: ಮಂಡ್ಯ ಮೂಲದ ವ್ಯಕ್ತಿಯಿಂದ ಜಿಲ್ಲಾ ಕೇಂದ್ರ ಕೋಲಾರಕ್ಕೂ ಕೋವಿಡ್ 19 ಸೋಂಕು ಕಾಲಿಟ್ಟಿದ್ದು, ನಾಪತ್ತೆ ಆಗಿದ್ದ ಸೋಂಕಿತ ವ್ಯಕ್ತಿ ಬೆಂಗಳೂರಿನ ಬನಶಂಕರಿಯಲ್ಲಿ ಪತ್ತೆ ಆಗಿದ್ದಾನೆ.
ನಗರದ ಗಾಂಧಿನಗರದಲ್ಲಿ ಎರಡು ವರ್ಷಗಳಿಂದಲೂ ಬಾಡಿಗೆಗೆ ಮನೆಯೊಂದರಲ್ಲಿ ವಾಸವಾಗಿದ್ದ ಸೋಂಕಿತವ್ಯಕ್ತಿ, ಲಾಕ್ಡೌನ್ಗಿಂತಲೂ ಮುಂಚಿತ ವಾಗಿಯೇ ಅಪಘಾತದಲ್ಲಿ ಕಾಲು ಗಾಯಗೊಂಡು ಮಂಡ್ಯಕ್ಕೆ ತೆರಳಿದ್ದ ಎನ್ನಲಾಗಿದೆ. ಮೇ 11 ರಂದು ಕೋಲಾರದ ಮನೆಗೆ ವಾಪಸ್ಸಾಗಿದ್ದ ಆತನನ್ನು ಕ್ವಾರಂಟೈನ್ ನಲ್ಲಿಟ್ಟು, ಅವರ ಗಂಟಲ ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಶುಕ್ರವಾರ ಪ್ರಯೋಗಾಲಯದ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ.
ಮೊಬೈಲ್ ನಂಬರ್ ಟ್ರ್ಯಾಕ್: ಈ ಹಿನ್ನೆಲೆಯಲ್ಲಿ ಪಾಸಿಟಿವ್ ವ್ಯಕ್ತಿಯ ಮನೆಯ ಸುತ್ತಮುತ್ತಲೂ ಕಟ್ಟೆಚ್ಚರವಹಿಸಲು ಆಗಮಿಸಿದ ಆರೋಗ್ಯ ಹಾಗೂ ಪೊಲೀಸ್ ಸಿಬ್ಬಂದಿಗೆ ಆಚ್ಚರಿ ಕಾದಿತ್ತು. ಸೋಂಕಿತ ವ್ಯಕ್ತಿ ಮನೆಯಲ್ಲಿರದೆ ನಾಪತ್ತೆಯಾಗಿದ್ದು, ತೀವ್ರ ಹುಡುಕಾಟ ನಡೆಸಿದ್ದು, ಪತ್ತೆ ಆಗಲಿಲ್ಲ. ನಂತರ ಆತ ಬೆಂಗಳೂರಿಗೆ ತೆರಳಿರುವ ಮಾಹಿತಿ ತಿಳಿದಿದೆ. ನಂತರ ಕಾರ್ಯಪ್ರವೃತ್ತರಾದ ಪೊಲೀಸರು ಆತನ ಮೊಬೈಲ್ ನಂಬರ್ ಟ್ರ್ಯಾಕ್ ಮಾಡಿ ಬೆಂಗಳೂರಿನ ಬನಶಂಕರಿಯಲ್ಲಿ ಹಿಡಿದು ಸ್ಥಳೀಯ ಕೊವಿಡ್-19 ಆಸ್ಪತ್ರೆಗೆ ಸೇರಿಸಿದ್ದಾರೆ.
ಮನೆ ಸುತ್ತ ಕಟ್ಟೆಚ್ಚರ: ಸಂಜೆ ವೇಳೆಗೆ ಗಾಂಧಿನಗರದಲ್ಲಿ ಅವರು ವಾಸವಾಗಿದ್ದ ಮನೆಯ ಸುತ್ತಮುತ್ತ ಹಾಗೂ ರಸ್ತೆಯಲ್ಲಿ ವಾಹನಗಳ ಓಡಾಟ ಮತ್ತು ಜನರ ಸಂಚಾರವನ್ನು ನಿರ್ಬಂಧಿಸಲಾಗಿದೆ. ಸೋಂಕು ನಿವಾರಕ ಔಷಧಿ ಸಿಂಪಡಣೆ ಮಾಡಿ ಕಟ್ಟೆಚ್ಚರ ವಹಿಸಲಾಗಿದೆ.
ಮತ್ತೂಂದು ಪ್ರಕರಣ: ಮುಳಬಾಗಿಲು ತಾಲೂಕಿನಲ್ಲಿ ಐದು ಪಾಸಿಟಿವ್ ಪ್ರಕರಣಗಳು ಪತ್ತೆಯಾದ ನಂತರ ಕೆಜಿಎಫ್ ತಾಲೂಕಿನ ರಾಬರ್ಟ್ಸನ್ಪೇಟೆ ಹೋಬಳಿ ಬೈನೇನಪಲ್ಲಿ ಗ್ರಾಮದಲ್ಲಿ ಪಾಸಿಟಿವ್ ಪ್ರಕರಣವೊಂದು ಯುವಕನಲ್ಲಿ ಪತ್ತೆಯಾಗಿದೆ.
992 ಸಂಖ್ಯೆಯ ಈತನು ಚನ್ನೈಗೆ ತೆರಳಿದ್ದ ಇತಿಹಾಸ ಹೊಂದಿದ್ದು, ಈ ಸಂದರ್ಭದಲ್ಲಿ ಪಾಸಿಟಿವ್ ಸೋಂಕು ತಗುಲಿರಬಹುದೆಂದು ಶಂಕಿಸಲಾಗಿದೆ. ಈತನನ್ನು ಅಧಿಕೃತ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ಬೈನೇಪಲ್ಲಿಯಲ್ಲಿ ಈತನ ಪ್ರಥಮ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ. ಇದರಿಂದ ಜಿಲ್ಲೆಯ ಪಾಸಿಟಿವ್ ಪ್ರಕರಣಗಳು ಅಧಿಕೃತವಾಗಿ 7ಕ್ಕೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು